AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮರಸ’ ಚಿತ್ರದಲ್ಲಿ ಮಿಂಚಲು ಬಂದ ‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್

ಖ್ಯಾತ ನಟಿ ಹೆಬಾ ಪಟೇಲ್ ಅವರು ಕನ್ನಡ ಚಿತ್ರರಂಗಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ. ‘ರಾಮರಸ’ ಚಿತ್ರದಲ್ಲಿ ಅವರಿಗೆ ಒಂದು ಪ್ರಮುಖವಾದ ಪಾತ್ರವಿದೆ. ಬಿ.ಎಂ. ಗಿರಿರಾಜ್​ ನಿರ್ದೇಶನದ ಈ ಚಿತ್ರದಲ್ಲಿ ಕಾರ್ತಿಕ್​ ಮಹೇಶ್ ಹೀರೋ. ಈಗ ಹೆಬಾ ಅವರ ಫಸ್ಟ್​ ಬಿಡುಗಡೆ ಮಾಡಿ ನಿರೀಕ್ಷೆ ಹೆಚ್ಚಿಸಲಾಗಿದೆ. ಗುರು ದೇಶಪಾಂಡೆ ನಿರ್ಮಾಣದಲ್ಲಿ ಈ ಚಿತ್ರ ಸಿದ್ಧವಾಗುತ್ತಿದೆ.

‘ರಾಮರಸ’ ಚಿತ್ರದಲ್ಲಿ ಮಿಂಚಲು ಬಂದ ‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್
Hebah Patel
ಮದನ್​ ಕುಮಾರ್​
|

Updated on: Jan 06, 2025 | 10:15 PM

Share

ಶರಣ್ ನಟನೆಯ ‘ಅಧ್ಯಕ್ಷ’ ಸಿನಿಮಾ ನೋಡಿದವರಿಗೆ ನಟಿ ಹೆಬಾ ಪಟೇಲ್ ಅವರ ಪರಿಚಯ ಇದ್ದೇ ಇರುತ್ತದೆ. ಅದು ಅವರ ಮೊದಲ ಸಿನಿಮಾ ಕೂಡ ಹೌದು. ಆ ಸಿನಿಮಾ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದರು. ಬಳಿಕ ಅವರಿಗೆ ತಮಿಳು, ತೆಲುಗಿನಲ್ಲಿ ಸಿಕ್ಕಾಪಟ್ಟೆ ಅವಕಾಶಗಳು ಸಿಕ್ಕವು. ಬೇಡಿಕೆಯ ನಟಿಯಾಗಿ ಅವರು ಗುರುತಿಸಿಕೊಂಡರು. ಈಗ ಮತ್ತೆ ಅವರು ಕನ್ನಡ ಚಿತ್ರರಂಗಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಎಂಬುದು ವಿಶೇಷ. ‘ರಾಮರಸ’ ಸಿನಿಮಾದಲ್ಲಿ ಹೆಬಾ ಪಟೇಲ್ ಅವರಿಗೆ ವಿಶೇಷವಾದ ಪಾತ್ರ ಇದೆ.

ಗುರು ದೇಶಪಾಂಡೆ ಅವರು ನಿರ್ಮಾಣ ಮಾಡುತ್ತಿರುವ ‘ರಾಮರಸ’ ಸಿನಿಮಾ ಕೌತುಕ ಮೂಡಿಸಿದೆ. ಈ ಸಿನಿಮಾವನ್ನು ‘ಜಿ ಸಿನಿಮಾಸ್​’ ಹಾಗೂ ‘ಸೆವೆನ್ ಸ್ಟಾರ್​ ಸ್ಟುಡಿಯೋಸ್​’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಬಿ.ಎಂ. ಗಿರಿರಾಜ್ ಅವರು ‘ರಾಮರಸ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈಗ ಚಿತ್ರತಂಡಕ್ಕೆ ಹೆಬಾ ಪಟೇಲ್​ ಸೇರ್ಪಡೆ ಆಗಿರುವ ಸುದ್ದಿಯನ್ನು ಹಂಚಿಕೊಳ್ಳಲಾಗಿದೆ.

ಬಿಗ್ ಬಾಸ್​ ವಿನ್ನರ್​ ಕಾರ್ತಿಕ್ ಮಹೇಶ್ ಅವರ ‘ರಾಮರಸ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾಗೆ ಈಗ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಹೆಬಾ ಪಟೇಲ್​ ನಿಭಾಯಿಸುವ ಪಾತ್ರವನ್ನು ಈ ಸಾಲುಗಳ ಮೂಲಕ ಚಿತ್ರತಂಡ ಬಣ್ಣಿಸಿದೆ.‘ಅವಳ‌ ಅಂದಕ್ಕೆ ಸೋತವರು, ಮಾತಿಗೆ ಮರುಳಾದವರು, ನಡಿಗೆಗೆ ನಡುಗಿದವರಾರೂ, ಭೂಮಿ‌ ಮೇಲೆ ಉಳಿದೇ ಇಲ್ಲ. ಗಂಡಸರ ಆಸೆಗೆ ಅವಳು ಒಂದು ಮಿಸ್ಟರಿ.. ಅವಳೇ ಭ್ರಮರಿ.’

ಇದನ್ನೂ ಓದಿ: ಹಾಟ್ ಆಗಿ ಪಡ್ಡೆಗಳ ಮನಗೆದ್ದ ಹೆಬಾ ಪಟೇಲ್

ಈ ಸಿನಿಮಾದಲ್ಲಿ ಹೆಬಾ ಪಟೇಲ್ ಅವರು ಲುಕ್ ಹೇಗಿರಲಿದೆ ಎಂಬುದನ್ನು ಕೂಡ ಚಿತ್ರತಂಡದವರು ಬಹಿರಂಗಪಡಿಸಿದ್ದಾರೆ. ತುಂಬ ಗ್ಲಾಮರಸ್​ ಆಗಿ ಅವರ ಕಾಣಿಸಿಕೊಂಡಿದ್ದಾರೆ. ಫಸ್ಟ್​ ಲುಕ್​ ಪೋಸ್ಟರ್​ ಮೂಲಕ ‘ರಾಮರಸ’ ಸಿನಿಮಾ ಮೇಲಿನ ಕೌತುಕ ಜಾಸ್ತಿ ಆಗಿದೆ. ನಿರ್ಮಾಣದ ಜೊತೆ ಈ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಒಂದು ವಿಶೇಷವಾದ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ