AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟನಾಗಿರುವುದಕ್ಕೆ ತಂದೆ ಉತ್ತಮವಾಗಿ ಅಳುತ್ತಿದ್ದಾರೆ: ಸತ್ಯಜಿತ್ ಕಣ್ಣೀರನ್ನು ಟೀಕಿಸಿದ ಮಗಳು ಸ್ವಲೇಹಾ

ಈಗ ಹೊಸ ಆರೋಪ ಮಾಡಿರುವ ಸ್ವಲೇಹಾ, ನನ್ನ ತಂದೆ ಸತ್ಯಜಿತ್​​ಗೆ ಹಣ ಬೇಕಾಗಿದೆ. ಹೀಗಾಗಿ, 2 ತಿಂಗಳಿನಿಂದ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ನಟನಾಗಿರುವುದಕ್ಕೆ ತಂದೆ ಉತ್ತಮವಾಗಿ ಅಳುತ್ತಿದ್ದಾರೆ: ಸತ್ಯಜಿತ್ ಕಣ್ಣೀರನ್ನು ಟೀಕಿಸಿದ ಮಗಳು ಸ್ವಲೇಹಾ
ಸ್ಸಲೇಹಾ- ತ್ಯಜಿತ್​
ರಾಜೇಶ್ ದುಗ್ಗುಮನೆ
| Edited By: |

Updated on: Feb 12, 2021 | 5:22 PM

Share

ಬೆಂಗಳೂರು: ಕನ್ನಡದ ನಟ ಸತ್ಯಜಿತ್​ ಕುಟುಂಬ ಕಲಹ ಈಗ ಬೀದಿಗೆ ಬಂದಿದೆ. ಮಗಳು ಸ್ವಲೇಹಾ ಓದಿಗೆ ನಾನು ಹಣ ನೀಡಿದ್ದೇನೆ ಎಂದು ಸತ್ಯಜಿತ್​ ಹೇಳಿದರೆ, ತಂದೆ ನನಗೆ ಹಣವನ್ನೇ ನೀಡಿಲ್ಲ ಎಂದು ಸ್ವಲೇಹಾ ತಿರುಗೇಟು ನೀಡಿದ್ದಾರೆ. ಈಗ ಹೊಸ ಆರೋಪ ಮಾಡಿರುವ ಅವರು, ನನ್ನ ತಂದೆ ಸತ್ಯಜಿತ್​​ಗೆ ಹಣ ಬೇಕಾಗಿದೆ. ಹೀಗಾಗಿ, 2 ತಿಂಗಳಿನಿಂದ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ನಾನು ಗರ್ಭಿಣಿ. ಹೀಗಾಗಿ ನನಗೆ ಸಂಬಳ ಬರುತ್ತಿಲ್ಲ. ಕುಟುಂಬ ನಿರ್ವಹಣೆ ನೀವೇ ನೋಡಿಕೊಳ್ಳಿ ಎಂದು ನಮ್ಮ ತಾಯಿಯವರಿಗೆ ತಿಳಿಸಿದ್ದೆ. ಅದೇ ದಿನ ರಾತ್ರಿಯೇ ತಂದೆ ನನಗೆ ಕರೆ ಮಾಡಿದ್ದರು. ಮನೆಗೆ ಬರುವಂತೆ ಗದರಿದ್ದರು. ನಾನು ನನ್ನ ಪತಿಯ ಜತೆ ತಂದೆ ಮನೆಗೆ ಹೋಗಿದ್ದೆ. ಅಲ್ಲಿ ಹಣ ನೀಡುವಂತೆ ಮತ್ತೆ ಕೇಳಿದ್ದರು. ಆಗ ನನ್ನ ಪತಿ, ನಿಮಗೆ ನಾವು ಏಕೆ ಹಣ ಕೊಡಬೇಕು ಎಂದು ನನ್ನ ಅಣ್ಣನನ್ನು ಪ್ರಶ್ನೆ ಮಾಡಿದ್ದರು. ಅಲ್ಲಿಂದ ಸಮಸ್ಯೆ ಆರಂಭವಾಯಿತು, ಎಂದು ಸ್ವಲೇಹಾ ಮಾಹಿತಿ ನೀಡಿದ್ದಾರೆ.

ತಂದೆ-ತಾಯಿ ಮನೆ ನಿರ್ವಹಣೆಗೆ ನಾನೇ ಹಣ ನೀಡುತ್ತಿದ್ದೆ. ನನಗೆ ಮದುವೆಯಾದರೂ ಹಣ ಕೊಡುವುದನ್ನು ಮುಂದುವರಿಸಿದ್ದೆ. ಇದನ್ನ ಯಾವತ್ತೂ ನನ್ನ ಪತಿ ಪ್ರಶ್ನೆ ಮಾಡಿಲ್ಲ. ನಾನು ಗರ್ಭಿಣಿಯಾದ ಕಾರಣ ಈಗ ಹಣ ನೀಡಲು ಆಗಿಲ್ಲ. ಈ ಕಾರಣಕ್ಕೆ ನನ್ನ ವಿರುದ್ಧ ವಿಡಿಯೋ ಮಾಡಿದ್ದಾರೆ. ನಾನು ತಿಂಗಳಿಗೆ 4 ಲಕ್ಷ ಸಂಪಾದನೆ ಮಾಡುತ್ತಿದ್ದೇನೆಂದು ಹೇಳುತ್ತಿದ್ದಾರೆ. ಆದರೆ, ಯಾವ ಏರ್‌ಲೈನ್ಸ್‌ನವರು ಅಷ್ಟೊಂದು ಸಂಭಾವನೆ ಕೊಡುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ನನ್ನ ತಂದೆ ವಿಡಿಯೋ ಮಾಡಿ ಅಳುತ್ತಿದ್ದಾರೆ. ನಟರಾಗಿ ಅವರಿಗೆ ಅಳುವುದು ಸಹಜವಾಗಿ ಬರುತ್ತದೆ ಎಂದು ಸ್ವಲೇಹಾ ಹಂಗಿಸಿದರು.

ಇದನ್ನೂ ಓದಿ: ಮಗಳಿಗಾಗಿ ನಾವು ಎಲ್ಲವನ್ನೂ ಕಳೆದುಕೊಂಡಿದ್ದೇವೆ; ಮಾಧ್ಯಮದ ಮುಂದೆ ಕಣ್ಣೀರಿಟ್ಟ ನಟ ಸತ್ಯಜಿತ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?