AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾವ್ರ ಜೊತೆ ಡಾ. ಭುಜಂಗ ಶೆಟ್ಟಿಗೆ ಒಡನಾಟ ಬೆಳೆದಿದ್ದು ಹೇಗೆ? ಇಲ್ಲಿದೆ ಹಳೆಯ ದಿನಗಳ ಕಥೆ

Dr. Bhujang Shetty: ಅನೇಕರನ್ನು ನೇತ್ರದಾನಕ್ಕೆ ಪ್ರೇರೇಪಿಸಿದ ಖ್ಯಾತಿ ಭುಜಂಗ ಶೆಟ್ಟಿಗೆ ಸಲ್ಲಿಕೆ ಆಗುತ್ತದೆ. ಡಾ. ರಾಜ್​ಕುಮಾರ್ ನೇತ್ರದಾನ ಕೇಂದ್ರವನ್ನು ಅವರು ಸ್ಥಾಪಿಸಿದ್ದರು. ರಾಜ್​ಕುಮಾರ್ ಜೊತೆ ಒಡನಾಟ ಬೆಳೆದಿದ್ದು ಹೇಗೆ ಎನ್ನುವ ಬಗ್ಗೆ ಅವರೇ ಮಾಹಿತಿ ಹಂಚಿಕೊಂಡಿದ್ದರು.

ಅಣ್ಣಾವ್ರ ಜೊತೆ ಡಾ. ಭುಜಂಗ ಶೆಟ್ಟಿಗೆ ಒಡನಾಟ ಬೆಳೆದಿದ್ದು ಹೇಗೆ? ಇಲ್ಲಿದೆ ಹಳೆಯ ದಿನಗಳ ಕಥೆ
ಡಾ.ಭುಜಂಗ ಶೆಟ್ಟಿ-ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on: May 20, 2023 | 7:08 AM

Share

ನಾರಾಯಣ ನೇತ್ರಾಲಯ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಕೆ ಭುಜಂಗ ಶೆಟ್ಟಿ ಅವರನ್ನು ಕಳೆದುಕೊಂಡಿರುವುದು ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ. ಶುಕ್ರವಾರ (ಮೇ 19) ಅವರು ನಿಧನ ಹೊಂದಿದರು. ಸಂಜೆ 6 ಗಂಟೆ ವೇಳೆಗೆ ಅವರಿಗೆ ತೀವ್ರ ಹೃದಯಾಘಾತವಾಯಿತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿ ಆಗಿಲ್ಲ. ಡಾ. ರಾಜ್​ಕುಮಾರ್ (Rajkumar) ಕುಟುಂಬದ ಜೊತೆ ಅವರಿಗೆ ಒಳ್ಳೆಯ ಒಡನಾಟ ಇತ್ತು. ಅನೇಕರನ್ನು ನೇತ್ರದಾನಕ್ಕೆ ಪ್ರೇರೇಪಿಸಿದ ಖ್ಯಾತಿ ಭುಜಂಗ ಶೆಟ್ಟಿಗೆ (Dr. Bhujang Shetty) ಸಲ್ಲಿಕೆ ಆಗುತ್ತದೆ. ಡಾ. ರಾಜ್​ಕುಮಾರ್ ನೇತ್ರದಾನ ಕೇಂದ್ರವನ್ನು ಅವರೇ ಸ್ಥಾಪಿಸಿದ್ದರು. ಪುನೀತ್ ನಿಧನ ಹೊಂದಿದಾಗ ಅವರ ಕಣ್ಣಿನಿಂದ ನಾಲ್ಕು ಜನಕ್ಕೆ ದೃಷ್ಟಿ ಕೊಡಿಸಿದ್ದರು. ರಾಜ್​ಕುಮಾರ್ ಜೊತೆ ಒಡನಾಟ ಬೆಳೆದಿದ್ದು ಹೇಗೆ ಎನ್ನುವ ಬಗ್ಗೆ ಅವರೇ ಮಾಹಿತಿ ಹಂಚಿಕೊಂಡಿದ್ದರು.

‘ನಾನು ಶಾಲೆಗೆ ಹೋಗುವ ದಿನಗಳಲ್ಲೇ ರಾಜ್​ಕುಮಾರ್ ಅವರ ದೊಡ್ಡ ಅಭಿಮಾನಿ​. ಅವರ ನಟನೆಯ ಹಲವಾರು ಚಿತ್ರಗಳನ್ನು ನೋಡಿದ್ದೆ. ಅವರನ್ನು ಯಾವತ್ತಾದರೂ ಭೇಟಿ ಆಗಬೇಕು ಅಂದುಕೊಂಡಿದ್ದೆ. ಆ ಆಸೆ ತುಂಬಾ ವರ್ಷಗಳ ಕಾಲ ಇಡೇರಲಿಲ್ಲ. ಕಣ್ಣಿನ ಸ್ಪೆಷಲಿಸ್ಟ್ ಆಗಿ ನಾನು ಶ್ರೀರಾಮ್​ಪುರದ ಆಸ್ಪತ್ರೆಗೆ ಸೇರಿದೆ. ಆಗ ಅವರು ಕಣ್ಣಿನ ಟೆಸ್ಟ್​​ಗೆ ಬಂದಿದ್ದರು. ಒಂದು ಗಂಟೆ ಮಾತನಾಡಿದೆ. ರಾಜಾಜಿನಗರದ ನಾರಾಯಣ ನೇತ್ರಾಲಯವನ್ನು ಸ್ಥಾಪಿಸಿದಾಗ ರಾಜ್​ಕುಮಾರ್ ಉದ್ಘಾಟನೆ ಮಾಡಬೇಕು ಎಂದುಕೊಂಡಿದ್ದೆ. ರಾಜ್​ಕುಮಾರ್ ಹಾಗೂ ಪಾರ್ವತಮ್ಮ ರಾಜ್​ಕುಮಾರ್ ಬಂದು 1993ರಲ್ಲಿ ಉದ್ಘಾಟನೆ ಮಾಡಿದ್ದರು. ತುಂಬು ಹೃದಯದಿಂದ ಆಶೀರ್ವಾದ ಮಾಡಿದರು’ ಎಂದು ಹಳೆ ಘಟನೆ ನೆನಪಿಸಿಕೊಂಡಿದ್ದರು ಡಾ. ಭುಜಂಗ ಶೆಟ್ಟಿ.

‘ರಾಜ್​ಕುಮಾರ್ ಅವರಲ್ಲಿ ನೋಡಿದ ವಿಷಯ ಎಂದರೆ ಅವರು ಹಣಕ್ಕೆ ಬೆಲೆ ಕೊಡುತ್ತಾ ಇರಲಿಲ್ಲ. ಗುಣಕ್ಕೆ ಬೆಲೆ ಕೊಡುತ್ತಾ ಇದ್ದರು. ಹೂವು, ಹಣ್ಣು, ಹಸಿರು ನೋಡಿದರೆ ಅವರಿಗೆ ಖುಷಿ ಆಗುತ್ತಿತ್ತು. ಹಳ್ಳಿ ಜನರಿಗೆ ಒಳ್ಳೆಯದಾಯ್ತು ಎಂದರೆ ಖುಷಿ ಪಡುತ್ತಿದ್ದರು. ಒಮ್ಮೆ ಬೋರ್​ವೆಲ್​ ಹಾಕಿಸಿದ್ವಿ ತುಂಬಾ ಚೆನ್ನಾಗಿ ನೀರು ಬಂದಿದೆ ಎಂದು ರಾಜ್​​ಕುಮಾರ್ ಖುಷಿಪಟ್ಟಿದ್ದರು’ ಎಂದು ಆರಂಭದ ದಿನಗಳಲ್ಲಿ ನೆನಪಿಸಿಕೊಂಡಿದ್ದರು ಭುಜಂಗ ಶೆಟ್ಟಿ.

‘ನನ್ನನ್ನು ತಿರುಪತಿಗೆ ಕರೆದುಕೊಂಡು ಹೋಗಿದ್ದರು. ಅಲ್ಲೊಂದು ಹುಂಡಿ ಇದೆ. ಪಾರ್ವತಮ್ಮ ಅವರು ರಾಜ್​ಕುಮಾರ್​ಗೆ ಹಣ ಕೊಟ್ಟರು. ನಾನು ಅವರ ಜೊತೆಗೇ ಇದ್ದೆ. ಅವರು ನನ್ನ ಕೈಯಿಂದ ಹುಂಡಿಗೆ ಹಣ ಹಾಕಿಸಿದರು. ಏನಣ್ಣ ಹೀಗೆ ಮಾಡಿದ್ರಿ ಎಂದೆ. ಅವನಿಗೆ ಕೊಡೋ ಶಕ್ತಿ ನನಗೆಲ್ಲಿದೆ. ಅವನ ಎದುರು ನಾವೆಲ್ಲ ಇರುವೆಗಳು ಎಂದಿದ್ದರು’ ಎಂದು ರಾಜ್​ಕುಮಾರ್ ಜೊತೆ ಕಳೆದ ಕ್ಷಣಗಳನ್ನು ಅವರು ನೆನಪಿಸಿಕೊಂಡಿದ್ದರು.

ಇದನ್ನೂ ಓದಿ: ಶಿವರಾಜ್​​ಕುಮಾರ್ ಅವರನ್ನು ಬಾಯ್ತುಂಬ ಹೊಗಳಿದ ಅನುಶ್ರೀ; ಶಿವಣ್ಣನ ರಿಯಾಕ್ಷನ್ ಹೇಗಿತ್ತು ನೋಡಿ

‘ರಾಜ್​​ಕುಮಾರ್ ತಂಗಿಯ ಕಣ್ಣಿಗೆ ಪೊರೆ ಬಂದಿತ್ತು. ನಾರಾಯಣ ನೇತ್ರಾಲಯ ಓಪನ್ ಆದಮೇಲೆ ಅಲ್ಲೇ ಬಂದು ತಂಗಿಗೆ ಆಪರೇಷನ್ ಮಾಡಿದ್ದರು. ಆಗ ನೇತ್ರದಾನದ ಬಗ್ಗೆ ಮಾತನಾಡಿದ್ದೆ. ಕಣ್ಣಿನ ದಾನದ ಮಹತ್ವದ ಬಗ್ಗೆ ಹೇಳಿದ್ದೆ. ಮಣ್ಣಾಗೋ ಬದಲು ನಾಲ್ಕು ಜನರ ದೃಷ್ಟಿಗೆ ಸಹಾಯ ಆಗುತ್ತದೆ ಎಂದೆ. ಆಗ ಅವರು ನನ್ನ ಕೈಯಿಂದ ಏನು ಆಗಬೇಕು ಎಂದು ಕೇಳಿದ್ದರು. ನಿಮ್ಮ ಹೆಸರನ್ನು ನೋಂದಣಿ ಮಾಡಿಸಿ ಎಂದು ಕೋರಿಕೊಂಡೆ. ಅವರು ಮಾಡಿಸಿದರು. ಹೀಗಾಗಿ 1994ರಲ್ಲಿ ಡಾ.ರಾಜ್​ಕುಮಾರ್ ನೇತ್ರದಾನ ಕೇಂದ್ರ ಆರಂಭಿಸಿದೆವು’ ಎಂದು ಭುಜಂಗ ಶೆಟ್ಟಿ ಮಾಹಿತಿ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು