AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮರಸ’ ಚಿತ್ರದಲ್ಲಿ ಮಿಂಚಲು ಬಂದ ‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್

ಖ್ಯಾತ ನಟಿ ಹೆಬಾ ಪಟೇಲ್ ಅವರು ಕನ್ನಡ ಚಿತ್ರರಂಗಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ. ‘ರಾಮರಸ’ ಚಿತ್ರದಲ್ಲಿ ಅವರಿಗೆ ಒಂದು ಪ್ರಮುಖವಾದ ಪಾತ್ರವಿದೆ. ಬಿ.ಎಂ. ಗಿರಿರಾಜ್​ ನಿರ್ದೇಶನದ ಈ ಚಿತ್ರದಲ್ಲಿ ಕಾರ್ತಿಕ್​ ಮಹೇಶ್ ಹೀರೋ. ಈಗ ಹೆಬಾ ಅವರ ಫಸ್ಟ್​ ಬಿಡುಗಡೆ ಮಾಡಿ ನಿರೀಕ್ಷೆ ಹೆಚ್ಚಿಸಲಾಗಿದೆ. ಗುರು ದೇಶಪಾಂಡೆ ನಿರ್ಮಾಣದಲ್ಲಿ ಈ ಚಿತ್ರ ಸಿದ್ಧವಾಗುತ್ತಿದೆ.

‘ರಾಮರಸ’ ಚಿತ್ರದಲ್ಲಿ ಮಿಂಚಲು ಬಂದ ‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್
Hebah Patel
ಮದನ್​ ಕುಮಾರ್​
|

Updated on: Jan 06, 2025 | 10:15 PM

Share

ಶರಣ್ ನಟನೆಯ ‘ಅಧ್ಯಕ್ಷ’ ಸಿನಿಮಾ ನೋಡಿದವರಿಗೆ ನಟಿ ಹೆಬಾ ಪಟೇಲ್ ಅವರ ಪರಿಚಯ ಇದ್ದೇ ಇರುತ್ತದೆ. ಅದು ಅವರ ಮೊದಲ ಸಿನಿಮಾ ಕೂಡ ಹೌದು. ಆ ಸಿನಿಮಾ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದರು. ಬಳಿಕ ಅವರಿಗೆ ತಮಿಳು, ತೆಲುಗಿನಲ್ಲಿ ಸಿಕ್ಕಾಪಟ್ಟೆ ಅವಕಾಶಗಳು ಸಿಕ್ಕವು. ಬೇಡಿಕೆಯ ನಟಿಯಾಗಿ ಅವರು ಗುರುತಿಸಿಕೊಂಡರು. ಈಗ ಮತ್ತೆ ಅವರು ಕನ್ನಡ ಚಿತ್ರರಂಗಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಎಂಬುದು ವಿಶೇಷ. ‘ರಾಮರಸ’ ಸಿನಿಮಾದಲ್ಲಿ ಹೆಬಾ ಪಟೇಲ್ ಅವರಿಗೆ ವಿಶೇಷವಾದ ಪಾತ್ರ ಇದೆ.

ಗುರು ದೇಶಪಾಂಡೆ ಅವರು ನಿರ್ಮಾಣ ಮಾಡುತ್ತಿರುವ ‘ರಾಮರಸ’ ಸಿನಿಮಾ ಕೌತುಕ ಮೂಡಿಸಿದೆ. ಈ ಸಿನಿಮಾವನ್ನು ‘ಜಿ ಸಿನಿಮಾಸ್​’ ಹಾಗೂ ‘ಸೆವೆನ್ ಸ್ಟಾರ್​ ಸ್ಟುಡಿಯೋಸ್​’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಬಿ.ಎಂ. ಗಿರಿರಾಜ್ ಅವರು ‘ರಾಮರಸ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈಗ ಚಿತ್ರತಂಡಕ್ಕೆ ಹೆಬಾ ಪಟೇಲ್​ ಸೇರ್ಪಡೆ ಆಗಿರುವ ಸುದ್ದಿಯನ್ನು ಹಂಚಿಕೊಳ್ಳಲಾಗಿದೆ.

ಬಿಗ್ ಬಾಸ್​ ವಿನ್ನರ್​ ಕಾರ್ತಿಕ್ ಮಹೇಶ್ ಅವರ ‘ರಾಮರಸ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾಗೆ ಈಗ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಹೆಬಾ ಪಟೇಲ್​ ನಿಭಾಯಿಸುವ ಪಾತ್ರವನ್ನು ಈ ಸಾಲುಗಳ ಮೂಲಕ ಚಿತ್ರತಂಡ ಬಣ್ಣಿಸಿದೆ.‘ಅವಳ‌ ಅಂದಕ್ಕೆ ಸೋತವರು, ಮಾತಿಗೆ ಮರುಳಾದವರು, ನಡಿಗೆಗೆ ನಡುಗಿದವರಾರೂ, ಭೂಮಿ‌ ಮೇಲೆ ಉಳಿದೇ ಇಲ್ಲ. ಗಂಡಸರ ಆಸೆಗೆ ಅವಳು ಒಂದು ಮಿಸ್ಟರಿ.. ಅವಳೇ ಭ್ರಮರಿ.’

ಇದನ್ನೂ ಓದಿ: ಹಾಟ್ ಆಗಿ ಪಡ್ಡೆಗಳ ಮನಗೆದ್ದ ಹೆಬಾ ಪಟೇಲ್

ಈ ಸಿನಿಮಾದಲ್ಲಿ ಹೆಬಾ ಪಟೇಲ್ ಅವರು ಲುಕ್ ಹೇಗಿರಲಿದೆ ಎಂಬುದನ್ನು ಕೂಡ ಚಿತ್ರತಂಡದವರು ಬಹಿರಂಗಪಡಿಸಿದ್ದಾರೆ. ತುಂಬ ಗ್ಲಾಮರಸ್​ ಆಗಿ ಅವರ ಕಾಣಿಸಿಕೊಂಡಿದ್ದಾರೆ. ಫಸ್ಟ್​ ಲುಕ್​ ಪೋಸ್ಟರ್​ ಮೂಲಕ ‘ರಾಮರಸ’ ಸಿನಿಮಾ ಮೇಲಿನ ಕೌತುಕ ಜಾಸ್ತಿ ಆಗಿದೆ. ನಿರ್ಮಾಣದ ಜೊತೆ ಈ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಒಂದು ವಿಶೇಷವಾದ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ