AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Veeragase: ‘ಹೆಡ್​ ಬುಷ್​’ ವಿವಾದ ಅಂತ್ಯ: ಕರಗ ಕುರಿತ ಡೈಲಾಗ್​ ಮ್ಯೂಟ್​; ಕ್ಷಮೆ ಕೇಳಿದ ಡಾಲಿ ಧನಂಜಯ್​

Head Bush | Daali Dhananjay: ವೀರಗಾಸೆ ಕಲಾವಿದರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪದಿಂದ ಡಾಲಿ ಧನಂಜಯ್​ ನಟನೆಯ ‘ಹೆಡ್​ ಬುಷ್​’ ಚಿತ್ರಕ್ಕೆ ವಿವಾದ ಸುತ್ತಿಕೊಂಡಿತ್ತು. ಈಗ ವಿವಾದಕ್ಕೆ ಅಂತ್ಯ ಹಾಡಲಾಗಿದೆ.

Veeragase: ‘ಹೆಡ್​ ಬುಷ್​’ ವಿವಾದ ಅಂತ್ಯ: ಕರಗ ಕುರಿತ ಡೈಲಾಗ್​ ಮ್ಯೂಟ್​; ಕ್ಷಮೆ ಕೇಳಿದ ಡಾಲಿ ಧನಂಜಯ್​
ಡಾಲಿ ಧನಂಜಯ್
TV9 Web
| Edited By: |

Updated on: Oct 27, 2022 | 5:02 PM

Share

ಹಲವು ಕಾರಣಗಳಿಂದಾಗಿ ‘ಹೆಡ್​ ಬುಷ್​’ (Head Bush) ಚಿತ್ರವು ವಿವಾದದ ಕೇಂದ್ರ ಬಿಂದು ಆಗಿತ್ತು. ಈ ಸಿನಿಮಾದಲ್ಲಿ ಕರಗಕ್ಕೆ ಸಂಬಂಧಿಸಿದ ದೃಶ್ಯಗಳು ಆಕ್ಷೇಪಾರ್ಹವಾಗಿವೆ ಹಾಗೂ ವೀರಗಾಸೆ ಕಲಾವಿದರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಎದುರಾಗಿತ್ತು. ಅನೇಕ ಸಂಘಟನೆಗಳು ಚಿತ್ರತಂಡದ ವಿರುದ್ಧ ತಿರುಗಿ ಬಿದ್ದಿದ್ದವು. ಪೊಲೀಸ್​ ಠಾಣೆಯಲ್ಲಿ ದೂರು ಕೂಡ ದಾಖಲಾಗುವ ಹಂತಕ್ಕೆ ವಿವಾದ ಹುಟ್ಟಿಕೊಂಡಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ಸೇರಿ ಪರಿಹಾರ ಕಂಡುಕೊಳ್ಳಲಾಗಿದೆ. ಕರಗದ (Karaga) ದೃಶ್ಯದಲ್ಲಿ ಬರುವ ಡೈಲಾಗ್​ ಅನ್ನು ಮ್ಯೂಟ್​ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಈ ಬಗ್ಗೆ ಡಾಲಿ ಧನಂಜಯ್​ (Daali Dhananjay) ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಡಾನ್​ ಜಯರಾಜ್​ ಅವರ ಜೀವನದ ಕಥೆಯನ್ನು ಆಧರಿಸಿ ‘ಹೆಡ್​ ಬುಷ್​’ ಸಿನಿಮಾ ಮೂಡಿಬಂದಿದೆ. ಅಕ್ಟೋಬರ್​ 21ರಂದು ಈ ಚಿತ್ರ ಬಿಡುಗಡೆ ಆಯಿತು. ಜನರಿಂದ ಉತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿದೆ. ಅದರ ಜೊತೆಗೆ ವಿವಾದವೂ ಹುಟ್ಟಿಕೊಂಡಿತು. ವೀರಗಾಸೆ ಕಲಾವಿದರ ಮೇಲೆ ಹಲ್ಲೆ ಮಾಡುವಂತಹ ದೃಶ್ಯಗಳು ಈ ಚಿತ್ರದಲ್ಲಿ ಇವೆ ಎಂಬ ಕಾರಣಕ್ಕೆ ಕೆಲವರು ಈ ಸಿನಿಮಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

‘ತಪ್ಪಾಗಿದ್ರೆ ನಾನು ಕ್ಷಮೆ ಕೇಳುತ್ತೇನೆ. ಚಿತ್ರದಲ್ಲಿ ಕರಗದ ಬಗ್ಗೆ ಇರುವ ಡೈಲಾಗ್​ಗೆ ಮ್ಯೂಟ್​​ ಹಾಕುತ್ತೇವೆ. ವೀರಗಾಸೆ ಕಲಾವಿದರಿಗೂ ನೋವಾಗಿದ್ರೆ ಕ್ಷಮೆ ಇರಲಿ. ಇದನ್ನು ಇಲ್ಲಿಗೆ ನಿಲ್ಲಿಸೋಣ. ಮತ್ತೆ ಕೆಲಸ ಮಾಡೋಣ’ ಎಂದು ಡಾಲಿ ಧನಂಜಯ್ ಹೇಳಿದ್ದಾರೆ. ಆ ಮೂಲಕ ವಿವಾದಕ್ಕೆ ಫುಲ್​ ಸ್ಟಾಪ್​ ಹಾಕುವ ನಿರ್ಧಾರಕ್ಕೆ ಬರಲಾಗಿದೆ. ವಿವಾದ ಭುಗಿಲೆದ್ದ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ಎರಡು ಬಣಗಳಾಗಿದ್ದವು. ಕೆಲವರು ವಿರೋಧ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಡಾಲಿ ಧನಂಜಯ್​ ಪರವಾಗಿ ವಾದ ಮಂಡಿಸಿದ್ದರು.

ಇದನ್ನೂ ಓದಿ
Image
‘ಹೆಡ್​ ಬುಷ್​’ ಚಿತ್ರದ ವೀರಗಾಸೆ ವಿವಾದ: ಧನಂಜಯ್ ಸುದ್ದಿಗೋಷ್ಠಿಯ ಲೈವ್ ನೋಡಿ
Image
ಮೂರು ದಿನಕ್ಕೆ ಬಂಗಾರದ ಬೆಳೆ ತೆಗೆದ ‘ಹೆಡ್​ ಬುಷ್​’ ಸಿನಿಮಾ; ಇಲ್ಲಿದೆ ಕಲೆಕ್ಷನ್ ವಿವರ
Image
Head Bush: ಡಾಲಿ ಧನಂಜಯ್​ ಮೇಲೆ ಹೂಮಳೆ ಸುರಿಸಿದ ಫ್ಯಾನ್ಸ್​; ಚಿತ್ರದುರ್ಗದಲ್ಲಿ ‘ಹೆಡ್​ ಬುಷ್​’ ತಂಡಕ್ಕೆ ಭರ್ಜರಿ ಸ್ವಾಗತ
Image
Head Bush: ಸೈಕಲ್​ ಏರಿ ಅಪ್ಪು ಸಮಾಧಿಗೆ ಬಂದ ಡಾಲಿ ಧನಂಜಯ್; ‘ಹೆಡ್​ ಬುಷ್​’ ಚಿತ್ರಕ್ಕೆ ಡಿಫರೆಂಟ್​ ಪ್ರಚಾರ

WeStandWithDhananjay ಎಂದು ಹ್ಯಾಶ್​ ಟ್ಯಾಗ್​ ಟ್ರೆಂಡ್​ ಆಗಿತ್ತು. ಈ ಹಿಂದೆ ಡಾಲಿ ಧನಂಜಯ್​ ಹೇಳಿದ್ದ ‘ಬಡವರ ಮನೆ ಮಕ್ಕಳು ಬೆಳೀಬೇಕು ಕಣ್ರಯ್ಯ’ ಎಂಬ ಮಾತು ಸಖತ್​ ವೈರಲ್​ ಆಯಿತು. ಈ ಬಗ್ಗೆಯೂ ಧನಂಜಯ್ ಪ್ರತಿಕ್ರಿಯಿಸಿದ್ದಾರೆ. ‘ನನಗೆ ತುಂಬಾ ಜನ ಪ್ರೀತಿ ತೋರಿಸಿದ್ದಾರೆ. ಹೀಗಾಗಿ ನಾನು ಬಡವನಲ್ಲ. ಜನರ ಪ್ರೀತಿ ಪಡೆದ ದೊಡ್ಡ ಶ್ರೀಮಂತ’ ಎಂದು ಅವರು ಹೇಳಿದ್ದಾರೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್