AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಪ್ತ ಸಾಗರ ದಾಟಿ’ ದೊಡ್ಮನೆ ತಲುಪಿದ ಹೇಮಂತ್ ರಾವ್: ಶಿವಣ್ಣನೊಟ್ಟಿಗೆ ಸಿನಿಮಾ

Shiva Rajkumar: ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಮೂಲಕ ಹೊಸ ಅಲೆ ಎಬ್ಬಿಸಿರುವ ನಿರ್ದೇಶಕ ಹೇಮಂತ್ ರಾವ್, ಶಿವರಾಜ್ ಕುಮಾರ್ ಅವರಿಗಾಗಿ ಸಿನಿಮಾ ಮಾಡಲಿದ್ದಾರೆ.

‘ಸಪ್ತ ಸಾಗರ ದಾಟಿ’ ದೊಡ್ಮನೆ ತಲುಪಿದ ಹೇಮಂತ್ ರಾವ್: ಶಿವಣ್ಣನೊಟ್ಟಿಗೆ ಸಿನಿಮಾ
ಮಂಜುನಾಥ ಸಿ.
|

Updated on: Jan 31, 2024 | 7:40 PM

Share

ಸಪ್ತ ಸಾಗರದಾಚೆ ಎಲ್ಲೋ’ (Sapta Sagaradache Ello) ಸಿನಿಮಾ ಮೂಲಕ ರಾಷ್ಟ್ರಮಟ್ಟದಲ್ಲಿ ಹವಾ ಎಬ್ಬಿಸಿರುವ ನಿರ್ದೇಶಕ ಹೇಮಂತ್ ರಾವ್​ಗೆ ಈಗ ಅವರದ್ದೇ ಆದ ಅಭಿಮಾನಿ ಬಳಗ ಸೃಷ್ಟಿಯಾಗಿದೆ. ಸಿನಿ ಪ್ರೇಮಿಗಳು ಫಿದಾ ಆಗುವ ರೀತಿ ಮನು-ಪ್ರಿಯಾ-ಸುರಭಿಯ ಪ್ರೇಮಕತೆಯನ್ನು ಹೇಮಂತ್ ರಾವ್ ಕಟ್ಟಿಕೊಟ್ಟಿದ್ದಾರೆ. ಹೇಮಂತ್ ರಾವ್​ರ ಮುಂದಿನ ಸಿನಿಮಾ ಯಾವುದಾಗಿರಬಹುದು ಎಂಬ ಕುತೂಹಲ ಸಿನಿಮಾ ಪ್ರೇಮಿಗಳಲ್ಲಿ ಮೂಡಿದೆ. ಅದಕ್ಕೆ ಉತ್ತರವೂ ಇದೀಗ ದೊರೆತಿದೆ.

ಕೆಲ ದಿನಗಳ ಹಿಂದಷ್ಟೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಹೇಮಂತ್ ರಾವ್, ‘ರೊಮ್ಯಾಂಟಿಕ್ ಅಥವಾ ಲವ್ ಸ್ಟೋರಿ ಸಿನಿಮಾಗಳಿಂದ ತುಸು ದೂರ ಹೋಗಲಿದ್ದೇನೆ’ ಎಂಬರ್ಥದ ಮಾತುಗಳನ್ನಾಡಿದ್ದರು. ಅದರ ಬೆನ್ನಲ್ಲೆ ಈಗ ಹೇಮಂತ್ ರಾವ್, ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಅವರೊಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ‘ಸಪ್ತ ಸಾಗರದಾಚೆ ಎಲ್ಲೋ’ ನಿರ್ದೇಶಕ ಹೇಮಂತ್ ರಾವ್ ಅವರಲ್ಲಿ ರಕ್ಷಿತ್​ಗೆ ಇಷ್ಟವಾಗಿದ್ದೇನು?

ಹೇಮಂತ್ ರಾವ್, ಶಿವಣ್ಣನಿಗೆ ಈಗಾಗಲೇ ಕತೆ ಹೇಳಿದ್ದು, ಸಿನಿಮಾ ಮಾಡಲು ಒಪ್ಪಿಗೆ ಸಹ ಸೂಚಿಸಲಾಗಿದೆ. ಆದಷ್ಟು ಶೀಘ್ರವೇ ಹೇಮಂತ್ ರಾವ್ ಹಾಗೂ ಶಿವರಾಜ್ ಕುಮಾರ್ ಸಿನಿಮಾ ಸೆಟ್ಟೇರಲಿದೆ. 2023ರ ಅಂತ್ಯದಲ್ಲಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡಿದ್ದ ಹೇಮಂತ್ ರಾವ್, ತಮಗೆ ಆಕ್ಷನ್ ಸಿನಿಮಾಗಳು ಇಷ್ಟವೆಂದು, ಶಿವಣ್ಣ ತಮ್ಮ ನೆಚ್ಚಿನ ಹೀರೋ ಎಂದು. ಇತ್ತೀಚೆಗೆ ತಾವು ನೋಡಿದ ಸಿನಿಮಾಗಳಲ್ಲಿ ‘ಜೈಲರ್​’ನಲ್ಲಿ ಶಿವಣ್ಣ ನಡೆದುಕೊಂಡ ಬಂದ ರೀತಿ ಸಖತ್ ಇಷ್ಟವಾಯ್ತೆಂದು ಹೇಳಿಕೊಂಡಿದ್ದರು. ಅದಾದ ಕೆಲವೇ ದಿನಗಳಲ್ಲಿ ಇದೀಗ ಶಿವಣ್ಣನೊಟ್ಟಿಗೆ ಹೇಮಂತ್ ಸಿನಿಮಾ ಮಾಡುತ್ತಿದ್ದಾರೆ.

ಶಿವರಾಜ್ ಕುಮಾರ್ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಒಟ್ಟೊಟ್ಟಿಗೆ ನಟಿಸುತ್ತಿದ್ದಾರೆ. ‘ಭೈರತಿ ರಣಗಲ್’ ಬಿಡುಗಡೆಗೆ ರೆಡಿಯಾಗುತ್ತಿದೆ. ‘ಕರಟಕ-ಧಮನಕ’ ಬಿಡುಗಡೆ ದಿನಾಂಕ ಘೋಷಣೆ ಆಗಲಿದೆ. ದಿನಕರ್ ತೂಗುದೀಪ ಜೊತೆಗೆ ಸಿನಿಮಾ ಘೋಷಣೆ ಆಗಿದೆ. ‘ಘೋಸ್ಟ್ 2’ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಒಂದು ತೆಲುಗು ಹಾಗೂ ಒಂದು ತಮಿಳು ಸಿನಿಮಾಗಳಲ್ಲಿ ನಟಿಸಲಿದ್ದಾರೆ. ರಾಮ್ ಚರಣ್ ಜೊತೆಗೆ ಒಂದು ಸಿನಿಮಾದಲ್ಲಿ ನಟಿಸಲಿದ್ದಾರೆ. ಇದೆಲ್ಲದರ ನಡುವೆ ಹೇಮಂತ್ ರಾವ್​ ಜೊತೆ ಸಿನಿಮಾ ಮಾಡಲಿದ್ದಾರೆ ಶಿವರಾಜ್ ಕುಮಾರ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ