AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ’; ತಾತನಾದ ಖುಷಿ ಹಂಚಿಕೊಂಡ ಕುಮಾರಸ್ವಾಮಿ

ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು.

‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ’; ತಾತನಾದ ಖುಷಿ ಹಂಚಿಕೊಂಡ ಕುಮಾರಸ್ವಾಮಿ
ಕುಮಾರಸ್ವಾಮಿ-ನಿಖಿಲ್​
TV9 Web
| Edited By: |

Updated on:Sep 24, 2021 | 3:37 PM

Share

ನಿಖಿಲ್​ ಕುಮಾರಸ್ವಾಮಿ ಹಾಗೂ ರೇವತಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಎಚ್​​.ಡಿ. ಕುಮಾರಸ್ವಾಮಿ ತಾತ ಆಗಿದ್ದಾರೆ. ಈ ಖುಷಿಯನ್ನು ಎಚ್​ಡಿಕೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’ ಎಂದು ಎಚ್​ಡಿಕೆ ಬರೆದುಕೊಂಡಿದ್ದಾರೆ.

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು. ಈಗ ಅವರಿಗೆ ಗಂಡು ಮಗು ಜನನವಾಗಿದೆ.

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಪತ್ನಿ ಜೊತೆ ಇರುವ ಫೋಟೋಗಳನ್ನು ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇತ್ತೀಚೆಗೆ ಅವರ ಮನೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಆ ಸಂದರ್ಭದ ಫೋಟೋವನ್ನು ಹಂಚಿಕೊಂಡ ನಿಖಿಲ್​, ತಮ್ಮ ಅಭಿಮಾನಿಗಳಿಗೆ ವಿಶ್​ ಮಾಡಿದ್ದರು.

ನಿಖಿಲ್​ ಮತ್ತು ರೇವತಿ ದಂಪತಿಗೆ ಮೊದಲ ಮಗು ಜನಿಸಿದ ನಂತರ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ. ಸಿನಿಮಾ ವಿಚಾರಕ್ಕೆ ಬರುವುದಾದರೆ ನಿಖಿಲ್​ ಸದ್ಯ ‘ರೈಡರ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ನಿಖಿಲ್​-ರೇವತಿಗೆ ಗಂಡು ಮಗು; ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ

ಮುದ್ದಾದ ಮಗುವಿನ ಜತೆ ಪೋಸ್​​ ಕೊಟ್ಟ ನಿಖಿಲ್​ ಕುಮಾರಸ್ವಾಮಿ; ಇಲ್ಲಿವೆ ಫೋಟೋಗಳು

Published On - 2:26 pm, Fri, 24 September 21

Follow Us
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ