AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಹೇಮಂತ್​ ಹೆಗಡೆ ‘ನೆಟ್​ವರ್ಕ್​’; ಹಳೇ ಸ್ನೇಹಿತರ ಹೊಸ ಪ್ರಯತ್ನ ಹೀಗಿದೆ..

ಈ ತಲೆಮಾರಿನವರಿಗೆ ಮೊಬೈಲ್​ ಅಡಿಕ್ಷನ್​ ಜಾಸ್ತಿ ಆಗಿದೆ. ಅದರಿಂದ ಹಲವು ಸಮಸ್ಯೆಗಳು ಎದುರಾಗುತ್ತವೆ. ಅದಕ್ಕೆ ಪರಿಹಾರ ಏನು ಎಂಬುದು ಕೂಡ ‘ನೆಟ್​ವರ್ಕ್​’ನಲ್ಲಿ ಇರಲಿದೆ.

ಇದು ಹೇಮಂತ್​ ಹೆಗಡೆ ‘ನೆಟ್​ವರ್ಕ್​’; ಹಳೇ ಸ್ನೇಹಿತರ ಹೊಸ ಪ್ರಯತ್ನ ಹೀಗಿದೆ..
ಮದನ್​ ಕುಮಾರ್​
|

Updated on: Mar 30, 2023 | 7:30 AM

Share

ಹೇಮಂತ್ ಹೆಗಡೆ (Hemanth Hegde) ಅವರು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಬಣ್ಣದ ಲೋಕದಲ್ಲಿ ಅವರಿಗೆ ಅನೇಕ ಹಿರಿಯ ಸ್ನೇಹಿತರಿದ್ದಾರೆ. ಅವರೆಲ್ಲರೂ ಸೇರಿ ಒಂದು ‘ನೆಟ್​ವರ್ಕ್​’ ಶುರು ಮಾಡಿದ್ದಾರೆ. ‘ನೆಟ್​ವರ್ಕ್​’ ಎಂಬುದು ಹೇಮಂತ್​ ಹೆಗಡೆ ಅವರ ನಿರ್ದೇಶನದ ಹೊಸ ಸಿನಿಮಾ. ಈ ಚಿತ್ರದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಮೊಬೈಲ್​ ವ್ಯಸನದ (Mobile Addiction) ಕುರಿತ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಮೇ 15ರಂದು ಈ ಚಿತ್ರದ ಶೂಟಿಂಗ್​ ಆರಂಭ ಆಗಲಿದೆ. ರಾಜೇಶ್​ ನಟರಂಗ, ಸುಚೇಂದ್ರ ಪ್ರಸಾದ್​, ಕೆಎಂ ಚೈತನ್ಯ, ಸಾಕ್ಷಿ ಮೇಘನಾ ಮುಂತಾದವರು ‘ನೆಟ್​ವರ್ಕ್​’ (Network Movie) ಚಿತ್ರದಲ್ಲಿ ನಟಿಸಲಿದ್ದಾರೆ. ಈ ಸಿನಿಮಾದ ವಿಶೇಷತೆ ಏನು ಎಂಬ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

30 ವರ್ಷಗಳ ಹಿಂದೆ ಹೇಮಂತ್​ ಹೆಗಡೆ ಮತ್ತು ಅವರ ಗೆಳೆಯರೆಲ್ಲ ಸೇರಿ ‘ದೃಷ್ಟಿ’ ಎಂಬ ರಂಗತಂಡವನ್ನು ಕಟ್ಟಿಕೊಂಡಿದ್ದರು. ಕಾರಣಾಂತರಗಳಿಂದ ಆ ತಂಡದಲ್ಲಿ ಹೆಚ್ಚಿನ ಚಟುವಟಿಕೆಗಳು ಆಗಿರಲಿಲ್ಲ. ಆದರೆ ಈಗ ಅದೇ ಹಳೇ ತಂಡದ ಗೆಳೆಯರೆಲ್ಲ ಸೇರಿಕೊಂಡು ಹೊಸ ಕಾನ್ಸೆಪ್ಟ್​ ಇರುವ ‘ನೆಟ್​ವರ್ಕ್​’ ಸಿನಿಮಾವನ್ನು ಆರಂಭಿಸುತ್ತಿದ್ದಾರೆ. ಪ್ರಭಂಜನ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: ‘ಫ್ಲೆಮಿಂಗೋ’ 10 ವರ್ಷಗಳ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ಸಾಧಕರಿಗೆ ಪ್ರಶಸ್ತಿ ಪ್ರದಾನ

‘ನೆಟ್​ವರ್ಕ್​’ ಚಿತ್ರದ ಬಗ್ಗೆ ಹೇಮಂತ್​ ಹೆಗಡೆ ಮಾತನಾಡಿದ್ದಾರೆ. ‘ಹಲವು ಕಾರಣದಿಂದ ನನಗೆ ಈ ಸಿನಿಮಾ ತುಂಬ ಸ್ಪೆಷಲ್​. ನಾವು ಎಲ್ಲರೂ ಮೊಬೈಲ್​ನಿಂದ ಸಮಸ್ಯೆ ಎದುರಿಸುತ್ತಿದ್ದೇವೆ. ತಂತ್ರಜ್ಞಾನಕ್ಕೆ ನಾವು ಬಹಳ ಅಡಿಕ್ಟ್​ ಆಗಿದ್ದೇವೆ. ಸೋಶಿಯಲ್ ಮೀಡಿಯಾದಿಂದ ಆದ ಅನಾಹುತಗಳ ಬಗ್ಗೆ ಪ್ರತಿ ದಿನ ಸುದ್ದಿ ಕೇಳುತ್ತೇವೆ. ಮೊಬೈಲ್​ ಕೊಡಿಸಿಲ್ಲ ಅಂತ ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಉದಾಹರಣೆ ಇದೆ. ಮೊಬೈಲ್​​ ಗೇಮ್​ನಲ್ಲಿ ಮಕ್ಕಳು ಮುಳುಗಿರುತ್ತಾರೆ. ಆ ವಿಚಾರಗಳನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದೇವೆ. ಸೋಶಿಯಲ್​ ಮೀಡಿಯಾ ವ್ಯಸನಕ್ಕೆ ಪರಿಹಾರ ಏನು ಎಂಬುದನ್ನೂ ಈ ಚಿತ್ರದಲ್ಲಿ ತೋರಿಸುತ್ತೇವೆ’ ಎಂದು ಹೇಮಂತ್​ ಹೆಗಡೆ ಹೇಳಿದ್ದಾರೆ.

ಇದನ್ನೂ ಓದಿ: ‘ಒಂದು ಸರಳ ಪ್ರೇಮ ಕಥೆ’ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸ್ವಾತಿಷ್ಠ; ಪಾತ್ರದ ಬಗ್ಗೆ ನಟಿ ಹೇಳಿದ್ದಿಷ್ಟು

‘ಇಂಥ ಸಿನಿಮಾವನ್ನು ನಿರ್ಮಾಣ ಮಾಡಲು ಒಳ್ಳೆಯ ಅಭಿರುಚಿ ಇರುವ ನಿರ್ಮಾಪಕರು ಬೇಕು. ಪ್ರಭಂಜನ್​ ಅವರು ಸಾಹಿತ್ಯದ ಬಗ್ಗೆ ಬಹಳ ಆಸಕ್ತಿ ಇರುವಂಥವರು. ಕಮರ್ಷಿಯಲ್​ ಅಂಶಗಳು ಇಲ್ಲದ ಈ ರೀತಿಯ ಚಿತ್ರವನ್ನು ನಿರ್ಮಿಸಲು ಪ್ರಭಂಜನ್​ ಮುಂದೆಬಂದಿದ್ದಾರೆ’ ಎಂದು ಹೇಮಂತ್​ ಹೆಗಡೆ ಹೇಳಿದ್ದಾರೆ.

‘ಸೋಶಿಯಲ್​ ಮೀಡಿಯಾದ ದುಷ್ಪರಿಣಾಮದ ಬಗ್ಗೆ ನೋಡಲು ಜನರು ಇಷ್ಟಪಡುವುದಿಲ್ಲ. ಆದರೆ ಸಿನಿಮಾ ಮಾಧ್ಯಮದ ಮೂಲಕ ಹೇಳಿದರೆ ಪರಿಣಾಮಕಾರಿಯಾಗಿರುತ್ತದೆ ಎಂಬ ನಂಬಿಕೆ ನಮಗಿದೆ’ ಎಂದಿದ್ದಾರೆ ನಿರ್ಮಾಪಕರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು