AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಲ್ಫಾ’ ಸಿನಿಮಾದ ‘ರಾವ ರಾವ’ ಕಲರ್​ಫುಲ್ ಹಾಡಿಗೆ ಅನೂಪ್ ಸೀಳಿನ್ ಸಂಗೀತ

ಹೇಮಂತ್‌ ಕುಮಾರ್ ಅಭಿನಯದ, ವಿಜಯ್ ನಿರ್ದೇಶನದ ‘ಆಲ್ಫಾ’ ಸಿನಿಮಾದಿಂದ ಹಾಡು ರಿಲೀಸ್ ಆಗಿದೆ. ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ‘ಎಲ್​ಎ’ ಬ್ಯಾನರ್‌ ಮೂಲಕ ಸಿನಿಮಾ ನಿರ್ಮಾಣ ಆಗುತ್ತಿದೆ. ಹೊಸ ಹಾಡಿಗೆ ಅನೂರಾಗ ಕುಲಕರ್ಣಿ ಧ್ವನಿ ನೀಡಿದ್ದಾರೆ. ಹಾಡಿನಲ್ಲಿ ಹೇಮಂತ್ ಅವರ ಡ್ಯಾನ್ಸ್ ಗಮನ ಸೆಳೆದಿದೆ.

‘ಆಲ್ಫಾ’ ಸಿನಿಮಾದ ‘ರಾವ ರಾವ’ ಕಲರ್​ಫುಲ್ ಹಾಡಿಗೆ ಅನೂಪ್ ಸೀಳಿನ್ ಸಂಗೀತ
Alpha Men Love Vengeance Movie Still
ಮದನ್​ ಕುಮಾರ್​
|

Updated on: Dec 30, 2025 | 3:46 PM

Share

ನಿರ್ದೇಶಕ ವಿಜಯ್ ಅವರು ಈ ಮೊದಲು ‘ಗೀತಾ’ ಮತ್ತು ‘ಹೊಯ್ಸಳ’ ಸಿನಿಮಾಗಳನ್ನು ಮಾಡಿದ್ದರು. ಈಗ ಅವರು ‘ಆಲ್ಫಾ’ (Alpha) ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಆಲ್ಫಾ – ಮೆನ್ ಲವ್ ವೆಂಜೆನ್ಸ್’ (Alpha Men Love Vengeance) ಎಂಬುದು ಈ ಸಿನಿಮಾದ ಪೂರ್ತಿ ಟೈಟಲ್. ಈ ಸಿನಿಮಾದಿಂದ ಈಗೊಂದು ಹೊಸ ಹಾಡು ಬಿಡುಗಡೆ ಆಗಿದೆ. ‘ರಾವ ರಾವ’ ಎಂಬ ಈ ಹಾಡನ್ನು ಅದ್ದೂರಿಯಾಗಿ ಚಿತ್ರಿಸಲಾಗಿದೆ. ತುಂಬ ಕಲರ್​​ಫುಲ್ ಆಗಿ ಈ ಹಾಡು ಮೂಡಿಬಂದಿದೆ. ಹಾಡಿನ ಬಿಡುಗಡೆ ಬಳಿಕ ‘ಆಲ್ಫಾ’ ಸಿನಿಮಾ ಮೇಲಿನ ಕೌತುಕ ಹೆಚ್ಚಿದೆ.

‘ಆಲ್ಫಾ’ ಸಿನಿಮಾದಲ್ಲಿ ನಾಯಕನಾಗಿ ಹೇಮಂತ್‌ ಕುಮಾರ್ ಅವರು ರಗಡ್ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಈ ಸಿನಿಮಾದ ಮೊದಲ ಹಾಡು ‘ರಾವ ರಾವ..’ ಬಿಡುಗಡೆ ಆಗಿ ಜನಮೆಚ್ಚುಗೆ ಪಡೆಯುತ್ತಿದೆ. ಈ ಹಾಡಿಗೆ ಅನೂಪ್ ಸೀಳಿನ್ ಅವರು ಸಂಗೀತ ನೀಡಿದ್ದಾರೆ. ನಾಗಾರ್ಜುನ ಶರ್ಮಾ ಅವರು ಸಾಹಿತ್ಯ ಬರೆದಿದ್ದಾರೆ. ಅನೂರಾಗ ಕುಲಕರ್ಣಿ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ.

 ‘ರಾವ ರಾವ’ ಹಾಡು:

ಈ ಮೊದಲು ‘ಆಲ್ಫಾ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿ ಗಮನ ಸೆಳೆದಿತ್ತು. ಇದು ಆ್ಯಕ್ಷನ್ ಜೊತೆಗೆ ಅಪ್ಪ-ಮಗನ ಭಾವನಾತ್ಮಕ ಕಥೆ ಹೊಂದಿರುವ ಸಿನಿಮಾ ಎಂದು ಚಿತ್ರತಂಡ ಹೇಳಿದೆ. ಈ ಸಿನಿಮಾ ಮೂಲಕ ಹೇಮಂತ್ ಕುಮಾರ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹಾಡಿನಲ್ಲಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ.

ಸಿನಿಮಾ ಬಗ್ಗೆ ನಿರ್ದೇಶಕ ವಿಜಯ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಆ್ಯಕ್ಷನ್ ಮತ್ತು ಕ್ರೈಂನ ಭಯಾನಕತೆ ಎಷ್ಟಿರುತ್ತದೆ ಎಂಬುದು ಸಿನಿಮಾದ ಪೋಸ್ಟರ್​ನಲ್ಲಿ ಕಾಣಿಸಿಕೊಂಡಿದೆ. ಸಿನಿಮಾದಲ್ಲಿ 3 ಪಾತ್ರಗಳು ಪ್ರಮುಖವಾಗಿ ಬರಲಿವೆ’ ಎಂದು ಅವರು ಹೇಳಿದ್ದಾರೆ. ಆನಂದ್ ಕುಮಾರ್ ಅವರು ನಿರ್ಮಾಪಕರಾಗಿ ಈ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.

ಇದನ್ನೂ ಓದಿ: ‘ಆಲ್ಫಾ’ ಸಿನಿಮಾ ಫಸ್ಟ್ ಲುಕ್; ಹೀರೋ ಆದ ಹೇಮಂತ್ ಕುಮಾರ್

ನಟ ಹೇಮಂತ್ ಕುಮಾರ್ ಅವರು ‘ಆಲ್ಫಾ’ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಬಂದಿದ್ದಾರೆ. ರಾಘು ಶಿವಮೊಗ್ಗ ಬಳಿ ಅವರು ನಟನೆಯ ತಯಾರಿ ನಡೆಸಿದ್ದಾರೆ. ಅರ್ಜುನ್ ಜೊತೆ ಸಾಹಸ ಅಭ್ಯಾಸ ಮಾಡಿದ್ದಾರೆ. ಅಲ್ಲದೇ, ಡ್ಯಾನ್ಸ್ ಮತ್ತು ಮಾರ್ಷಲ್ ಆರ್ಟ್ ಕಲಿತು ಹೀರೋ ಆಗಲು ಬೇಕಾದ ಪೂರ್ತಿ ತಯಾರಿ ಮಾಡಿಕೊಂಡು ಎಂಟ್ರಿ ನೀಡಿದ್ದಾರೆ. ಕಾರ್ತಿಕ್ ಛಾಯಾಗ್ರಹಣ ಮಾಡಿರುವ ಈ ಸಿನಿಮಾಗೆ ಮಾಸ್ತಿ ಅವರು ಸಂಭಾಷಣೆ ಬರೆದಿದ್ದಾರೆ. ನಾಯಕಿ ಯಾರು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು