AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಾಂಕ್ ಶೇಷಗಿರಿ ಕಂಠದಲ್ಲಿ ‘ತ್ರಿಕಾರಂ’ ಸಿನಿಮಾದ ಟೈಟಲ್ ಸಾಂಗ್

ಹರ್ಷವರ್ಧನ್, ನಿಶ್ವಿತಾ ಶೆಟ್ಟಿ ಮುಂತಾದವರು ನಟಿಸಿರುವ ‘ತ್ರಿಕಾರಂ’ ಟೈಟಲ್ ಸಾಂಗ್ ರಿಲೀಸ್ ಆಗಿದೆ. ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಗೀತೆಯನ್ನು ಶಶಾಂಕ್ ಶೇಷಗಿರಿ ಹಾಡಿದ್ದಾರೆ. ಹಾಡಿನ ಜೊತೆಗೆ ಮೇಕಿಂಗ್ ವಿಡಿಯೋ ಇದೆ. ಈ ಸಿನಿಮಾ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

ಶಶಾಂಕ್ ಶೇಷಗಿರಿ ಕಂಠದಲ್ಲಿ ‘ತ್ರಿಕಾರಂ’ ಸಿನಿಮಾದ ಟೈಟಲ್ ಸಾಂಗ್
Trikaaram Movie Poster
ಮದನ್​ ಕುಮಾರ್​
|

Updated on: Jan 28, 2026 | 10:29 PM

Share

ಯದುವೀರ್ ಒಡೆಯರ್ ಅವರು ‘ತ್ರಿಕಾರಂ’ (Trikaaram) ಸಿನಿಮಾದ ಮೇಕಿಂಗ್ ದೃಶ್ಯಗಳನ್ನು ಒಳಗೊಂಡ ಟೈಟಲ್ ಸಾಂಗ್‌ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಬೆಂಬಲ ನೀಡಿದ್ದಾರೆ. ‘ಆ ದೇವರ ವಂಶದ ಕುಡಿ ಇವನು, ಈ ಮಣ್ಣನು ಕಾಯಲು ಬಂದವನು..’ ಎಂದು ಆರಂಭ ಆಗುವ ಹಾಡಿಗೆ ಭರ್ಜರಿ ಚೇತನ್‌ಕುಮಾರ್ ಅವರು ಸಾಹಿತ್ಯ ನರೆದಿದ್ದಾರೆ. ಶಶಾಂಕ್ ಶೇಷಗಿರಿ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ವಿವೇಕ್ ಚಕ್ರವರ್ತಿ ಅವರು ಸಂಗೀತ ಸಂಯೋಜಿಸಿದ್ದಾರೆ. ಹರ್ಷವರ್ಧನ್ (Harshavardhan) ಅವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

‘ತ್ರಿಕಾರಂ’ ಸಿನಿಮಾದ ಶೀರ್ಷಿಕೆಗೆ ‘ಇದು ಸ್ಮಶಾನ ಅಲ್ಲ’ ಎಂಬ ಟ್ಯಾಗ್​ ಲೈನ್ ಇದೆ. ಹೊಸದುರ್ಗದ ಜಿ. ಗಣೇಶ್ ಮೂರ್ತಿ ಅವರು ‘ಸದ್ಗುರು ಸಿನಿ ಪ್ರೊಡಕ್ಷನ್’ ಬ್ಯಾನರ್ ಮೂಲಕ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ನಿರ್ಮಾಣ ಮಾಡುವುದು ಜೊತೆಗೆ ವಿಲನ್ ಪಾತ್ರದಲ್ಲೂ ಅವರೇ ನಟಿಸಿದ್ದಾರೆ. ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿ ಅನುಭವ ಪಡೆದಿರುವ ಅಜ್ಜಂಪುರದ ದಿಲೀಪ್ ಕುಮಾರ್ ಜೆ.ಆರ್. ಅವರು ಈ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

ಈಗ ಬಿಡುಗಡೆ ಆಗಿರುವ ಈ ಹಾಡಿನ ಸಾಹಿತ್ಯ ಅರ್ಥಪೂರ್ಣವಾಗಿದೆ. ಆ ಮೂಲಕ ಸಿನಿಮಾ ಬಗ್ಗೆ ಕುತೂಹಲ ಮೂಡಿಸಿದೆ. ನಾಯಕ ಎದುರಾಳಿಗಳ ಎದುರು ಸಿಡಿದೇಳುವಾಗ ಬರುವ ಹಾಡು ಇದಾಗಿದೆ ಎಂದು ಚಿತ್ರತಂಡ ಹೇಳಿದೆ. ಹಾಡು ನೋಡಿದ ಸಿನಿಪ್ರಿಯರು ಚಿತ್ರದ ರಿಲೀಸ್ ದಿನಾಂಕ ಯಾವಾಗ ಎಂದು ಕೇಳುತ್ತಿದ್ದಾರೆ. ಈ ವರ್ಷವೇ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.

‘ತ್ರಿಕಾರಂ’ ಟೈಟಲ್ ಸಾಂಗ್‌:

‘ತ್ರಿಕಾರಂ’ ಸಿನಿಮಾದಲ್ಲಿ ಬೆಂಗಳೂರಿನ ಹರ್ಷವರ್ಧನ್ ಅವರು ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ನಿಶ್ವಿತಾ ಶೆಟ್ಟಿ ಜೋಡಿ ಆಗಿದ್ದಾರೆ. ನಾಗೇಂದ್ರ ಅರಸ್, ಬಲ ರಾಜವಾಡಿ, ಮಂಜು ಪಾವಗಡ ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ‘ಕಟ್ಲೆ’ ಸಿನಿಮಾ ಮೂಲಕ ಹೀರೋ ಆದ ಕೆಂಪೇಗೌಡ; ಟ್ರೇಲರ್ ರಿಲೀಸ್

ಹೊನ್ನಾಳಿ ಯಾಸಿನ್ ಅವರು ‘ತ್ರಿಕಾರಂ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ಸತೀಶ್ ಚಂದ್ರಯ್ಯ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಚಂದ್ರು ಬಂಡೆ ಅವರ ಸಾಹಸ ನಿರ್ದೇಶನ, ಹೈಟ್‌ ಮಂಜು ಮತ್ತು ಕಂಬಿ ರಾಜ್ ಅವರ ನ್ಯೃತ್ಯ ನಿರ್ದೇಶನ ಈ ಸಿನಿಮಾಗಿದೆ. ಚಿತ್ರದುರ್ಗ, ಚಿಕ್ಕಮಗಳೂರು, ಮಾರಿ ಕಣಿವೆ, ಸಾಣೆಹಳ್ಳಿ, ದಾವಣಗೆರೆ, ಸಿರಾ, ಮೈಸೂರಿನಲ್ಲಿ ಶೂಟಿಂಗ್ ಮಾಡಲಾಗಿದೆ. 50 ದಿನಗಳ ಚಿತ್ರೀಕರಣ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!