AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಬಟ್ಟೆ ತೊಳೆದರೂ ರೇಣುಕಾ ಸ್ವಾಮಿ ರಕ್ತ ಸಿಕ್ಕಿದ್ದು ಹೇಗೆ? ಎಡವಿದ್ದು ಎಲ್ಲಿ?

ಎಷ್ಟೇ ಪ್ರಯತ್ನಿಸಿದರೂ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳುವುದು ದರ್ಶನ್​ಗೆ ಕಷ್ಟವಾಗಿದೆ. ಕೊಲೆ ನಡೆದ ದಿನ ದರ್ಶನ್​ ಧರಿಸಿದ್ದ ಬಟ್ಟೆಗಳಲ್ಲಿ ಸಿಕ್ಕಿರುವ ರಕ್ತದ ಕಲೆಗಳು ರೇಣುಕಾ ಸ್ವಾಮಿಯ ದೇಹದ್ದು ಎಂಬುದು ಈಗ ಎಫ್​ಎಸ್​ಎಲ್​ ವರದಿಯಲ್ಲಿ ಪತ್ತೆ ಆಗಿದೆ.

ದರ್ಶನ್ ಬಟ್ಟೆ ತೊಳೆದರೂ ರೇಣುಕಾ ಸ್ವಾಮಿ ರಕ್ತ ಸಿಕ್ಕಿದ್ದು ಹೇಗೆ? ಎಡವಿದ್ದು ಎಲ್ಲಿ?
ದರ್ಶನ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 09, 2024 | 11:50 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸಂಕಷ್ಟ ಎದುರಿಸುತ್ತಿದ್ದಾರೆ. ಅವರನ್ನು ಜೈಲಿನಲ್ಲಿ ಇಡಲಾಗಿದೆ. ಅವರು ಜೈಲು ಸೇರಿ ಎರಡು ತಿಂಗಳೇ ಕಳೆದಿದೆ. ದರ್ಶನ್ ಅವರ ಬಟ್ಟೆಯ ಮೇಲೆ  ರೇಣುಕಾ ಸ್ವಾಮಿ ರಕ್ತದ ಕಲೆ ಇರೋದು ಎಫ್​ಎಸ್​ಎಲ್ ವರದಿ ಮೂಲಕ ಪತ್ತೆ ಆಗಿದೆ. ಇದು ಅವರಿಗೆ ಕಂಟಕ ಆಗೋ ಸಾಧ್ಯತೆ ಇದೆ. ಇದು ಪ್ರಮುಖ ಸಾಕ್ಷಿ ಎನಿಸಿಕೊಳ್ಳುವ ಸಾಧ್ಯತೆ ಇದೆ. ಕೊಲೆ ದಿನ ಹಾಕಿಕೊಂಡಿದ್ದ ಬಟ್ಟೆಯನ್ನು ದರ್ಶನ್ ತೊಳೆದಿದ್ದರು. ಆದಾಗ್ಯೂ ರೇಣುಕಾ ಸ್ವಾಮಿ ರಕ್ತದ ಕಲೆ ಸಿಕ್ಕಿದ್ದು ಹೇಗೆ? ಆ ಪ್ರಶ್ನೆಗೆ ಈ ಸ್ಟೋರಿಯಲ್ಲಿ ವಿವರಣೆ ಇದೆ.

ದರ್ಶನ್ ಅವರು ಪಟ್ಟಣಗೆರೆ ಶೆಡ್​ನಿಂದ ಮನೆಗೆ ಬಂದರು. ಆದಿನ ಅವರು ಬ್ಲ್ಯೂ ಜೀನ್ಸ್ ಹಾಗೂ ಕಪ್ಪು ಬಣ್ಣದ ರೌಂಡ್ ನೆಕ್ ಟೀ ಶರ್ಟ್ ಹಾಕಿದ್ದರು. ಮನೆಗೆ ಬಂದ ತಕ್ಷಣ ಅವರು ಶರ್ಟ್ ಹಾಗೂ ಪ್ಯಾಂಟ್​ನ ಒಗೆದು, ಒಣ ಹಾಕಿದ್ದರು. ಇದನ್ನು ದರ್ಶನ್ ಮನೆಯಿಂದ ಪೊಲೀಸರು ರಿಕವರಿ ಮಾಡಿದ್ದರು. ನಂತರ ಅದನ್ನು ಪರೀಕ್ಷೆಗೆ ಕಳುಹಿಸಲಾಯಿತು. ಎಫ್​ಎಸ್​ಎಲ್​ನಲ್ಲಿ ನಡೆಸಿದ ಲುಮಿನಲ್ ಟೆಸ್ಟಟ್​ನಲ್ಲಿ ರಕ್ತದ ಗುರುತು ಪತ್ತೆ ಹಚ್ಚಲಾಗಿದೆ.

ಏನಿದು ಲುಮಿನಲ್ ಟೆಸ್ಟ್?

ಲುಮಿನಲ್ ಎಂಬುದು ಒಂದು ಕೆಮಿಕಲ್. ಬಟ್ಟೆಯನ್ನ ವಾಶ್ ಮಾಡಿದ್ದರೂ ಹೀಮೋಗ್ಲೋಬಿನ್ ಅಂಶ ಹೋಗಿರುವುದಿಲ್ಲ. ಯಾವ ಬಟ್ಟೆಯ ಮೇಲೆ ರಕ್ತ ಕಲೆ ಇರುತ್ತದೆಯೋ ಅದರ ಮೇಲೆ ಲುಮಿನಲ್ ಕೆಮಿಕಲ್ ಬಳಿಯಲಾಗುತ್ತದೆ. ಆಗ ಹೀಮೋಗ್ಲೋಬಿನ್ ಜೊತೆ ವರ್ತಿಸುವ ಲುಮಿನಲ್ ನೀಲಿ ಹಾಗೂ ಹಸಿರು ಬಣ್ಣದ ದ್ರಾವಣ ಉತ್ಪಾದಿಸುತ್ತದೆ. ಈ ದ್ರಾವಣವನ್ನ ಸಂಗ್ರಹಿಸಿ ಆದರಿಂದ ಡಿಎನ್​ಎ ಸಂಗ್ರಹಿಸಲಾಗುತ್ತದೆ.

ಇದನ್ನೂ ಓದಿ: ಎಫ್​ಎಸ್​ಎಲ್​ ವರದಿ: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್​ ವಿರುದ್ಧ ಇದು ಪಕ್ಕಾ ಸಾಕ್ಷಿ

ದರ್ಶನ್ ಅವರ ಪ್ರಕರಣದಲ್ಲೂ ಇದೇ ರೀತಿಯಲ್ಲಿ ಪರೀಕ್ಷೆ ಮಾಡಲಾಗಿದೆ. ದರ್ಶನ್ ಅವರ ಪ್ಯಾಂಟ್​ ಮೇಲೆ ಲುಮಿನಲ್ ರಾಸಾಯನಿಕ ಬಳಕೆ ಮಾಡಲಾಗಿದೆ. ಅದರಿಂದ ಬಂದ ನೀಲಿ ಹಾಗೂ ಹಸಿರು ಬಣ್ಣದ ದ್ರಾವಣ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಈ ವೇಳೆ ದರ್ಶನ್ ಬಟ್ಟೆಯಲ್ಲಿ ರೇಣುಕಾಸ್ವಾಮಿ ರಕ್ತ ಇರೋದು ಖಚಿತ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್