AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Brothers: ಶಿವರಾಂ ಸ್ಥಾಪಿಸಿದ್ದ ರಾಶಿ ಬ್ರದರ್ಸ್​ ನಿರ್ಮಾಣ ಸಂಸ್ಥೆ ಹೆಸರಿನ ಅರ್ಥವೇನು ಗೊತ್ತಾ? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಶಿವರಾಂ​ ಅವರು ಸಹೋದರ ರಾಮನಾಥನ್​ ಜತೆಗೂಡಿ ರಾಶಿ ಬ್ರದರ್ಸ್​ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿದರು. ರಾಮನಾಥನ್​ ಹೆಸರಿನ ಮೊದಲ ಅಕ್ಷರ ಹಾಗೂ ಶಿವರಾಂ ಹೆಸರಿನ ಮೊದಲ ಅಕ್ಷರ ಬಳಕೆ ಮಾಡಿಕೊಂಡು ರಾಶಿ ಬ್ರದರ್ಸ್​ ಎಂದು ನಾಮಕರಣ ಮಾಡಲಾಯಿತು.

Rashi Brothers: ಶಿವರಾಂ ಸ್ಥಾಪಿಸಿದ್ದ ರಾಶಿ ಬ್ರದರ್ಸ್​ ನಿರ್ಮಾಣ ಸಂಸ್ಥೆ ಹೆಸರಿನ ಅರ್ಥವೇನು ಗೊತ್ತಾ? ಇಲ್ಲಿದೆ ಕುತೂಹಲಕಾರಿ ಮಾಹಿತಿ
ಶಿವರಾಂ
TV9 Web
| Edited By: |

Updated on:Dec 04, 2021 | 4:12 PM

Share

ಕನ್ನಡ ಚಿತ್ರರಂಗ ಕಂಡ ಅದ್ಭುತ ನಟ, ನಿರ್ಮಾಪಕ ‘ಶಿವರಾಂ’ ಅವರು ಇಂದು (ಡಿಸೆಂಬರ್​ 4) ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ನಟನೆ ಜತೆಗೆ ನಿರ್ಮಾಣದಲ್ಲೂ ಆಸಕ್ತಿ ಬೆಳೆಸಿಕೊಂಡವರು ಶಿವರಾಂ. ಅವರು ಕೆಲ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ‘ರಾಶಿ ಬ್ರದರ್ಸ್’​ ಸಿನಿಮಾ ನಿರ್ಮಾಣ ಸಂಸ್ಥೆ ಸ್ಥಾಪಿಸಿ, ಅದರ ಅಡಿಯಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

ಶಿವರಾಂ​ ಅವರು ಸಹೋದರ ರಾಮನಾಥನ್​ ಜತೆಗೂಡಿ ರಾಶಿ ಬ್ರದರ್ಸ್​ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿದರು. ರಾಮನಾಥನ್​ ಹೆಸರಿನ ಮೊದಲ ಅಕ್ಷರ ಹಾಗೂ ಶಿವರಾಂ ಹೆಸರಿನ ಮೊದಲ ಅಕ್ಷರ ಬಳಕೆ ಮಾಡಿಕೊಂಡು ರಾಶಿ ಬ್ರದರ್ಸ್​ ಎಂದು ನಾಮಕರಣ ಮಾಡಲಾಯಿತು. ಈ ಸಹೋದರರು ಒಟ್ಟೂ ಆರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

1970ರಲ್ಲಿ ಬಂದ ‘ಗೆಜ್ಜೆ ಪೂಜೆ’ ಇವರ ನಿರ್ಮಾಣದ ಮೊದಲ ಸಿನಿಮಾ. ಈ ಚಿತ್ರಕ್ಕೆ ಖ್ಯಾತ ನಟಿ ಕಲ್ಪನಾ ನಾಯಕಿ. 1974ರಲ್ಲಿ ‘ಉಪಾಸನೆ’ ಸಿನಿಮಾ ತೆರೆಗೆ ಬಂತು. 1979ರಲ್ಲಿ ‘ನಾನೊಬ್ಬ ಕಳ್ಳ’ ಇವರ ಬ್ಯಾನರ್​ ಅಡಿಯಲ್ಲಿ ಮೂಡಿ ಬಂತು. 1980ರಲ್ಲಿ ಬಂದ ‘ಡ್ರೈವರ್‌ ಹನುಮಂತು’ ಚಿತ್ರವನ್ನು ರಾಶಿ ಬ್ರದರ್ಸ್​ ನಿರ್ಮಾಣ ಮಾಡಿದರು. ಶಿವರಾಂ ಅವರೇ ಮುಖ್ಯ ಪಾತ್ರ ನಿರ್ವಹಿಸಿದರು. ಡಾ.ವಿಷ್ಣುವರ್ಧನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು. 1991ರಲ್ಲಿ ತೆರೆಗೆ ಬಂದ ತಮಿಳಿನ ‘ಧರ್ಮದುರೈ’ ಚಿತ್ರಕ್ಕೆ ಬಂಡವಾಳ ಹೂಡಿದರು. ಈ ಚಿತ್ರಕ್ಕೆ ರಜಿನಿಕಾಂತ್‌ ಹೀರೋ. ಶಿವರಾಜ್‌ಕುಮಾರ್ ಅಭಿನಯದ ‘ಬಹಳ ಚೆನ್ನಾಗಿದೆ’ ಚಿತ್ರವನ್ನು ರಾಶಿ ಸಹೋದರರು ನಿರ್ಮಿಸಿದರು. ಇದು ಅವರ ನಿರ್ಮಾಣದ ಕೊನೆಯ ಸಿನಿಮಾ.

1972ರಲ್ಲಿ ತೆರೆಗೆ ಬಂದ ‘ಹೃದಯ ಸಂಗಮ’ ಚಿತ್ರವನ್ನು ರಾಮನಾಥನ್​ ಹಾಗೂ ಶಿವರಾಂ ಒಟ್ಟಾಗಿ ನಿರ್ದೇಶನ ಮಾಡಿದ್ದರು. ಇಬ್ಬರೂ ಸೇರಿ ನಿರ್ದೇಶನ ಮಾಡಿದ ಮೊದಲ ಹಾಗೂ ಕೊನೆಯ ಸಿನಿಮಾ ಇದಾಗಿದೆ. ಇದಾದ ಬಳಿಕ ಅವರು ಯಾವುದೇ ಸಿನಿಮಾವನ್ನೂ ನಿರ್ದೇಶನ ಮಾಡಿಲ್ಲ.

ರಾಮನಾಥನ್​ ಅವರು ಹಿರಿಯ ನಿರ್ದೇಶಕರು. ಅಮಿತಾಭ್​ ಬಚ್ಚನ್​, ರಜನಿಕಾಂತ್​ ಜತೆ ಇವರಿಗೆ ಒಳ್ಳೆಯ ಒಡನಾಟ ಇತ್ತು. ದಕ್ಷಿಣ ಭಾರತದ ಚಿತ್ರರಂಗಕ್ಕೂ ಹಾಗೂ ಬಾಲಿವುಡ್​ಗೂ ಇವರು ಕೊಂಡಿ ಆಗಿದ್ದರು. 2013ರಲ್ಲಿ ಇವರು ನಿಧನ ಹೊಂದಿದ್ದರು.

ಇದನ್ನೂ ಓದಿ: Actor Shivaram: ಹಿರಿಯ ನಟ ಶಿವರಾಂ ನಿಧನ; ತ್ಯಾಗರಾಜನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

Published On - 4:06 pm, Sat, 4 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?