AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಾಂಕ್ ಶೇಷಗಿರಿ ಕಂಠದಲ್ಲಿ ‘ತ್ರಿಕಾರಂ’ ಸಿನಿಮಾದ ಟೈಟಲ್ ಸಾಂಗ್

ಹರ್ಷವರ್ಧನ್, ನಿಶ್ವಿತಾ ಶೆಟ್ಟಿ ಮುಂತಾದವರು ನಟಿಸಿರುವ ‘ತ್ರಿಕಾರಂ’ ಟೈಟಲ್ ಸಾಂಗ್ ರಿಲೀಸ್ ಆಗಿದೆ. ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಗೀತೆಯನ್ನು ಶಶಾಂಕ್ ಶೇಷಗಿರಿ ಹಾಡಿದ್ದಾರೆ. ಹಾಡಿನ ಜೊತೆಗೆ ಮೇಕಿಂಗ್ ವಿಡಿಯೋ ಇದೆ. ಈ ಸಿನಿಮಾ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

ಶಶಾಂಕ್ ಶೇಷಗಿರಿ ಕಂಠದಲ್ಲಿ ‘ತ್ರಿಕಾರಂ’ ಸಿನಿಮಾದ ಟೈಟಲ್ ಸಾಂಗ್
Trikaaram Movie Poster
ಮದನ್​ ಕುಮಾರ್​
|

Updated on: Jan 28, 2026 | 10:29 PM

Share

ಯದುವೀರ್ ಒಡೆಯರ್ ಅವರು ‘ತ್ರಿಕಾರಂ’ (Trikaaram) ಸಿನಿಮಾದ ಮೇಕಿಂಗ್ ದೃಶ್ಯಗಳನ್ನು ಒಳಗೊಂಡ ಟೈಟಲ್ ಸಾಂಗ್‌ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಬೆಂಬಲ ನೀಡಿದ್ದಾರೆ. ‘ಆ ದೇವರ ವಂಶದ ಕುಡಿ ಇವನು, ಈ ಮಣ್ಣನು ಕಾಯಲು ಬಂದವನು..’ ಎಂದು ಆರಂಭ ಆಗುವ ಹಾಡಿಗೆ ಭರ್ಜರಿ ಚೇತನ್‌ಕುಮಾರ್ ಅವರು ಸಾಹಿತ್ಯ ನರೆದಿದ್ದಾರೆ. ಶಶಾಂಕ್ ಶೇಷಗಿರಿ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ವಿವೇಕ್ ಚಕ್ರವರ್ತಿ ಅವರು ಸಂಗೀತ ಸಂಯೋಜಿಸಿದ್ದಾರೆ. ಹರ್ಷವರ್ಧನ್ (Harshavardhan) ಅವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

‘ತ್ರಿಕಾರಂ’ ಸಿನಿಮಾದ ಶೀರ್ಷಿಕೆಗೆ ‘ಇದು ಸ್ಮಶಾನ ಅಲ್ಲ’ ಎಂಬ ಟ್ಯಾಗ್​ ಲೈನ್ ಇದೆ. ಹೊಸದುರ್ಗದ ಜಿ. ಗಣೇಶ್ ಮೂರ್ತಿ ಅವರು ‘ಸದ್ಗುರು ಸಿನಿ ಪ್ರೊಡಕ್ಷನ್’ ಬ್ಯಾನರ್ ಮೂಲಕ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ನಿರ್ಮಾಣ ಮಾಡುವುದು ಜೊತೆಗೆ ವಿಲನ್ ಪಾತ್ರದಲ್ಲೂ ಅವರೇ ನಟಿಸಿದ್ದಾರೆ. ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿ ಅನುಭವ ಪಡೆದಿರುವ ಅಜ್ಜಂಪುರದ ದಿಲೀಪ್ ಕುಮಾರ್ ಜೆ.ಆರ್. ಅವರು ಈ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

ಈಗ ಬಿಡುಗಡೆ ಆಗಿರುವ ಈ ಹಾಡಿನ ಸಾಹಿತ್ಯ ಅರ್ಥಪೂರ್ಣವಾಗಿದೆ. ಆ ಮೂಲಕ ಸಿನಿಮಾ ಬಗ್ಗೆ ಕುತೂಹಲ ಮೂಡಿಸಿದೆ. ನಾಯಕ ಎದುರಾಳಿಗಳ ಎದುರು ಸಿಡಿದೇಳುವಾಗ ಬರುವ ಹಾಡು ಇದಾಗಿದೆ ಎಂದು ಚಿತ್ರತಂಡ ಹೇಳಿದೆ. ಹಾಡು ನೋಡಿದ ಸಿನಿಪ್ರಿಯರು ಚಿತ್ರದ ರಿಲೀಸ್ ದಿನಾಂಕ ಯಾವಾಗ ಎಂದು ಕೇಳುತ್ತಿದ್ದಾರೆ. ಈ ವರ್ಷವೇ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.

‘ತ್ರಿಕಾರಂ’ ಟೈಟಲ್ ಸಾಂಗ್‌:

‘ತ್ರಿಕಾರಂ’ ಸಿನಿಮಾದಲ್ಲಿ ಬೆಂಗಳೂರಿನ ಹರ್ಷವರ್ಧನ್ ಅವರು ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ನಿಶ್ವಿತಾ ಶೆಟ್ಟಿ ಜೋಡಿ ಆಗಿದ್ದಾರೆ. ನಾಗೇಂದ್ರ ಅರಸ್, ಬಲ ರಾಜವಾಡಿ, ಮಂಜು ಪಾವಗಡ ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ‘ಕಟ್ಲೆ’ ಸಿನಿಮಾ ಮೂಲಕ ಹೀರೋ ಆದ ಕೆಂಪೇಗೌಡ; ಟ್ರೇಲರ್ ರಿಲೀಸ್

ಹೊನ್ನಾಳಿ ಯಾಸಿನ್ ಅವರು ‘ತ್ರಿಕಾರಂ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ಸತೀಶ್ ಚಂದ್ರಯ್ಯ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಚಂದ್ರು ಬಂಡೆ ಅವರ ಸಾಹಸ ನಿರ್ದೇಶನ, ಹೈಟ್‌ ಮಂಜು ಮತ್ತು ಕಂಬಿ ರಾಜ್ ಅವರ ನ್ಯೃತ್ಯ ನಿರ್ದೇಶನ ಈ ಸಿನಿಮಾಗಿದೆ. ಚಿತ್ರದುರ್ಗ, ಚಿಕ್ಕಮಗಳೂರು, ಮಾರಿ ಕಣಿವೆ, ಸಾಣೆಹಳ್ಳಿ, ದಾವಣಗೆರೆ, ಸಿರಾ, ಮೈಸೂರಿನಲ್ಲಿ ಶೂಟಿಂಗ್ ಮಾಡಲಾಗಿದೆ. 50 ದಿನಗಳ ಚಿತ್ರೀಕರಣ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ