AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ’; ತಾತನಾದ ಖುಷಿ ಹಂಚಿಕೊಂಡ ಕುಮಾರಸ್ವಾಮಿ

ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು.

‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ’; ತಾತನಾದ ಖುಷಿ ಹಂಚಿಕೊಂಡ ಕುಮಾರಸ್ವಾಮಿ
ಕುಮಾರಸ್ವಾಮಿ-ನಿಖಿಲ್​
TV9 Web
| Edited By: |

Updated on:Sep 24, 2021 | 3:37 PM

Share

ನಿಖಿಲ್​ ಕುಮಾರಸ್ವಾಮಿ ಹಾಗೂ ರೇವತಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಎಚ್​​.ಡಿ. ಕುಮಾರಸ್ವಾಮಿ ತಾತ ಆಗಿದ್ದಾರೆ. ಈ ಖುಷಿಯನ್ನು ಎಚ್​ಡಿಕೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’ ಎಂದು ಎಚ್​ಡಿಕೆ ಬರೆದುಕೊಂಡಿದ್ದಾರೆ.

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು. ಈಗ ಅವರಿಗೆ ಗಂಡು ಮಗು ಜನನವಾಗಿದೆ.

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಪತ್ನಿ ಜೊತೆ ಇರುವ ಫೋಟೋಗಳನ್ನು ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇತ್ತೀಚೆಗೆ ಅವರ ಮನೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಆ ಸಂದರ್ಭದ ಫೋಟೋವನ್ನು ಹಂಚಿಕೊಂಡ ನಿಖಿಲ್​, ತಮ್ಮ ಅಭಿಮಾನಿಗಳಿಗೆ ವಿಶ್​ ಮಾಡಿದ್ದರು.

ನಿಖಿಲ್​ ಮತ್ತು ರೇವತಿ ದಂಪತಿಗೆ ಮೊದಲ ಮಗು ಜನಿಸಿದ ನಂತರ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ. ಸಿನಿಮಾ ವಿಚಾರಕ್ಕೆ ಬರುವುದಾದರೆ ನಿಖಿಲ್​ ಸದ್ಯ ‘ರೈಡರ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ನಿಖಿಲ್​-ರೇವತಿಗೆ ಗಂಡು ಮಗು; ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ

ಮುದ್ದಾದ ಮಗುವಿನ ಜತೆ ಪೋಸ್​​ ಕೊಟ್ಟ ನಿಖಿಲ್​ ಕುಮಾರಸ್ವಾಮಿ; ಇಲ್ಲಿವೆ ಫೋಟೋಗಳು

Published On - 2:26 pm, Fri, 24 September 21

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ