AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಬಟ್ಟೆ ತೊಳೆದರೂ ರೇಣುಕಾ ಸ್ವಾಮಿ ರಕ್ತ ಸಿಕ್ಕಿದ್ದು ಹೇಗೆ? ಎಡವಿದ್ದು ಎಲ್ಲಿ?

ಎಷ್ಟೇ ಪ್ರಯತ್ನಿಸಿದರೂ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳುವುದು ದರ್ಶನ್​ಗೆ ಕಷ್ಟವಾಗಿದೆ. ಕೊಲೆ ನಡೆದ ದಿನ ದರ್ಶನ್​ ಧರಿಸಿದ್ದ ಬಟ್ಟೆಗಳಲ್ಲಿ ಸಿಕ್ಕಿರುವ ರಕ್ತದ ಕಲೆಗಳು ರೇಣುಕಾ ಸ್ವಾಮಿಯ ದೇಹದ್ದು ಎಂಬುದು ಈಗ ಎಫ್​ಎಸ್​ಎಲ್​ ವರದಿಯಲ್ಲಿ ಪತ್ತೆ ಆಗಿದೆ.

ದರ್ಶನ್ ಬಟ್ಟೆ ತೊಳೆದರೂ ರೇಣುಕಾ ಸ್ವಾಮಿ ರಕ್ತ ಸಿಕ್ಕಿದ್ದು ಹೇಗೆ? ಎಡವಿದ್ದು ಎಲ್ಲಿ?
ದರ್ಶನ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 09, 2024 | 11:50 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸಂಕಷ್ಟ ಎದುರಿಸುತ್ತಿದ್ದಾರೆ. ಅವರನ್ನು ಜೈಲಿನಲ್ಲಿ ಇಡಲಾಗಿದೆ. ಅವರು ಜೈಲು ಸೇರಿ ಎರಡು ತಿಂಗಳೇ ಕಳೆದಿದೆ. ದರ್ಶನ್ ಅವರ ಬಟ್ಟೆಯ ಮೇಲೆ  ರೇಣುಕಾ ಸ್ವಾಮಿ ರಕ್ತದ ಕಲೆ ಇರೋದು ಎಫ್​ಎಸ್​ಎಲ್ ವರದಿ ಮೂಲಕ ಪತ್ತೆ ಆಗಿದೆ. ಇದು ಅವರಿಗೆ ಕಂಟಕ ಆಗೋ ಸಾಧ್ಯತೆ ಇದೆ. ಇದು ಪ್ರಮುಖ ಸಾಕ್ಷಿ ಎನಿಸಿಕೊಳ್ಳುವ ಸಾಧ್ಯತೆ ಇದೆ. ಕೊಲೆ ದಿನ ಹಾಕಿಕೊಂಡಿದ್ದ ಬಟ್ಟೆಯನ್ನು ದರ್ಶನ್ ತೊಳೆದಿದ್ದರು. ಆದಾಗ್ಯೂ ರೇಣುಕಾ ಸ್ವಾಮಿ ರಕ್ತದ ಕಲೆ ಸಿಕ್ಕಿದ್ದು ಹೇಗೆ? ಆ ಪ್ರಶ್ನೆಗೆ ಈ ಸ್ಟೋರಿಯಲ್ಲಿ ವಿವರಣೆ ಇದೆ.

ದರ್ಶನ್ ಅವರು ಪಟ್ಟಣಗೆರೆ ಶೆಡ್​ನಿಂದ ಮನೆಗೆ ಬಂದರು. ಆದಿನ ಅವರು ಬ್ಲ್ಯೂ ಜೀನ್ಸ್ ಹಾಗೂ ಕಪ್ಪು ಬಣ್ಣದ ರೌಂಡ್ ನೆಕ್ ಟೀ ಶರ್ಟ್ ಹಾಕಿದ್ದರು. ಮನೆಗೆ ಬಂದ ತಕ್ಷಣ ಅವರು ಶರ್ಟ್ ಹಾಗೂ ಪ್ಯಾಂಟ್​ನ ಒಗೆದು, ಒಣ ಹಾಕಿದ್ದರು. ಇದನ್ನು ದರ್ಶನ್ ಮನೆಯಿಂದ ಪೊಲೀಸರು ರಿಕವರಿ ಮಾಡಿದ್ದರು. ನಂತರ ಅದನ್ನು ಪರೀಕ್ಷೆಗೆ ಕಳುಹಿಸಲಾಯಿತು. ಎಫ್​ಎಸ್​ಎಲ್​ನಲ್ಲಿ ನಡೆಸಿದ ಲುಮಿನಲ್ ಟೆಸ್ಟಟ್​ನಲ್ಲಿ ರಕ್ತದ ಗುರುತು ಪತ್ತೆ ಹಚ್ಚಲಾಗಿದೆ.

ಏನಿದು ಲುಮಿನಲ್ ಟೆಸ್ಟ್?

ಲುಮಿನಲ್ ಎಂಬುದು ಒಂದು ಕೆಮಿಕಲ್. ಬಟ್ಟೆಯನ್ನ ವಾಶ್ ಮಾಡಿದ್ದರೂ ಹೀಮೋಗ್ಲೋಬಿನ್ ಅಂಶ ಹೋಗಿರುವುದಿಲ್ಲ. ಯಾವ ಬಟ್ಟೆಯ ಮೇಲೆ ರಕ್ತ ಕಲೆ ಇರುತ್ತದೆಯೋ ಅದರ ಮೇಲೆ ಲುಮಿನಲ್ ಕೆಮಿಕಲ್ ಬಳಿಯಲಾಗುತ್ತದೆ. ಆಗ ಹೀಮೋಗ್ಲೋಬಿನ್ ಜೊತೆ ವರ್ತಿಸುವ ಲುಮಿನಲ್ ನೀಲಿ ಹಾಗೂ ಹಸಿರು ಬಣ್ಣದ ದ್ರಾವಣ ಉತ್ಪಾದಿಸುತ್ತದೆ. ಈ ದ್ರಾವಣವನ್ನ ಸಂಗ್ರಹಿಸಿ ಆದರಿಂದ ಡಿಎನ್​ಎ ಸಂಗ್ರಹಿಸಲಾಗುತ್ತದೆ.

ಇದನ್ನೂ ಓದಿ: ಎಫ್​ಎಸ್​ಎಲ್​ ವರದಿ: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್​ ವಿರುದ್ಧ ಇದು ಪಕ್ಕಾ ಸಾಕ್ಷಿ

ದರ್ಶನ್ ಅವರ ಪ್ರಕರಣದಲ್ಲೂ ಇದೇ ರೀತಿಯಲ್ಲಿ ಪರೀಕ್ಷೆ ಮಾಡಲಾಗಿದೆ. ದರ್ಶನ್ ಅವರ ಪ್ಯಾಂಟ್​ ಮೇಲೆ ಲುಮಿನಲ್ ರಾಸಾಯನಿಕ ಬಳಕೆ ಮಾಡಲಾಗಿದೆ. ಅದರಿಂದ ಬಂದ ನೀಲಿ ಹಾಗೂ ಹಸಿರು ಬಣ್ಣದ ದ್ರಾವಣ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಈ ವೇಳೆ ದರ್ಶನ್ ಬಟ್ಟೆಯಲ್ಲಿ ರೇಣುಕಾಸ್ವಾಮಿ ರಕ್ತ ಇರೋದು ಖಚಿತ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ