AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸರ ಎದುರು ಬಿಲ್ಡಪ್​ ಕೊಡಲು ಹೋಗಿ ಎಡವಟ್ಟು ಮಾಡಿಕೊಂಡ ಹೇಮಾ

ಸಿಸಿಬಿ ಪೊಲೀಸರು ಹೇಮಾ ಅವರನ್ನು ವಶಕ್ಕೆ ಪಡೆದರು. ಪೊಲೀಸರಿಗೆ ಹೇಮಾ ನಟಿ ಅನ್ನೋದೆ ಗೊತ್ತಿರಲಿಲ್ಲ. ಎಲ್ಲರನ್ನು ವಿಚಾರಣೆ ಮಾಡುವಂತೆ ಹೇಮಾ ಅವರನ್ನೂ ವಿಚಾರಣೆ ನಡೆಸಲಾಗಿತ್ತು. ಪೊಲೀಸರ ಎದುರು ಹೇಮಾ ಬಿಲ್ಡಪ್​ ಕೊಟ್ಟುಕೊಂಡರು.

ಸಿಸಿಬಿ ಪೊಲೀಸರ ಎದುರು ಬಿಲ್ಡಪ್​ ಕೊಡಲು ಹೋಗಿ ಎಡವಟ್ಟು ಮಾಡಿಕೊಂಡ ಹೇಮಾ
ಹೇಮಾ
ರಾಚಪ್ಪಾಜಿ ನಾಯ್ಕ್
| Edited By: |

Updated on: May 24, 2024 | 10:50 AM

Share

ನಟಿ ಹೇಮಾ (Hema) ಅವರಿಗೆ ಸಂಕಷ್ಟ ಹೆಚ್ಚಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಜಿಆರ್ ಫಾರ್ಮ್​ಹೌಸ್​ನಲ್ಲಿ ರೇವ್ ಪಾರ್ಟಿ ನಡೆಯುವಾಗ ಹೇಮಾ ಕೂಡ ಇದ್ದರು. ಅವರು ಮಾದಕ ವಸ್ತು ಸೇವಿಸಿದ್ದರು ಅನ್ನೋದು ರಕ್ತ ಪರೀಕ್ಷೆಯಿಂದ ಖಚಿತವಾಗಿದೆ. ಈ ಮಧ್ತೆ ಅವರು ಸಿಸಿಬಿ ಪೊಲೀಸರ ಎದುರು ಬಿಲ್ಡಪ್ ಕೊಡಲು ಹೋಗಿ ತೊಂದರೆ ಅನುಭವಿಸಿದ್ದಾರೆ. ಅವರ ಹೆಸರು ದೊಡ್ಡ ಮಟ್ಟದಲ್ಲಿ ಚರ್ಚೆ ಆಗಲು ಅವರು ಮಾಡಿಕೊಂಡ ಎಡವಟ್ಟೇ ಕಾರಣ.

ಸಿಸಿಬಿ ಪೊಲೀಸರು ಹೇಮಾ ಅವರನ್ನು ವಶಕ್ಕೆ ಪಡೆದರು. ಪೊಲೀಸರಿಗೆ ಹೇಮಾ ನಟಿ ಅನ್ನೋದೆ ಗೊತ್ತಿರಲಿಲ್ಲ. ಎಲ್ಲರನ್ನು ವಿಚಾರಣೆ ಮಾಡುವಂತೆ ಹೇಮಾ ಅವರನ್ನೂ ವಿಚಾರಣೆ ನಡೆಸಲಾಗಿತ್ತು. ಪೊಲೀಸರ ಎದುರು ಹೇಮಾ ಬಿಲ್ಡಪ್​ ಕೊಟ್ಟುಕೊಂಡರು. ‘ನಾನು ದೊಡ್ಡ ನಟಿ. ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ’ ಎಂದಿದ್ದರಂತೆ. ಈ ವೇಳೆ ಪೊಲೀಸರು ಪರಿಶೀಲನೆ ಮಾಡಿದಾಗ ಅವರು ನಟಿ ಅನ್ನೋದು ಗೊತ್ತಾಗಿದೆ.

ಈ ಮಧ್ಯೆ ಹೇಮಾ ಅವರು ಸಿಸಿಬಿ ಪೊಲೀಸರ ಜೊತೆ ಕಿರಿಕ್ ಕೂಡ ಮಾಡಿದ್ದಾರೆ. ವಿಚಾರಣೆಗೆ ಎಂದು ಪೊಲೀಸರು ಇರಿಸಿಕೊಂಡಿದ್ದಾಗ ಹೇಮಾ ಕಿರಿಕ್ ತೆಗೆದಿದ್ದರು. ‘ನನಗೆ ಸರಿಯಾದ ಊಟ ಕೊಟ್ಟಿಲ್ಲ ನಾನೋರ್ವ ನಟಿ. ಆದರೂ ಸರಿಯಾಗಿ ಟ್ರೀಟ್ ಮಾಡಿಲ್ಲ’ ಎಂದು ಕಿರಿಕ್ ಮಾಡಿಕೊಂಡಿದ್ದರು. ಜಿಆರ್ ಫಾರ್ಮ್​​ಹೌಸ್​​ನಲ್ಲಿ ರೇವ್ ಪಾರ್ಟಿ ಶನಿವಾರ ರಾತ್ರಿಯಿಂದಲೇ ಶುರುವಾಗಿತ್ತು. ಒಂದು ದಿನ ಪಾರ್ಟಿ ಆದ ಬಳಿಕ ಸಿಸಿಬಿ ಪೊಲೀಸರಿಗೆ ವಿಚಾರ ತಿಳಿದು ರೇಡ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾ, ಆಶು ರೈ ರಿಪೋರ್ಟ್ ಪಾಸಿಟಿವ್

ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಜಿಆರ್ ಫಾರ್ಮ್​ಹೌಸ್​ನಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಮಾಹಿತಿ ತಿಳಿದ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಹಲವರು ಸಿಕ್ಕಿ ಬಿದ್ದಿದ್ದಾರೆ. ಹಲವು ಸೆಲೆಬ್ರಿಟಿಗಳ ಹೆಸರು ಈ ಪಾರ್ಟಿಯಲ್ಲಿ ಕೇಳಿ ಬಂದಿತ್ತು. ಅನೇಕ ಸೆಲೆಬ್ರಿಟಿಗಳು, ಸಾಮಾನ್ಯರು ಡ್ರಗ್ ಸೇವನ್ ಮಾಡಿದ್ದು ಖಚಿತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ