AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಬಗ್ಗೆ ನನಗೇನು ಗೊತ್ತಿಲ್ಲ ಎನ್ನುತ್ತಿರುವ ದರ್ಶನ್ ವಿರುದ್ಧ ಸಿಕ್ಕಿದೆ ಪ್ರಮುಖ ಸಾಕ್ಷಿಗಳು

ದರ್ಶನ್ ಅವರು ಕೊಲೆ ಕೇಸ್​​ನಲ್ಲಿ ಜೈಲು ಸೇರಿದ್ದಾರೆ. ಈಗಾಗಲೇ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಳ್ಳುವ ಹಂತ ತಲುಪಿದೆ. ದರ್ಶನ್ ತಮಗೆ ಇರುವ ಪ್ರಭಾವ ಬಳಸಿಕೊಂಡು ಹೊರಗೆ ಬರುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ಆಗಿಲ್ಲ. ಸದ್ಯ ಪೊಲೀಸರು ದರ್ಶನ್ ವಿರುದ್ಧ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ.

ಕೊಲೆ ಬಗ್ಗೆ ನನಗೇನು ಗೊತ್ತಿಲ್ಲ ಎನ್ನುತ್ತಿರುವ ದರ್ಶನ್ ವಿರುದ್ಧ ಸಿಕ್ಕಿದೆ ಪ್ರಮುಖ ಸಾಕ್ಷಿಗಳು
ದರ್ಶನ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 14, 2024 | 8:58 AM

Share

ರೇಣುಕಾ ಸ್ವಾಮಿ ಕೊಲೆ ಬಗ್ಗೆ ದರ್ಶನ್ (Darshan)​ ಏನೆಂದರೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದಾರೆ. ವಿಚಾರಣೆ ವೇಳೆ ಅವರು ಇದೇ ಹೇಳಿಕೆಯನ್ನು ರಿಪೀಟ್ ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಏನೇ ಹೇಳಿಕೆ ನೀಡದಿದರೂ ಅವರ ವಿರುದ್ಧ  ಸಾಕ್ಷ್ಯಗಳು ಬಲವಾಗಿ ಸಿಕ್ಕಿವೆ. ಸದ್ಯ ಈ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಹಾಗೂ ದರ್ಶನ್ ಎ2 ಆರೋಪಿ ಆಗಿದ್ದಾರೆ. ಒಟ್ಟೂ 17 ಮಂದಿ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

  1. ಕೊಲೆಯಾದ ಸ್ಥಳದಲ್ಲಿ ದರ್ಶನ್, ಪವಿತ್ರಾಗೌಡ, ನಾಗರಾಜ್, ವಿನಯ್, ಸೇರಿ ಆರು ಮಂದಿ ಮೊಬೈಲ್ ಇತ್ತು ಎನ್ನುವುದಕ್ಕೆ ಸಾಕ್ಷಿ ಸಿಕ್ಕಿದೆ.
  2. ಕೊಲೆಯ ನಂತರ ಇಬ್ಬರು ಆರೋಪಿಗಳು ಪೊಲೀಸ್ ಅಧಿಕಾರಿಗಳ ಜೊತೆ ಕೃತ್ಯದ ಬಗ್ಗೆ ಚರ್ಚಿಸಿರೋ ಕಾಲ್ ಡಿಟೇಲ್ಸ್ ಸಿಕ್ಕಿದೆ.
  3. ಕೃತ್ಯದ ನಂತರ ಕಾರ್ತಿಕ್, ಕೇಶವ್, ನಿಖಿಲ್ ನಾಯ್ಕ್ ತಾವೇ ಕೊಲೆ ಮಾಡಿದ್ದಾಗಿ ಸರೆಂಡರ್ ಆಗಿದ್ದಾರೆ.
  4. ಮೃತದೇಹ ಬಿಸಾಡಲಿಕ್ಕೆ ಸರೆಂಡರ್​ ಆದವರಿಗೆ ತಲಾ ಐದು ಲಕ್ಷ ನೀಡಲಾಗಿದೆ. ಈಗ ಹಣ ಜಪ್ತಿ ಮಾಡಲಾಗಿದೆ.
  5. ದೀಪಕ್ ವಿಚಾರಣೆ ವೇಳೆ ಪ್ರದೋಶ್, ಪವನ್, ವಿನಯ್ ಹೆಸರು ಬಹಿರಂಗ ಆಗಿದೆ.
  6. ವಿನಯ್, ಪವನ್, ಪ್ರದೋಶ್ ವಿಚಾರಣೆ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ಬಗ್ಗೆ ಹೇಳಿಕೆ ನೀಡಲಾಗಿದೆ.
  7. ರೇಣುಕಾ ಸ್ವಾಮಿ ತನಗೆ ಅಶ್ಲೀಲ ಮೆಸೇಜ್ ಮಾಡ್ತಿದ್ದ ಅದನ್ನ ದರ್ಶನ್​ಗೆ ತಿಳಿಸಿದ್ದಾಗಿ ಪವಿತ್ರ ಹೇಳಿಕೆ ನೀಡಿದ್ದಾರೆ.
  8. ರೇಣುಕಾ ಸ್ವಾಮಿಯನ್ನು ತಾವು ಕಿಡ್ನ್ಯಾಪ್ ಮಾಡಿದ್ದಾಗಿ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ ಒಪ್ಪಿಕೊಂಡಿದ್ದಾರೆ. ಪವನ್, ಪವಿತ್ರಾ ಹಾಗೂ ದರ್ಶನ್ ಹೇಳಿದ್ದಕ್ಕೆ ರೇಣುಕಾಸ್ವಾಮಿ ಕರೆತಂದಿರೋದಾಗಿ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
  9. ಆರ್.ಆರ್. ನಗರದ ಶೆಡ್​ನಲ್ಲಿ ಮೃತ ರೇಣುಕಾ ಸ್ವಾಮಿಯ ರಕ್ತದ ಕಲೆ, ಕೂದಲು ಹಾಗೂ ಬೆವರಿನ ಸ್ಯಾಂಪಲ್ಸ್ ಸಿಕ್ಕಿದೆ.
  10. ಆರೋಪಿಗಳ ಫಿಂಗರ್ ಪ್ರಿಂಟ್, ಫುಟ್ ಪ್ರಿಂಟ್, ಬ್ಲಡ್ ಸ್ಯಾಂಪಲ್​ನ ಪೊಲೀಸರು ಪಡೆದಿದ್ದಾರೆ.
  11. ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ರೇಣುಕಾಸ್ವಾಮಿ ಬ್ಲಡ್ ಸ್ಯಾಂಪಲ್, ಫಿಂಗರ್ ಪ್ರಿಂಟ್, ಫುಟ್ ಫ್ರಿಂಟ್​​ನ ಆರೋಪಿಗಳ ಫಿಂಗರ್ ಪ್ರಿಂಟ್, ಫುಟ್ ಪ್ರಿಂಟ್ ಹಾಗೂ ಬ್ಲಡ್ ಸ್ಯಾಂಪಲ್ ಜೊತೆ ಮ್ಯಾಚ್ ಮಾಡಿ ನೋಡೋ ಸಾಧ್ಯತೆ ಇದೆ.
  12. ರೇಣುಕಾ ಸ್ವಾಮಿಯ ಕೊಲೆಯಾದ ನಂತರ ದೀಪಕ್, ವಿನಯ್ ಹಾಗೂ ಪವನ್ ಪದೇ ಪದೇ ದರ್ಶನ್​ಗೆ ಕರೆ ಮಾಡಿದ್ದಾರೆ. ಇದು ಪ್ರಮುಖ ಸಾಕ್ಷಿ ಎನಿಸಿಕೊಂಡಿದೆ.ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:58 am, Fri, 14 June 24

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ