AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವ್ರಾಣೆ ನಾಯಿ ಕೊಟ್ಟು ಪಟಾಯಿಸಿಲ್ಲ’; ಹರಿಪ್ರಿಯಾ ಜತೆಗಿನ ಲವ್​ ಸ್ಟೋರಿ ಬಿಚ್ಚಿಟ್ಟ ವಸಿಷ್ಠ ಸಿಂಹ

Vasishta Simha-Haripriya: ವಸಿಷ್ಠ ಸಿಂಹ ಅವರು ನಾಯಿ ಕೊಟ್ಟು ಹರಿಪ್ರಿಯಾಗೆ ಪ್ರೀತಿ ಹುಟ್ಟುವಂತೆ ಮಾಡಿದರು ಎಂಬಿತ್ಯಾದಿ ಸುದ್ದಿ ಹರಡಿತ್ತು. ಆದರೆ, ಇದನ್ನು ಈ ಜೋಡಿ ಅಲ್ಲಗಳೆದಿದೆ.

‘ದೇವ್ರಾಣೆ ನಾಯಿ ಕೊಟ್ಟು ಪಟಾಯಿಸಿಲ್ಲ’; ಹರಿಪ್ರಿಯಾ ಜತೆಗಿನ ಲವ್​ ಸ್ಟೋರಿ ಬಿಚ್ಚಿಟ್ಟ ವಸಿಷ್ಠ ಸಿಂಹ
ವಸಿಷ್ಠ ಸಿಂಹ-ಹರಿಪ್ರಿಯಾ
TV9 Web
| Edited By: |

Updated on: Jan 12, 2023 | 7:13 AM

Share

ನಟ ವಸಿಷ್ಠ ಸಿಂಹ (Vasishta Simha) ಹಾಗೂ ನಟಿ ಹರಿಪ್ರಿಯಾ ಕಳೆದ ಕೆಲ ವರ್ಷಗಳಿಂದ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದಾರೆ. ಇತ್ತೀಚೆಗೆ ಇವರ ನಿಶ್ಚಿತಾರ್ಥ ಕೂಡ ನೆರವೇರಿದೆ. ಜನವರಿ 26ರಂದು ಮೈಸೂರಿನಲ್ಲಿ ಈ ಜೋಡಿ ಅದ್ದೂರಿಯಾಗಿ ಹಸೆಮಣೆ ಏರುತ್ತಿದೆ. ಜನವರಿ 28ರಂದು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ನೆರವೇರಲಿದೆ. ವಸಿಷ್ಠ ಸಿಂಹ ಅವರು ನಾಯಿ ಕೊಟ್ಟು ಹರಿಪ್ರಿಯಾಗೆ (Haripriya) ಪ್ರೀತಿ ಹುಟ್ಟುವಂತೆ ಮಾಡಿದರು ಎಂಬಿತ್ಯಾದಿ ಸುದ್ದಿ ಹರಡಿತ್ತು. ಆದರೆ, ಇದನ್ನು ಈ ಜೋಡಿ ಅಲ್ಲಗಳೆದಿದೆ.

‘ಇಬ್ಬರೂ ಕಷ್ಟಪಟ್ಟಿದ್ದೇವೆ. ಗೆಳೆತನದಿಂದ ಪರಸ್ಪರ ಇಬ್ಬರ ಕಷ್ಟಗಳು ಗೊತ್ತಾದವು. ಪರಸ್ಪರ ನಾವು ಹೆಗಲುಕೊಟ್ಟೆವು. ನಾನು ಚಿಕ್ಕವಯಸ್ಸಿನಲ್ಲಿ ತಾಯಿನ ಕಳೆದುಕೊಂಡೆ. ಅವರು ತಂದೆಯನ್ನು ಕಳೆದುಕೊಂಡಿದ್ದರು. ನಾನು ನನ್ನ ತಾಯಿಯನ್ನು ಇವರಲ್ಲಿ ಕಂಡೆ’ ಎಂದಿದ್ದಾರೆ ವಸಿಷ್ಠ ಸಿಂಹ. ‘ನಾನು ಚಿಕ್ಕವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡೆ. ನನ್ನ ತಂದೆಯಲ್ಲಿರುವ ಅನೇಕ ಗುಣಗಳು ಸಿಂಹನಲ್ಲಿದೆ’ ಎಂದರು ಹರಿಪ್ರಿಯಾ.

ಹಾಗಾದರೆ ವಸಿಷ್ಠ ಸಿಂಹ ಪ್ರಪೋಸ್ ಮಾಡಿದ್ದು ಯಾವಾಗ? ಈ ಪ್ರಶ್ನೆಗೆ ವಸಿಷ್ಠ ಸಿಂಹ ಅವರೇ ಉತ್ತರ ಕೊಟ್ಟಿದ್ದಾರೆ. ‘ಅದು ಹರಿಪ್ರಿಯಾ ಅವರ ತಂದೆಯ ಕಾರ್ಯದ ದಿನ. ಆದಿನ ನಾನು ಹರಿಪ್ರಿಯಾಗೆ ಪ್ರಪೋಸ್ ಮಾಡಲೇಬೇಕು ಎಂದು ನಿರ್ಧರಿಸಿದ್ದೆ. ತಡೆಯಲಾರದೇ ಪ್ರಪೋಸ್ ಮಾಡಿದ್ದೆ. ಅದು ಮಧ್ಯರಾತ್ರಿ ಆಗಿತ್ತು. ಮುಂಜಾನೆ ಕಾರ್ಯ ಇದ್ದಿದ್ದರಿಂದ ಅವರು ನಿದ್ದೆ ಮಾಡಬೇಕಿತ್ತು. ನೀವು ಏನೂ ಉತ್ತರಿಸಬಾರದು ಎಂದು ಪ್ರಪೋಸ್ ಮಾಡಿದ್ದೆ’ ಎಂದಿದ್ದಾರೆ ವಸಿಷ್ಠ ಸಿಂಹ.

ಇದನ್ನೂ ಓದಿ
Image
Hariprriya: ಕಿರುತೆರೆಗೆ ಕಾಲಿಡಲಿದ್ದಾರೆ ನಟಿ ಹರಿಪ್ರಿಯಾ; ಏನಿದು ಸಮಾಚಾರ?
Image
ಉಗ್ರಂ ಹರಿಪ್ರಿಯಾ ಪಾತ್ರಕ್ಕೂ ಸಲಾರ್​ ಶ್ರುತಿ ಹಾಸನ್​ ಪಾತ್ರಕ್ಕೂ ಇದೆ ಅಜಗಜಾಂತರ ವ್ಯತ್ಯಾಸ
Image
Hero Kannada Movie: ಹರಿಪ್ರಿಯಾ ಮಾಡಬೇಕಿದ್ದ ಪಾತ್ರವನ್ನು ‘ಮಗಳು ಜಾನಕಿ’ ನಟಿ ಗಾನವಿ ಪಡೆದುಕೊಂಡಿದ್ದು ಹೇಗೆ?
Image
ಕನ್ನಡಿಗರಿಗೆ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಜಾಗವಿಲ್ಲ ಯಾಕೆ? ಹರಿಪ್ರಿಯಾ ಕಿಡಿಕಿಡಿ

‘ವಸಿಷ್ಠ ಸಿಂಹ ಅವರನ್ನು ಕಂಡರೆ ನನಗೂ ಇಷ್ಟ ಇತ್ತು. ಅದನ್ನು ಹೇಳಿಕೊಳ್ಳಬೇಕು ಎನ್ನುವ ಆಸೆ ನನಗೂ ಇತ್ತು. ನನನ್ನು ವಿಶೇಷವಾಗಿ ನೋಡಿಕೊಂಡರು. ನನ್ನ ತಂದೆ ತೀರಿಕೊಂಡ ದಿನವೇ ಇವರು ನನಗೆ ಸಿಕ್ಕರು. ನನ್ನ ತಂದೆಯೇ ನನಗೆ ಇವರನ್ನು ನೀಡಿದರು ಅನಿಸಿತು’ ಎಂದಿದ್ದಾರೆ ಹರಿಪ್ರಿಯಾ.

ಇದನ್ನೂ ಓದಿ: Haripriya Marriage Date: ಜನವರಿ 26ಕ್ಕೆ ಹರಿಪ್ರಿಯಾ-ವಸಿಷ್ಠ ಸಿಂಹ ಮದುವೆ; ಮೈಸೂರಿನಲ್ಲಿ ನಡೆಯಲಿದೆ ಶುಭ ಕಾರ್ಯ

ಇಬ್ಬರ ಮಧ್ಯೆ ಪ್ರೀತಿ ಬೆಳೆಯುವುದಕ್ಕೂ ಮುನ್ನವೇ ಹರಿಪ್ರಿಯಾ ಹಾಗೂ ವಸಿಷ್ಠ ಒಂದು ಸಿನಿಮಾ ಒಪ್ಪಿಕೊಂಡಿದ್ದರು. ಕೊವಿಡ್ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬ ಆದವು. ಹೀಗಾಗಿ, ಸೆಟ್​ನಲ್ಲಿ ಸಾಮಾನ್ಯರಂತೆ ವರ್ತಿಸುವುದು ಇವರಿಗೆ ಕಷ್ಟವಾಗಿತ್ತಂತೆ. ಈ ಮಾತನ್ನು ಕೂಡ ವಸಿಷ್ಠ ಸಿಂಹ ಹೇಳಿದ್ದಾರೆ. ‘ದೇವ್ರಾಣೆ ನಾಯಿ ಕೊಟ್ಟಿ ಪಟಾಯಿಸಿಕೊಂಡಿಲ್ಲ’ ಎಂದು ಹೇಳಿದ್ದಾರೆ ವಸಿಷ್ಠ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್