AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haripriya Marriage Date: ಜನವರಿ 26ಕ್ಕೆ ಹರಿಪ್ರಿಯಾ-ವಸಿಷ್ಠ ಸಿಂಹ ಮದುವೆ; ಮೈಸೂರಿನಲ್ಲಿ ನಡೆಯಲಿದೆ ಶುಭ ಕಾರ್ಯ

Haripriya Vasishta Simha Wedding: ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ ತಯಾರಿ ನಡೆಯುತ್ತಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯಲಿದೆ.

Haripriya Marriage Date: ಜನವರಿ 26ಕ್ಕೆ ಹರಿಪ್ರಿಯಾ-ವಸಿಷ್ಠ ಸಿಂಹ ಮದುವೆ; ಮೈಸೂರಿನಲ್ಲಿ ನಡೆಯಲಿದೆ ಶುಭ ಕಾರ್ಯ
ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಭೇಟಿ
TV9 Web
| Edited By: |

Updated on: Jan 04, 2023 | 10:55 PM

Share

ಸ್ಯಾಂಡಲ್​ವುಡ್​ ಸ್ಟಾರ್​ ಕಪಲ್​ ಆದಂತಹ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ (Haripriya) ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಎಂಗೇಜ್​ಮೆಂಟ್​ ಫೋಟೋಗಳು ವೈರಲ್​ ಆಗಿದ್ದವು. ಈಗ ಮದುವೆ ದಿನಾಂಕ ಕೂಡ ಬಹಿರಂಗ ಆಗಿದೆ. ಜನವರಿ 26ರಂದು ಹರಿಪ್ರಿಯಾ-ವಸಿಷ್ಠ ಸಿಂಹ (Vasishta Simha) ಮದುವೆ ನೆರವೇರಲಿದೆ. ವಿವಾಹದ ಡೇಟ್​ ಕುರಿತು ಸಂಸದ ಪ್ರತಾಪ್​ ಸಿಂಹ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಮದುವೆಗೆ ಸಕಲ ತಯಾರಿ ನಡೆಯುತ್ತಿದೆ. ಇಂದು (ಜ.4) ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಆಶ್ರಮಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪ್ರತಾಪ್​ ಸಿಂಹ (Pratap Simha) ಕೂಡ ಜೊತೆಗಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಬಹುಬೇಡಿಕೆಯ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರಿಬ್ಬರ ನಡುವೆ ಪ್ರೀತಿ ಚಿಗುರಿತು. ಆದರೆ ಆ ವಿಚಾರವನ್ನು ಗುಟ್ಟಾಗಿ ಇಟ್ಟಿದ್ದರು. ಹರಿಪ್ರಿಯಾ ಅವರ ಮೂಗು ಚುಚ್ಚಿಸುವ ವಿಡಿಯೋ ವೈರಲ್​ ಆದ ನಂತರ ಅವರ ಪ್ರೇಮ್​ ಕಹಾನಿ ಕೂಡ ಜಗಜ್ಜಾಹೀರಾಯಿತು. ನಿಶ್ಚಿತಾರ್ಥದ ಬಳಿಕ ಅವರಿಬ್ಬರು ಅಧಿಕೃತವಾಗಿ ತಮ್ಮ ಪ್ರೀತಿಯ ಬಗ್ಗೆ ಮಾತನಾಡಿದರು. ಬದುಕಿನ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿರುವ ಈ ಜೋಡಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.

ಇದನ್ನೂ ಓದಿ
Image
Hariprriya: ಕಿರುತೆರೆಗೆ ಕಾಲಿಡಲಿದ್ದಾರೆ ನಟಿ ಹರಿಪ್ರಿಯಾ; ಏನಿದು ಸಮಾಚಾರ?
Image
ಉಗ್ರಂ ಹರಿಪ್ರಿಯಾ ಪಾತ್ರಕ್ಕೂ ಸಲಾರ್​ ಶ್ರುತಿ ಹಾಸನ್​ ಪಾತ್ರಕ್ಕೂ ಇದೆ ಅಜಗಜಾಂತರ ವ್ಯತ್ಯಾಸ
Image
Hero Kannada Movie: ಹರಿಪ್ರಿಯಾ ಮಾಡಬೇಕಿದ್ದ ಪಾತ್ರವನ್ನು ‘ಮಗಳು ಜಾನಕಿ’ ನಟಿ ಗಾನವಿ ಪಡೆದುಕೊಂಡಿದ್ದು ಹೇಗೆ?
Image
ಕನ್ನಡಿಗರಿಗೆ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಜಾಗವಿಲ್ಲ ಯಾಕೆ? ಹರಿಪ್ರಿಯಾ ಕಿಡಿಕಿಡಿ

ಪ್ರೀತಿ ಚಿಗುರಲು ನಾಯಿಮರಿ ಕಾರಣ:

ಹರಿಪ್ರಿಯಾ ಅವರು ಲಕ್ಕಿ ಮತ್ತು ಹ್ಯಾಪಿ ಎಂಬ ನಾಯಿಗಳನ್ನು ಸಾಕಿದ್ದರು. ಆದರೆ ಲಕ್ಕಿ ಸತ್ತ ನಂತರ ಹ್ಯಾಪಿ ಒಂಟಿಯಾಯ್ತು. ಹರಿಪ್ರಿಯಾ ಕೂಡ ಲಕ್ಕಿಯನ್ನು ಮಿಸ್​ ಮಾಡಿಕೊಳ್ಳುತ್ತಿದ್ದರು. ಆ ಸಂದರ್ಭದಲ್ಲಿ ವಸಿಷ್ಠ ಸಿಂಹ ಅವರು ಕ್ರಿಸ್ಟಲ್​ ಎಂಬ ನಾಯಿಮರಿಯನ್ನು ಹರಿಪ್ರಿಯಾಗೆ ನೀಡಿದರು.

ಇದನ್ನೂ ಓದಿ: Vasishta Simha-Haripriya: ನಿಶ್ಚಿತಾರ್ಥದ ಉಂಗುರ ರಿವೀಲ್​ ಮಾಡಿದ ನಟಿ ಹರಿಪ್ರಿಯಾ: ಇಲ್ಲಿವೆ ಪೋಟೋಸ್​

‘ವಸಿಷ್ಠ ಈ ನಾಯಿಯನ್ನು ಗಿಫ್ಟ್​ ಮಾಡಿದಾಗ ಇವನು ಒಂದು ಮೆಸೇಜ್​ ತಂದಿದ್ದಾನೆ ಎಂಬುದು ಗೊತ್ತಿರಲಿಲ್ಲ. ಅವನ ಹೊಟ್ಟೆಯಲ್ಲಿ ಹಾರ್ಟ್​ ಶೇಪ್​ನ ಒಂದು ಬರ್ತ್​ ಮಾರ್ಕ್​ ಇದೆ. ಅವನು ಬೆಳೆಯುತ್ತಾ ಬೆಳೆಯುತ್ತಾ ನಮ್ಮ ಪ್ರೀತಿ ಕೂಡ ಬೆಳೆಯಿತು. ಕ್ರಿಸ್ಟಲ್​ ನಮ್ಮಿಬ್ಬರ ಪ್ರೀತಿಗೆ ಕನ್ನಡಿ ಹಿಡಿದಿದ್ದಾನೆ’ ಎಂದು ಹರಿಪ್ರಿಯಾ ಅವರು ಕೆಲವು ದಿನಗಳ ಹಿಂದೆ ಸ್ಪೆಷಲ್​ ವಿಡಿಯೋದಲ್ಲಿ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ