AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಪ್ರತಿಮೆಗೆ ಆಂಧ್ರ ಪ್ರದೇಶದಲ್ಲಿ ಹೆಚ್ಚಾಯ್ತು ಬೇಡಿಕೆ; ಅಪ್ಪು ಪ್ರತಿಮೆ ತಯಾರಿಸಿ ಸುಸ್ತಾದ ಶಿಲ್ಪಿ

ಪುನೀತ್ ರಾಜ್​ಕುಮಾರ್​ ಭೌತಿಕವಾಗಿ ನಮ್ಮ ನಡುವೆ ಇಲ್ಲದಿದ್ದರೂ ಕೋಟಿ ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ಒಳ್ಳೆಯತನ, ಅವರು ಕೈಗೊಂಡ ಸೇವಾ ಕಾರ್ಯಕ್ರಮಗಳು ಅವರನ್ನು ಈಗಲೂ ನೆನಪಿಸಿಕೊಳ್ಳುವಂತೆ ಮಾಡಿದೆ.

ಪುನೀತ್ ಪ್ರತಿಮೆಗೆ ಆಂಧ್ರ ಪ್ರದೇಶದಲ್ಲಿ ಹೆಚ್ಚಾಯ್ತು ಬೇಡಿಕೆ; ಅಪ್ಪು ಪ್ರತಿಮೆ ತಯಾರಿಸಿ ಸುಸ್ತಾದ ಶಿಲ್ಪಿ
ಪುನೀತ್​ ರಾಜ್​ಕುಮಾತ್​ ಪ್ರತಿಮೆ
TV9 Web
| Edited By: |

Updated on: Dec 11, 2021 | 2:05 PM

Share

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಅಕಾಲಿಕ ಮರಣ ವಾರ್ತೆಯನ್ನು ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್ ನಿಧನದಿಂದ ಅವರ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ದಾರೆ. ಅವರು ಮೃತಪಟ್ಟು ಒಂದೂವರೆ ತಿಂಗಳು ಕಳೆಯುತ್ತಾ ಬಂದರೂ ನೋವು ಎಂಬುದು ಕಿಂಚಿತ್ತೂ ಕಡಿಮೆ ಆಗುತ್ತಿಲ್ಲ. ಪುನೀತ್​ಗೆ ಕರ್ನಾಟಕ ಮಾತ್ರವಲ್ಲದೆ ಪರಭಾಷೆಯಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಬೇರೆ ರಾಜ್ಯಗಳಲ್ಲೂ ಪುನೀತ್​ಗೆ ನಮನ ಸಲ್ಲಿಸುವ ಕಾರ್ಯ ನಡೆದಿದೆ. ಕನ್ನಡ ಚಿತ್ರರಂಗ​ ಮಾತ್ರವಲ್ಲದೆ ಪರಭಾಷೆಯಲ್ಲಿರುವ ಅಭಿಮಾನಿಗಳು ಕೂಡ ಪುನೀತ್​ ಅವರನ್ನು ನೆನೆಯುತ್ತಿದ್ದಾರೆ. ಅವರ ಮೇಲಿನ ಅಭಿಮಾನವನ್ನು ನಾನಾ ರೀತಿಯಲ್ಲಿ ವ್ಯಕ್ತಪಡಿಸಲಾಗುತ್ತಿದೆ. ಕೆಲವರು ಪುನೀತ್ ದಾರಿಯಲ್ಲಿ ಸಾಗಿ ಸಮಾಜ ಸೇವೆ ಮಾಡುತ್ತಿದ್ದಾರೆ. ಸಾಕಷ್ಟು ಮಂದಿ ಆಂಧ್ರ ಪ್ರದೇಶದಲ್ಲಿ ಪುನೀತ್​ ಅವರ ಪ್ರತಿಮೆ ನಿರ್ಮಾಣ ಮಾಡುತ್ತಿದ್ದಾರೆ. ಹೀಗಾಗಿ, ಅಲ್ಲಿನ ಶಿಲ್ಪಿಗಳಿಗೆ ಸಾಕಷ್ಟು ಆರ್ಡರ್​ಗಳು ಬರುತ್ತಿವೆ.

ಪುನೀತ್ ರಾಜ್​ಕುಮಾರ್​ ಭೌತಿಕವಾಗಿ ನಮ್ಮ ನಡುವೆ ಇಲ್ಲದಿದ್ದರೂ ಕೋಟಿ ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ಒಳ್ಳೆಯತನ, ಅವರು ಕೈಗೊಂಡ ಸೇವಾ ಕಾರ್ಯಕ್ರಮಗಳು ಅವರನ್ನು ಈಗಲೂ ನೆನಪಿಸಿಕೊಳ್ಳುವಂತೆ ಮಾಡಿದೆ. ಎಲ್ಲಾ ಏರಿಯಾಗಳಲ್ಲಿ ಪುನೀತ್ ಪ್ರತಿಮೆ ಸ್ಥಾಪಿಸಲು ಆಸಕ್ತಿ ತೋರಿದ್ದಾರೆ. ಆಂಧ್ರ ಪ್ರದೇಶದಲ್ಲೂ ಈ ರೀತಿ ಮಾಡಲಾಗುತ್ತಿದೆ. ಇಲ್ಲಿನ ಗುಂಟೂರು ಜಿಲ್ಲೆಯ ತೆನಾಲಿ ಜಿಲ್ಲೆಯ ಶಿಲ್ಪಿ ಕಾಟೂರಿ ವೆಂಕಟೇಶ್ವರರಾವ್ ಅವರಿಗೆ ಪುನೀತ್​ ಪ್ರತಿಮೆ ನಿರ್ಮಾಣಕ್ಕೆ ಭಾರೀ ಆರ್ಡರ್​ಗಳು ಬರುತ್ತಿವೆ.

ವೆಂಕಟೇಶ್ವರ್​ ಅವರು ಮಕ್ಕಳಾದ ರವಿಚಂದ್ರನ್ ಮತ್ತು ಶ್ರೀ ಹರ್ಷಲಾ ಜತೆ ಸೇರಿ 3ಡಿ ಪ್ರಿಂಟಿಂಗ್ ತಂತ್ರಜ್ಞಾನದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆಗಳನ್ನು ತಯಾರಿಸುತ್ತಿದ್ದಾರೆ. ಅಭಿಮಾನಿಗಳ ಆಸೆಯಂತೆ 3ಡಿ ತಂತ್ರಜ್ಞಾನದಿಂದ ಮೂರ್ತಿಗಳ ತಯಾರಿಕೆ ಆರಂಭವಾಗಿದೆ. ಈ ತಂತ್ರಜ್ಞಾನದಿಂದ 3 ಇಂಚುಗಳಿಂದ ಹಿಡಿದು 100 ಅಡಿವರೆಗೆ ಮೂರ್ತಿಗಳನ್ನು ತಯಾರಿಸಬಹುದು. ಇದರಿಂದ ಸಿದ್ಧಪಡಿಸಿದ ಮೂರ್ತಿಗಳು ತುಂಬಾನೇ ಅದ್ಭುತವಾಗಿ ಮೂಡಿ ಬರುತ್ತವೆ.  ಈಗ ಪುನೀತ್​ ಅವರ ಪ್ರತಿಮೆ ನಿರ್ಮಾಣಕ್ಕೆ ಸಾಕಷ್ಟು ಆರ್ಡರ್​ ಬರುತ್ತಿದ್ದು, ಇವರು ಹಗಲು ರಾತ್ರಿ ಎನ್ನದೇ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಗ್ರಾಹಕರ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಪುನೀತ್​ ನಿಧನದ ಬಳಿಕ ರಾಘಣ್ಣ ನಟನೆಯ ಮೊದಲ ಚಿತ್ರ ‘ರಾಜಿ’; ಮುಹೂರ್ತದ ವೇಳೆ ಭಾವುಕ ಮಾತು

ಮ್ಯೂಸಿಯಂ ಆಗಲಿದೆ ಡಾ. ರಾಜ್​ ಆಡಿ ಬೆಳೆದ ಮನೆ; ಪುನೀತ್​ ಆಸೆ ಈಡೇರಿಸಲು ಕುಟುಂಬದ ನಿರ್ಧಾರ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ