AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ‘ಹರಿಕಥೆ ಅಲ್ಲ ಗಿರಿಕಥೆ’ ರಿಲೀಸ್​ ಬಳಿಕ ಹೊಸ ಕಾರು ಖರೀದಿಸಿದ ರಿಷಬ್​ ಶೆಟ್ಟಿ; ಪತ್ನಿ ಪ್ರಗತಿ ಫುಲ್​ ಖುಷ್​

Audi Q7 | Pragathi Shetty: ಮನೆಗೆ ಐಷಾರಾಮಿ ಕಾರು ಬಂದಿರುವುದಕ್ಕೆ ರಿಷಬ್​ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಖುಷಿ ಆಗಿದ್ದಾರೆ. ಈ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

Rishab Shetty: ‘ಹರಿಕಥೆ ಅಲ್ಲ ಗಿರಿಕಥೆ’ ರಿಲೀಸ್​ ಬಳಿಕ ಹೊಸ ಕಾರು ಖರೀದಿಸಿದ ರಿಷಬ್​ ಶೆಟ್ಟಿ; ಪತ್ನಿ ಪ್ರಗತಿ ಫುಲ್​ ಖುಷ್​
ಪ್ರಗತಿ ಶೆಟ್ಟಿ, ರಿಷಬ್​ ಶೆಟ್ಟಿ
TV9 Web
| Updated By: ಮದನ್​ ಕುಮಾರ್​|

Updated on:Jul 03, 2022 | 11:26 AM

Share

ಕನ್ನಡ ಚಿತ್ರರಂಗದಲ್ಲಿ ರಿಷಬ್​ ಶೆಟ್ಟಿ (Rishab Shetty) ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಸಕ್ರಿಯರಾಗಿದ್ದಾರೆ. ಅವರ ಪ್ರತಿ ಸಿನಿಮಾಗಳು ಕೂಡ ಒಂದಿಲ್ಲೊಂದು ರೀತಿಯಲ್ಲಿ ಗಮನ ಸೆಳೆಯುತ್ತಿವೆ. ಕೆಲವೇ ದಿನಗಳ ಹಿಂದೆ ಅವರ ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ ಬಿಡುಗಡೆ ಆಯಿತು. ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಡುವಲ್ಲಿ ಈ ಚಿತ್ರ ಯಶಸ್ವಿ ಆಯಿತು. ಈ ಸಿನಿಮಾ ರಿಲೀಸ್​ ಆಗುತ್ತಿದ್ದಂತೆಯೇ ರಿಷಬ್​ ಶೆಟ್ಟಿ ಅವರ ಮನೆಗೆ ಹೊಸ ಕಾರು ಬಂದಿದೆ. ಹೌದು, ದುಬಾರಿ ಐಷಾರಾಮಿ ಕಾರನ್ನು ಅವರು ಖರೀದಿಸಿದ್ದಾರೆ. ಅದರ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ ಪತ್ನಿ ಪ್ರಗತಿ ಶೆಟ್ಟಿ (Pragathi Shetty). ‘ಆಡಿ ಕ್ಯೂ7’ ಕಾರನ್ನು (Audi Q7) ಖರೀದಿಸಿರುವ ರಿಷಬ್​ ಶೆಟ್ಟಿ ಅವರಿಗೆ ಅಭಿಮಾನಿಗಳು ಮತ್ತು ಸ್ನೇಹಿತರು ಅಭಿನಂದನೆ ತಿಳಿಸುತ್ತಿದ್ದಾರೆ.

ರಿಷಬ್​ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಅವರು ಕೂಡ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಹಲವಾರು ಸಿನಿಮಾಗಳಿಗೆ ಅವರು ಕಾಸ್ಟ್ಯೂಮ್​ ಡಿಸೈನ್​ ಮಾಡಿದ್ದಾರೆ. ಮನೆಗೆ ಬಂದಿರುವ ಹೊಸ ಕಾರಿನ ಎದುರು ನಿಂತು ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ. ‘ಆಡಿ ಕ್ಯೂ7 ಹೊಸದಾಗಿ ಸೇರ್ಪಡೆ ಆಯ್ತು. ನಿಮ್ಮ ಪರಿಶ್ರಮ ಮತ್ತು ಬದ್ಧತೆ ಬಗ್ಗೆ ಯಾವಾಗಲೂ ಹೆಮ್ಮೆ ಆಗುತ್ತದೆ’ ಎಂದು ಪ್ರಗತಿ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ಕಿರಿಕ್​ ಪಾರ್ಟಿ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಭರ್ಜರಿ ಗೆಲುವು ಕಂಡವರು ರಿಷಬ್​ ಶೆಟ್ಟಿ. ನಂತರ ಅವರು ನಿರ್ದೇಶನ ಮಾಡಿದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ಕಾಸರಗೋಡು’ ಚಿತ್ರ ಕೂಡ ಯಶಸ್ವಿ ಆಯಿತು. ‘ಬೆಲ್​ ಬಾಟಂ’ ಸಿನಿಮಾ ಮೂಲಕ ರಿಷಬ್​ ಶೆಟ್ಟಿ ಹೀರೋ ಆದರು. ಅದರಲ್ಲೂ ಅವರಿಗೆ ದೊಡ್ಡ ಗೆಲುವು ಸಿಕ್ಕಿತು. ಈಗ ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ
Image
ತೆಲುಗು ಸಿನಿಮಾದಲ್ಲಿ ರಿಷಬ್​ ಶೆಟ್ಟಿ; ಸೆನ್ಸೇಷನ್​ ಸೃಷ್ಟಿಸಿದ ಟ್ರೇಲರ್​
Image
‘ಬೆಂಗಳೂರು ಸಿನಿಮೋತ್ಸವಕ್ಕೆ ಈಗ ಪೆದ್ರೊ ಚಿತ್ರ ತಗೊಳ್ಳೋದು ಬೇಡ’: ರಿಷಬ್​ ಶೆಟ್ಟಿ ಖಡಕ್​ ನಿರ್ಧಾರ
Image
ಎರಡನೇ ಬಾರಿ ತಂದೆಯಾದ ರಿಷಬ್​ ಶೆಟ್ಟಿ; ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಗತಿ ಶೆಟ್ಟಿ
Image
‘ರಿಷಬ್​ಗೆ ಹೀರೋಯಿನ್​ ಕೊಡಬೇಡಿ ಅಂತ ಅವರ ಪತ್ನಿ ಪ್ರಗತಿ ಶೆಟ್ಟಿ ಹೇಳಿದ್ರು’: ರಾಜ್​ ಬಿ. ಶೆಟ್ಟಿ

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ‘ಕಾಂತಾರ’ ಸಿನಿಮಾ ಮೂಡಿಬರುತ್ತಿವೆ. ಈ ಚಿತ್ರಕ್ಕೆ ರಿಷಬ್​ ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯಪಾತ್ರವನ್ನೂ ಮಾಡುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಸಖತ್​ ಗಮನ ಸೆಳೆದಿದೆ. ಈ ವರ್ಷ ದಸರಾ ಹಬ್ಬದ ಪ್ರಯುಕ್ತ ಸೆಪ್ಟೆಂಬರ್​ 30ರಂದು ಈ ಸಿನಿಮಾ ರಿಲೀಸ್​ ಆಗಲಿದೆ.

ಇದನ್ನೂ ಓದಿ: Rishab Shetty: ರಿಷಬ್​ ಶೆಟ್ಟಿ ರಿಯಲ್​ ಬದುಕಿಗೆ ಹತ್ತಿರವಾಗಿದೆ ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ; ಏನು ಇದರ ಕಹಾನಿ?

ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’

Published On - 11:26 am, Sun, 3 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ