AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshna-Sudeep: ‘ಹೆಬ್ಬುಲಿ’ ರೀ ರಿಲೀಸ್ ದರ್ಶನ್​ಗೆ ಟಾಂಗ್ ಕೊಟ್ಟ ಕಿಚ್ಚನ ಅಭಿಮಾನಿಗಳು

Darshan-Sudeep: ಕಿಚ್ಚ ಸುದೀಪ್ ನಟನೆಯ ‘ಹೆಬ್ಬುಲಿ’ ಸಿನಿಮಾ ಮರು ಬಿಡುಗಡೆ ಆಗಿದ್ದು, ಸಿನಿಮಾವನ್ನು ಸುದೀಪ್ ಅಭಿಮಾನಿಗಳು ಸ್ವಾಗತಿಸಿದ್ದಾರೆ. ಜೈಲಿನಲ್ಲಿರುವ ದರ್ಶನ್​ಗೆ ಟಾಂಗ್ ಸಹ ನೀಡಿದ್ದಾರೆ.

Darshna-Sudeep: ‘ಹೆಬ್ಬುಲಿ’ ರೀ ರಿಲೀಸ್ ದರ್ಶನ್​ಗೆ ಟಾಂಗ್ ಕೊಟ್ಟ ಕಿಚ್ಚನ ಅಭಿಮಾನಿಗಳು
ಹೆಬ್ಬುಲಿ
ಮಂಜುನಾಥ ಸಿ.
|

Updated on: Aug 02, 2024 | 12:58 PM

Share

ನಟ ದರ್ಶನ್ ತೂಗುದೀಪ, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ದರ್ಶನ್​ ಅಭಿಮಾನಿಗಳು ಅದನ್ನು ಹೆಮ್ಮೆಯಿಂದ ದರ್ಶನ್​ರ ಖೈದಿ ನಂಬರ್ ಅನ್ನು ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಬೈಕ್​ ಸ್ಟಿಕ್ಕರ್ ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ಇದೇ ವಿಷಯವನ್ನು ಇಟ್ಟುಕೊಂಡು ಇದೀಗ ಸುದೀಪ್ ಅಭಿಮಾನಿಗಳು ದರ್ಶನ್​ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಸುದೀಪ್ ನಟಿಸಿರುವ ‘ಹೆಬ್ಬುಲಿ’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾವನ್ನು ಕಿಚ್ಚ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಕೆಜಿ ಹಳ್ಳಿ ಚಿತ್ರಮಂದಿರ ಸೇರಿದಂತೆ ಇನ್ನೂ ಕೆಲವೆಡೆ ಸಿನಿಮಾ ಮರು ಬಿಡುಗಡೆ ಆಗಿದ್ದು, ಅಭಿಮಾನಿಗಳು ಬ್ಯಾನರ್, ಪೋಸ್ಟರ್​ಗಳನ್ನು ಹಾಕಿ ಮರು ಬಿಡುಗಡೆಯನ್ನು ಸಂಭ್ರಮಿಸುತ್ತಿದ್ದಾರೆ. ಇದರ ನಡುವೆ ನಗರದ ಚಿತ್ರಮಂದಿರ ಒಂದರ ಬಳಿ ಸುದೀಪ್ ಅಭಿಮಾನಿಗಳು ಹಾಕಿರುವ ಪೋಸ್ಟರ್ ಒಂದು ಗಮನ ಸೆಳೆಯುತ್ತಿದೆ. ಪೋಸ್ಟರ್​ನಲ್ಲಿ ಸಾಲೊಂದನ್ನು ಬರೆದು ದರ್ಶನ್​ಗೆ ಟಾಂಗ್​ ಕೊಟ್ಟಿದ್ದಾರೆ ಅಭಿಮಾನಿಗಳು.

‘ಹೆಬ್ಬುಲಿ’ ಸಿನಿಮಾದಲ್ಲಿ ಸುದೀಪ್ ಸೈನಿಕನ ಪಾತ್ರದಲ್ಲಿ ನಟಿಸಿರುವುದು ಗೊತ್ತೇ ಇದೆ. ಇದೇ ವಿಷಯವನ್ನು ಇಟ್ಟುಕೊಂಡು, ‘ಐ ಆಮ್ ನಾಟ್ ಎ ಖೈದಿ, ಐ ಆಮ್ ಎ ಸೋಲ್ಡರ್’ (ನಾನು ಖೈದಿ ಅಲ್ಲ, ನಾನು ಸೈನಿಕ) ಎಂಬ ಸಾಲನ್ನು ಬರೆದಿದ್ದಾರೆ. ಆ ಮೂಲಕ ಜೈಲಿನಲ್ಲಿರುವ ಕೈದಿ ನಂಬರ್ 6106, ದರ್ಶನ್​ಗೆ ಟಾಂಗ್ ಕೊಟ್ಟಿದ್ದಾರೆ ಸುದೀಪ್ ಅಭಿಮಾನಿಗಳು. ಸುದೀಪ್ ಅಭಿಮಾನಿಗಳು ಹಾಕಿರುವ ಈ ಪೋಸ್ಟರ್​ನ ಚಿತ್ರ ಹಾಗೂ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ:ಶುರುವಾಯ್ತು ಮರಾಠಿ ಬಿಗ್​ಬಾಸ್ 5, ಸುದೀಪ್ ಆಪ್ತ ನಿರೂಪಕ

ದರ್ಶನ್ ಜೈಲಿಗೆ ಹೋದ ಬಳಿಕ ಸುದೀಪ್ ಆ ಬಗ್ಗೆ ಹೆಚ್ಚಾಗೇನೂ ಮಾತನಾಡಿಲ್ಲ. ಆದರೆ ದರ್ಶನ್ ಅಭಿಮಾನಿಗಳು ಕೆಲವರು ದರ್ಶನ್, ಜೈಲಿಗೆ ಹೋಗಿರುವುದನ್ನು ಸಂಭ್ರಮಿಸುತ್ತಿದ್ದಾರೆ. ಅದೇ ಕಾರಣಕ್ಕೆ ಈಗ ಸುದೀಪ್ ಅಭಿಮಾನಿಗಳು ಹೀಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

‘ಹೆಬ್ಬುಲಿ’ ಸಿನಿಮಾ 2017 ರಲ್ಲಿ ಬಿಡುಗಡೆ ಆಗಿತ್ತು, ಕೃಷ್ಣ ನಿರ್ದೇಶಿಸಿದ್ದ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಸಿನಿಮಾದಲ್ಲಿ ರವಿಚಂದ್ರನ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾದಲ್ಲಿ ಅಮಲಾ ಪೌಲ್ ನಾಯಕಿಯಾಗಿದ್ದರು. ಸಿನಿಮಾದಲ್ಲಿ ಸುದೀಪ್ ಸೈನಿಕನ ಪಾತ್ರದಲ್ಲಿ ನಟಿಸಿದ್ದರು. ರವಿಚಂದ್ರನ್ ಅವರ ಕೊಲೆಯ ಸೇಡು ತೀರಿಸಿಕೊಳ್ಳುವ ಕತೆಯನ್ನು ಸಿನಿಮಾ ಒಳಗೊಂಡಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು