AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸರ ಎದುರು ಬಿಲ್ಡಪ್​ ಕೊಡಲು ಹೋಗಿ ಎಡವಟ್ಟು ಮಾಡಿಕೊಂಡ ಹೇಮಾ

ಸಿಸಿಬಿ ಪೊಲೀಸರು ಹೇಮಾ ಅವರನ್ನು ವಶಕ್ಕೆ ಪಡೆದರು. ಪೊಲೀಸರಿಗೆ ಹೇಮಾ ನಟಿ ಅನ್ನೋದೆ ಗೊತ್ತಿರಲಿಲ್ಲ. ಎಲ್ಲರನ್ನು ವಿಚಾರಣೆ ಮಾಡುವಂತೆ ಹೇಮಾ ಅವರನ್ನೂ ವಿಚಾರಣೆ ನಡೆಸಲಾಗಿತ್ತು. ಪೊಲೀಸರ ಎದುರು ಹೇಮಾ ಬಿಲ್ಡಪ್​ ಕೊಟ್ಟುಕೊಂಡರು.

ಸಿಸಿಬಿ ಪೊಲೀಸರ ಎದುರು ಬಿಲ್ಡಪ್​ ಕೊಡಲು ಹೋಗಿ ಎಡವಟ್ಟು ಮಾಡಿಕೊಂಡ ಹೇಮಾ
ಹೇಮಾ
ರಾಚಪ್ಪಾಜಿ ನಾಯ್ಕ್
| Edited By: |

Updated on: May 24, 2024 | 10:50 AM

Share

ನಟಿ ಹೇಮಾ (Hema) ಅವರಿಗೆ ಸಂಕಷ್ಟ ಹೆಚ್ಚಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಜಿಆರ್ ಫಾರ್ಮ್​ಹೌಸ್​ನಲ್ಲಿ ರೇವ್ ಪಾರ್ಟಿ ನಡೆಯುವಾಗ ಹೇಮಾ ಕೂಡ ಇದ್ದರು. ಅವರು ಮಾದಕ ವಸ್ತು ಸೇವಿಸಿದ್ದರು ಅನ್ನೋದು ರಕ್ತ ಪರೀಕ್ಷೆಯಿಂದ ಖಚಿತವಾಗಿದೆ. ಈ ಮಧ್ತೆ ಅವರು ಸಿಸಿಬಿ ಪೊಲೀಸರ ಎದುರು ಬಿಲ್ಡಪ್ ಕೊಡಲು ಹೋಗಿ ತೊಂದರೆ ಅನುಭವಿಸಿದ್ದಾರೆ. ಅವರ ಹೆಸರು ದೊಡ್ಡ ಮಟ್ಟದಲ್ಲಿ ಚರ್ಚೆ ಆಗಲು ಅವರು ಮಾಡಿಕೊಂಡ ಎಡವಟ್ಟೇ ಕಾರಣ.

ಸಿಸಿಬಿ ಪೊಲೀಸರು ಹೇಮಾ ಅವರನ್ನು ವಶಕ್ಕೆ ಪಡೆದರು. ಪೊಲೀಸರಿಗೆ ಹೇಮಾ ನಟಿ ಅನ್ನೋದೆ ಗೊತ್ತಿರಲಿಲ್ಲ. ಎಲ್ಲರನ್ನು ವಿಚಾರಣೆ ಮಾಡುವಂತೆ ಹೇಮಾ ಅವರನ್ನೂ ವಿಚಾರಣೆ ನಡೆಸಲಾಗಿತ್ತು. ಪೊಲೀಸರ ಎದುರು ಹೇಮಾ ಬಿಲ್ಡಪ್​ ಕೊಟ್ಟುಕೊಂಡರು. ‘ನಾನು ದೊಡ್ಡ ನಟಿ. ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ’ ಎಂದಿದ್ದರಂತೆ. ಈ ವೇಳೆ ಪೊಲೀಸರು ಪರಿಶೀಲನೆ ಮಾಡಿದಾಗ ಅವರು ನಟಿ ಅನ್ನೋದು ಗೊತ್ತಾಗಿದೆ.

ಈ ಮಧ್ಯೆ ಹೇಮಾ ಅವರು ಸಿಸಿಬಿ ಪೊಲೀಸರ ಜೊತೆ ಕಿರಿಕ್ ಕೂಡ ಮಾಡಿದ್ದಾರೆ. ವಿಚಾರಣೆಗೆ ಎಂದು ಪೊಲೀಸರು ಇರಿಸಿಕೊಂಡಿದ್ದಾಗ ಹೇಮಾ ಕಿರಿಕ್ ತೆಗೆದಿದ್ದರು. ‘ನನಗೆ ಸರಿಯಾದ ಊಟ ಕೊಟ್ಟಿಲ್ಲ ನಾನೋರ್ವ ನಟಿ. ಆದರೂ ಸರಿಯಾಗಿ ಟ್ರೀಟ್ ಮಾಡಿಲ್ಲ’ ಎಂದು ಕಿರಿಕ್ ಮಾಡಿಕೊಂಡಿದ್ದರು. ಜಿಆರ್ ಫಾರ್ಮ್​​ಹೌಸ್​​ನಲ್ಲಿ ರೇವ್ ಪಾರ್ಟಿ ಶನಿವಾರ ರಾತ್ರಿಯಿಂದಲೇ ಶುರುವಾಗಿತ್ತು. ಒಂದು ದಿನ ಪಾರ್ಟಿ ಆದ ಬಳಿಕ ಸಿಸಿಬಿ ಪೊಲೀಸರಿಗೆ ವಿಚಾರ ತಿಳಿದು ರೇಡ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾ, ಆಶು ರೈ ರಿಪೋರ್ಟ್ ಪಾಸಿಟಿವ್

ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಜಿಆರ್ ಫಾರ್ಮ್​ಹೌಸ್​ನಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಮಾಹಿತಿ ತಿಳಿದ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಹಲವರು ಸಿಕ್ಕಿ ಬಿದ್ದಿದ್ದಾರೆ. ಹಲವು ಸೆಲೆಬ್ರಿಟಿಗಳ ಹೆಸರು ಈ ಪಾರ್ಟಿಯಲ್ಲಿ ಕೇಳಿ ಬಂದಿತ್ತು. ಅನೇಕ ಸೆಲೆಬ್ರಿಟಿಗಳು, ಸಾಮಾನ್ಯರು ಡ್ರಗ್ ಸೇವನ್ ಮಾಡಿದ್ದು ಖಚಿತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ