AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haripriya Marriage Date: ಜನವರಿ 26ಕ್ಕೆ ಹರಿಪ್ರಿಯಾ-ವಸಿಷ್ಠ ಸಿಂಹ ಮದುವೆ; ಮೈಸೂರಿನಲ್ಲಿ ನಡೆಯಲಿದೆ ಶುಭ ಕಾರ್ಯ

Haripriya Vasishta Simha Wedding: ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ ತಯಾರಿ ನಡೆಯುತ್ತಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯಲಿದೆ.

Haripriya Marriage Date: ಜನವರಿ 26ಕ್ಕೆ ಹರಿಪ್ರಿಯಾ-ವಸಿಷ್ಠ ಸಿಂಹ ಮದುವೆ; ಮೈಸೂರಿನಲ್ಲಿ ನಡೆಯಲಿದೆ ಶುಭ ಕಾರ್ಯ
ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಭೇಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Jan 04, 2023 | 10:55 PM

ಸ್ಯಾಂಡಲ್​ವುಡ್​ ಸ್ಟಾರ್​ ಕಪಲ್​ ಆದಂತಹ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ (Haripriya) ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಎಂಗೇಜ್​ಮೆಂಟ್​ ಫೋಟೋಗಳು ವೈರಲ್​ ಆಗಿದ್ದವು. ಈಗ ಮದುವೆ ದಿನಾಂಕ ಕೂಡ ಬಹಿರಂಗ ಆಗಿದೆ. ಜನವರಿ 26ರಂದು ಹರಿಪ್ರಿಯಾ-ವಸಿಷ್ಠ ಸಿಂಹ (Vasishta Simha) ಮದುವೆ ನೆರವೇರಲಿದೆ. ವಿವಾಹದ ಡೇಟ್​ ಕುರಿತು ಸಂಸದ ಪ್ರತಾಪ್​ ಸಿಂಹ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಮದುವೆಗೆ ಸಕಲ ತಯಾರಿ ನಡೆಯುತ್ತಿದೆ. ಇಂದು (ಜ.4) ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಆಶ್ರಮಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪ್ರತಾಪ್​ ಸಿಂಹ (Pratap Simha) ಕೂಡ ಜೊತೆಗಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಬಹುಬೇಡಿಕೆಯ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರಿಬ್ಬರ ನಡುವೆ ಪ್ರೀತಿ ಚಿಗುರಿತು. ಆದರೆ ಆ ವಿಚಾರವನ್ನು ಗುಟ್ಟಾಗಿ ಇಟ್ಟಿದ್ದರು. ಹರಿಪ್ರಿಯಾ ಅವರ ಮೂಗು ಚುಚ್ಚಿಸುವ ವಿಡಿಯೋ ವೈರಲ್​ ಆದ ನಂತರ ಅವರ ಪ್ರೇಮ್​ ಕಹಾನಿ ಕೂಡ ಜಗಜ್ಜಾಹೀರಾಯಿತು. ನಿಶ್ಚಿತಾರ್ಥದ ಬಳಿಕ ಅವರಿಬ್ಬರು ಅಧಿಕೃತವಾಗಿ ತಮ್ಮ ಪ್ರೀತಿಯ ಬಗ್ಗೆ ಮಾತನಾಡಿದರು. ಬದುಕಿನ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿರುವ ಈ ಜೋಡಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.

ಇದನ್ನೂ ಓದಿ
Image
Hariprriya: ಕಿರುತೆರೆಗೆ ಕಾಲಿಡಲಿದ್ದಾರೆ ನಟಿ ಹರಿಪ್ರಿಯಾ; ಏನಿದು ಸಮಾಚಾರ?
Image
ಉಗ್ರಂ ಹರಿಪ್ರಿಯಾ ಪಾತ್ರಕ್ಕೂ ಸಲಾರ್​ ಶ್ರುತಿ ಹಾಸನ್​ ಪಾತ್ರಕ್ಕೂ ಇದೆ ಅಜಗಜಾಂತರ ವ್ಯತ್ಯಾಸ
Image
Hero Kannada Movie: ಹರಿಪ್ರಿಯಾ ಮಾಡಬೇಕಿದ್ದ ಪಾತ್ರವನ್ನು ‘ಮಗಳು ಜಾನಕಿ’ ನಟಿ ಗಾನವಿ ಪಡೆದುಕೊಂಡಿದ್ದು ಹೇಗೆ?
Image
ಕನ್ನಡಿಗರಿಗೆ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಜಾಗವಿಲ್ಲ ಯಾಕೆ? ಹರಿಪ್ರಿಯಾ ಕಿಡಿಕಿಡಿ

ಪ್ರೀತಿ ಚಿಗುರಲು ನಾಯಿಮರಿ ಕಾರಣ:

ಹರಿಪ್ರಿಯಾ ಅವರು ಲಕ್ಕಿ ಮತ್ತು ಹ್ಯಾಪಿ ಎಂಬ ನಾಯಿಗಳನ್ನು ಸಾಕಿದ್ದರು. ಆದರೆ ಲಕ್ಕಿ ಸತ್ತ ನಂತರ ಹ್ಯಾಪಿ ಒಂಟಿಯಾಯ್ತು. ಹರಿಪ್ರಿಯಾ ಕೂಡ ಲಕ್ಕಿಯನ್ನು ಮಿಸ್​ ಮಾಡಿಕೊಳ್ಳುತ್ತಿದ್ದರು. ಆ ಸಂದರ್ಭದಲ್ಲಿ ವಸಿಷ್ಠ ಸಿಂಹ ಅವರು ಕ್ರಿಸ್ಟಲ್​ ಎಂಬ ನಾಯಿಮರಿಯನ್ನು ಹರಿಪ್ರಿಯಾಗೆ ನೀಡಿದರು.

ಇದನ್ನೂ ಓದಿ: Vasishta Simha-Haripriya: ನಿಶ್ಚಿತಾರ್ಥದ ಉಂಗುರ ರಿವೀಲ್​ ಮಾಡಿದ ನಟಿ ಹರಿಪ್ರಿಯಾ: ಇಲ್ಲಿವೆ ಪೋಟೋಸ್​

‘ವಸಿಷ್ಠ ಈ ನಾಯಿಯನ್ನು ಗಿಫ್ಟ್​ ಮಾಡಿದಾಗ ಇವನು ಒಂದು ಮೆಸೇಜ್​ ತಂದಿದ್ದಾನೆ ಎಂಬುದು ಗೊತ್ತಿರಲಿಲ್ಲ. ಅವನ ಹೊಟ್ಟೆಯಲ್ಲಿ ಹಾರ್ಟ್​ ಶೇಪ್​ನ ಒಂದು ಬರ್ತ್​ ಮಾರ್ಕ್​ ಇದೆ. ಅವನು ಬೆಳೆಯುತ್ತಾ ಬೆಳೆಯುತ್ತಾ ನಮ್ಮ ಪ್ರೀತಿ ಕೂಡ ಬೆಳೆಯಿತು. ಕ್ರಿಸ್ಟಲ್​ ನಮ್ಮಿಬ್ಬರ ಪ್ರೀತಿಗೆ ಕನ್ನಡಿ ಹಿಡಿದಿದ್ದಾನೆ’ ಎಂದು ಹರಿಪ್ರಿಯಾ ಅವರು ಕೆಲವು ದಿನಗಳ ಹಿಂದೆ ಸ್ಪೆಷಲ್​ ವಿಡಿಯೋದಲ್ಲಿ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ