ಮೂರು ದಿನಕ್ಕೆ ಬಂಗಾರದ ಬೆಳೆ ತೆಗೆದ ‘ಹೆಡ್​ ಬುಷ್​’ ಸಿನಿಮಾ; ಇಲ್ಲಿದೆ ಕಲೆಕ್ಷನ್ ವಿವರ

Head Bush Movie Box office Collection: ‘ಹೆಡ್​ ಬುಷ್​’ ಸಿನಿಮಾದಲ್ಲಿ ಬೆಂಗಳೂರು ಭೂಗತ ಜಗತ್ತನ್ನು ಆಳಿದ ಎಂ.ಪಿ. ಜಯರಾಜ್ ಪಾತ್ರದಲ್ಲಿ ಡಾಲಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರವನ್ನು ಅವರು ಜೀವಿಸಿದ್ದಾರೆ. ಈ ಸಿನಿಮಾ ಎಲ್ಲರಿಗೂ ಇಷ್ಟವಾಗಿದೆ.

ಮೂರು ದಿನಕ್ಕೆ ಬಂಗಾರದ ಬೆಳೆ ತೆಗೆದ ‘ಹೆಡ್​ ಬುಷ್​’ ಸಿನಿಮಾ; ಇಲ್ಲಿದೆ ಕಲೆಕ್ಷನ್ ವಿವರ
ಧನಂಜಯ್
Follow us
| Updated By: ರಾಜೇಶ್ ದುಗ್ಗುಮನೆ

Updated on:Oct 24, 2022 | 7:36 PM

ಧನಂಜಯ್ (Dhananjay) ಅವರು ಒಂದೇ ಮಾದರಿಯ ಚಿತ್ರಗಳಿಗೆ ಅಂಟಿಕೊಂಡಿರುವವರು ಅಲ್ಲವೇ ಅಲ್ಲ. ‘ಟಗರು’ ಚಿತ್ರದಲ್ಲಿ ವಿಲನ್ ಪಾತ್ರದ ಮೂಲಕ ಖ್ಯಾತಿ ಪಡೆದ ಅವರು ನಂತರ ಬೇರೆ ಬೇರೆ ರೀತಿಯ ಕ್ಯಾರೆಕ್ಟರ್​​ಗಳ ಮೂಲಕ ಗಮನ ಸೆಳೆದರು. ‘ರತ್ನನ್​ ಪ್ರಪಂಚ’ ಚಿತ್ರದಲ್ಲಿ ಭಾವನಾತ್ಮಕ ಕಥೆಯ ಮೂಲಕ ಗಮನ ಸೆಳೆದರು. ಇತ್ತೀಚೆಗೆ ರಿಲೀಸ್ ಆದ ‘ಬಡವ ರಾಸ್ಕಲ್’ ಸಿನಿಮಾ ಮೂಲಕ ಡಾಲಿ ನಿರ್ಮಾಪಕನಾಗಿ ಯಶಸ್ಸು ಕಂಡರು. ಈಗ ಧನಂಜಯ್ ಅವರ ‘ಹೆಡ್ ಬುಷ್’ ಸಿನಿಮಾ (Head Bush Movie) ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಚಿತ್ರದಿಂದ ಧನಂಜಯ್ ಅವರು ಮತ್ತೊಮ್ಮೆ ಗೆದ್ದಿದ್ದಾರೆ.

‘ಹೆಡ್​ ಬುಷ್​’ ಸಿನಿಮಾದಲ್ಲಿ ಬೆಂಗಳೂರು ಭೂಗತ ಜಗತ್ತನ್ನು ಆಳಿದ ಎಂ.ಪಿ. ಜಯರಾಜ್ ಪಾತ್ರದಲ್ಲಿ ಡಾಲಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರವನ್ನು ಅವರು ಜೀವಿಸಿದ್ದಾರೆ. ಈ ಸಿನಿಮಾ ಎಲ್ಲರಿಗೂ ಇಷ್ಟವಾಗಿದೆ. ಈ ಚಿತ್ರದ ಬಗ್ಗೆ ಪಾಸಿಟಿವ್ ಟಾಕ್ ಇದೆ. ಈ ಕಾರಣಕ್ಕೆ ‘ಹೆಡ್​ ಬುಷ್’ ಚಿತ್ರವನ್ನು ಜನರು ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ಚಿತ್ರ ಮೂರು ದಿನಕ್ಕೆ 9 ಕೋಟಿ ರೂಪಾಯಿ ಬಾಚಿಕೊಂಡಿದೆ ಎಂದು ವರದಿ ಆಗಿದೆ.

‘ಹೆಡ್ ಬುಷ್’ ಸಿನಿಮಾ ಶುಕ್ರವಾರ (ಅಕ್ಟೋಬರ್ 21) ರಿಲೀಸ್ ಆಯಿತು. ಒಂದು ದಿನ ಮೊದಲು ಅಂದರೆ ಅಕ್ಟೋಬರ್ 20ರಂದು ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋ ಆಯೋಜನೆ ಮಾಡಲಾಯಿತು. ಬಹುತೇಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡವು. ಶುಕ್ರವಾರ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಮೊದಲ ದಿನ ನಾಲ್ಕು ಕೋಟಿ ಗಳಿಕೆ ಮಾಡಿದ ಈ ಚಿತ್ರ ಮೂರು ದಿನಗಳಲ್ಲಿ 9 ಕೋಟಿ ರೂ. ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಡಾಲಿ ಹೀರೋ ಆಗಿ ಕಾಣಿಸಿಕೊಂಡ ಸಿನಿಮಾಗಳ ಪೈಕಿ ಅತಿ ಹೆಚ್ಚು ಹಣ ಬಾಚಿದ ಚಿತ್ರ ಎಂಬ ಹೆಗ್ಗಳಿಕೆಗೆ ‘ಹೆಡ್​ ಬುಷ್​’ ಪಾತ್ರವಾಗಿದೆ.

ಇದನ್ನೂ ಓದಿ
Image
Head Bush: ‘ಮದುವೆಯಿಂದ ನನ್ನ ಜೀವನದಲ್ಲಿ ಏನೂ ಬದಲಾಗಿಲ್ಲ’; ಶ್ರುತಿ ಹರಿಹರನ್​
Image
Head Bush: ಸೈಕಲ್​ ಏರಿ ಅಪ್ಪು ಸಮಾಧಿಗೆ ಬಂದ ಡಾಲಿ ಧನಂಜಯ್; ‘ಹೆಡ್​ ಬುಷ್​’ ಚಿತ್ರಕ್ಕೆ ಡಿಫರೆಂಟ್​ ಪ್ರಚಾರ
Image
Head Bush: ‘ಹೆಡ್​ ಬುಷ್​​’ ತಂಡಕ್ಕೆ ಎಂ.ಪಿ. ಜಯರಾಜ್​ ಮಗ-ಸೊಸೆ ವಿರೋಧದ ನಡುವೆ ಸಹೋದರಿಯ ಬೆಂಬಲ
Image
ಧನಂಜಯ ನಟನೆಯ ‘ಹೆಡ್​ ಬುಷ್​’ ಚಿತ್ರಕ್ಕೆ ಜಯರಾಜ್​ ಪುತ್ರ ಅಜಿತ್​ ತಕರಾರು ತೆಗೆದಿದ್ದು ಯಾಕೆ? ಇಲ್ಲಿದೆ ಕಾರಣ..

ಇದನ್ನೂ ಓದಿ:  ‘ಹೆಡ್​ ಬುಷ್’​ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ರಚಿತಾ ರಾಮ್​ ಬಿಂದಾಸ್​ ಡ್ಯಾನ್ಸ್​; ಇಲ್ಲಿದೆ ವಿಡಿಯೋ

ದೀಪಾವಳಿ ಹಬ್ಬ ಆರಂಭ ಆಗಿದೆ. ಈ ವಾರ ಸಾಲು ಸಾಲು ರಜೆಗಳಿವೆ. ಇದು ಚಿತ್ರಕ್ಕೆ ವರದಾನವಾಗಲಿದೆ. ಮುಂದಿನ ದಿನಗಳಲ್ಲಿ ಈ ಚಿತ್ರ ಮತ್ತಷ್ಟು ಗಳಿಕೆ ಮಾಡುವ ಸಾಧ್ಯತೆ ಇದೆ. ಈ ಚಿತ್ರದಿಂದ ಧನಂಜಯ್ ಅವರು ಮತ್ತೊಂದು ಯಶಸ್ಸು ಕಂಡಿದ್ದಾರೆ. ಜಯರಾಜ್ ಆಗಿ ಅವರನ್ನು ಎಲ್ಲರೂ ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮೊದಲ ಪಾರ್ಟ್​ ಈಗ ತೆರೆಗೆ ಬಂದಿದೆ. ಇದರ ಮುಂದಿನ ಭಾಗ ಇನ್ನಷ್ಟೇ ಸಿದ್ಧಗೊಳ್ಳಬೇಕಿದೆ.

Published On - 7:35 pm, Mon, 24 October 22

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ