AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ವಿತ್ ರಮೇಶ್: ಕೊರಿಯೋಗ್ರಾಫರ್ ಚಿನ್ನಿ ಪ್ರಕಾಶ್​ ಕೆಲಸದ ಬಗ್ಗೆ ಅಮಿತಾಭ್ ಬಚ್ಚನ್ ಮಾತು

Chinni Prakash In Weekend With Ramesh: ‘ಹಮ್’ ಸಿನಿಮಾದ ‘ಜುಮ್ಮಾ ಚುಮ್ಮಾ ದೇ ದೇ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದು ಕನ್ನಡದ ಚಿನ್ನಿ ಪ್ರಕಾಶ್. ಈ ಜರ್ನಿಯನ್ನು ಅವರು ನೆನಪಿಸಿಕೊಂಡಿದ್ದಾರೆ.

ವೀಕೆಂಡ್ ವಿತ್ ರಮೇಶ್: ಕೊರಿಯೋಗ್ರಾಫರ್ ಚಿನ್ನಿ ಪ್ರಕಾಶ್​ ಕೆಲಸದ ಬಗ್ಗೆ ಅಮಿತಾಭ್ ಬಚ್ಚನ್ ಮಾತು
ಅಮಿತಾಭ್-ಚಿನ್ನಿ ಪ್ರಕಾಶ್
ರಾಜೇಶ್ ದುಗ್ಗುಮನೆ
|

Updated on: May 12, 2023 | 11:13 AM

Share

ಡ್ಯಾನ್ಸ್ ಕೊರಿಯೋಗ್ರಾಫರ್ ಚಿನ್ನಿ ಪ್ರಕಾಶ್ (Chinni Prakash) ಅವರು ‘ವೀಕೆಂಡ್ ವಿತ್ ರಮೇಶ್​’ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಅವರಿಗೆ ಸಾಧಕರ ಸೀಟ್​ ಮೇಲೆ ಕೂರುವ ಅವಕಾಶ ಸಿಕ್ಕಿದೆ. ಅವರು ತಮ್ಮ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ಅಮಿತಾಭ್ ಬಚ್ಚನ್ ಜೊತೆ ಚಿನ್ನಿ ಪ್ರಕಾಶ್ ಕೆಲಸ ಮಾಡಿದ್ದರು. ಆ ದಿನಗಳು ತುಂಬಾನೇ ವಿಶೇಷವಾಗಿದ್ದವು. ಈ ಎಲ್ಲಾ ವಿಚಾರಗಳ ಬಗ್ಗೆ ಚಿನ್ನಿ ಪ್ರಕಾಶ್ ‘ವೀಕೆಂಡ್ ವಿತ್ ರಮೇಶ್’ ವೇದಿಕೆ ಮೇಲೆ ಮಾತನಾಡಿದ್ದಾರೆ. ಇವರ ಎಪಿಸೋಡ್ ಶನಿವಾರ (ಮಾರ್ಚ್ 13) ಪ್ರಸಾರ ಆಗಲಿದೆ.

ಅಮಿತಾಭ್ ಬಚ್ಚನ್ ನಟನೆಯ ‘ಹಮ್​’ ಸಿನಿಮಾ 1991ರಲ್ಲಿ ರಿಲೀಸ್ ಆಯಿತು. ಅಮಿತಾಭ್ ಬಚ್ಚನ್, ರಜನಿಕಾಂತ್, ಗೋವಿಂದ, ಶಿಲ್ಪಾ ಶಿರ್ಡೋರ್ಕರ್, ಅನುಪಮ್ ಖೇರ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದರು. ‘ಹಮ್’ ಸಿನಿಮಾದ ‘ಜುಮ್ಮಾ ಚುಮ್ಮಾ ದೇ ದೇ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದು ಕನ್ನಡದ ಚಿನ್ನಿ ಪ್ರಕಾಶ್. ಈ ಜರ್ನಿಯನ್ನು ಅವರು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹೇಗಿತ್ತು ಅಂದಿನ ಮಲ್ಲೇಶ್ವರ? ‘ವೀಕೆಂಡ್ ವಿತ್ ರಮೇಶ್​’ ಕಾರ್ಯಕ್ರಮದಲ್ಲಿ ಎಳೆಎಳೆಯಾಗಿ ವಿವರಿಸಿದ ನಾ. ಸೋಮೇಶ್ವರ

1962ರಲ್ಲಿ ತೆರೆಗೆ ಬಂದ ‘ರಾಖಿ’ ಚಿತ್ರ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಅವರು ಕೊರಿಯೋಗ್ರಾಫರ್​ ಆಗಿ ಗುರುತಿಸಿಕೊಂಡರು. 1991ರಲ್ಲಿ ಬಂದ ‘ಹಮ್’ ಚಿತ್ರದ ಹಾಡಿಗೆ ಅವರದ್ದೇ ಕೊರಿಯೋಗ್ರಫಿ ಇತ್ತು. ಈ ಹಾಡನ್ನು ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು. ಈ ಬಗ್ಗೆ ಅವರು ‘ವೀಕೆಂಡ್ ವಿತ್ ಎಪಿಸೋಡ್’ನಲ್ಲಿ ಮಾತನಾಡಿದ್ದಾರೆ. ಈ ಪ್ರೋಮೋ ಹಂಚಿಕೊಳ್ಳಲಾಗಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಅಂದುಕೊಂಡ ದಿನಾಂಕದಂದು ರಿಲೀಸ್ ಆಗಲ್ಲ ‘ಪ್ರಾಜೆಕ್ಟ್​ ಕೆ’; ಇದಕ್ಕೆಲ್ಲ ಅಮಿತಾಭ್​ ಬಚ್ಚನ್ ಕಾರಣ

‘ಬಾಲಿವುಡ್ ಬಿಗ್ ಬಿ ಅಮಿತಾಭ್ ಹೃದಯ ಗೆದ್ದ ಚಿನ್ನಿ ಮಾಸ್ಟರ್ ಯಶೋಗಾಥೆ. ವೀಕೆಂಡ್ ವಿತ್ ರಮೇಶ್ ಸೀಸನ್ 5 ಶನಿವಾರ ರಾತ್ರಿ 9ಕ್ಕೆ’ ಎಂದು ಈ ಪ್ರೋಮೋಗೆ ಕ್ಯಾಪ್ಶನ್ ನೀಡಲಾಗಿದೆ. ಅಮಿತಾಭ್ ಬಚ್ಚನ್ ವಿಡಿಯೋ ಸಂದೇಶದ ಮೂಲಕ ಚಿನ್ನಿ ಮಾಸ್ಟರ್​ನ ಹೊಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್