AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Brothers: ಶಿವರಾಂ ಸ್ಥಾಪಿಸಿದ್ದ ರಾಶಿ ಬ್ರದರ್ಸ್​ ನಿರ್ಮಾಣ ಸಂಸ್ಥೆ ಹೆಸರಿನ ಅರ್ಥವೇನು ಗೊತ್ತಾ? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಶಿವರಾಂ​ ಅವರು ಸಹೋದರ ರಾಮನಾಥನ್​ ಜತೆಗೂಡಿ ರಾಶಿ ಬ್ರದರ್ಸ್​ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿದರು. ರಾಮನಾಥನ್​ ಹೆಸರಿನ ಮೊದಲ ಅಕ್ಷರ ಹಾಗೂ ಶಿವರಾಂ ಹೆಸರಿನ ಮೊದಲ ಅಕ್ಷರ ಬಳಕೆ ಮಾಡಿಕೊಂಡು ರಾಶಿ ಬ್ರದರ್ಸ್​ ಎಂದು ನಾಮಕರಣ ಮಾಡಲಾಯಿತು.

Rashi Brothers: ಶಿವರಾಂ ಸ್ಥಾಪಿಸಿದ್ದ ರಾಶಿ ಬ್ರದರ್ಸ್​ ನಿರ್ಮಾಣ ಸಂಸ್ಥೆ ಹೆಸರಿನ ಅರ್ಥವೇನು ಗೊತ್ತಾ? ಇಲ್ಲಿದೆ ಕುತೂಹಲಕಾರಿ ಮಾಹಿತಿ
ಶಿವರಾಂ
TV9 Web
| Edited By: |

Updated on:Dec 04, 2021 | 4:12 PM

Share

ಕನ್ನಡ ಚಿತ್ರರಂಗ ಕಂಡ ಅದ್ಭುತ ನಟ, ನಿರ್ಮಾಪಕ ‘ಶಿವರಾಂ’ ಅವರು ಇಂದು (ಡಿಸೆಂಬರ್​ 4) ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ನಟನೆ ಜತೆಗೆ ನಿರ್ಮಾಣದಲ್ಲೂ ಆಸಕ್ತಿ ಬೆಳೆಸಿಕೊಂಡವರು ಶಿವರಾಂ. ಅವರು ಕೆಲ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ‘ರಾಶಿ ಬ್ರದರ್ಸ್’​ ಸಿನಿಮಾ ನಿರ್ಮಾಣ ಸಂಸ್ಥೆ ಸ್ಥಾಪಿಸಿ, ಅದರ ಅಡಿಯಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

ಶಿವರಾಂ​ ಅವರು ಸಹೋದರ ರಾಮನಾಥನ್​ ಜತೆಗೂಡಿ ರಾಶಿ ಬ್ರದರ್ಸ್​ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿದರು. ರಾಮನಾಥನ್​ ಹೆಸರಿನ ಮೊದಲ ಅಕ್ಷರ ಹಾಗೂ ಶಿವರಾಂ ಹೆಸರಿನ ಮೊದಲ ಅಕ್ಷರ ಬಳಕೆ ಮಾಡಿಕೊಂಡು ರಾಶಿ ಬ್ರದರ್ಸ್​ ಎಂದು ನಾಮಕರಣ ಮಾಡಲಾಯಿತು. ಈ ಸಹೋದರರು ಒಟ್ಟೂ ಆರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

1970ರಲ್ಲಿ ಬಂದ ‘ಗೆಜ್ಜೆ ಪೂಜೆ’ ಇವರ ನಿರ್ಮಾಣದ ಮೊದಲ ಸಿನಿಮಾ. ಈ ಚಿತ್ರಕ್ಕೆ ಖ್ಯಾತ ನಟಿ ಕಲ್ಪನಾ ನಾಯಕಿ. 1974ರಲ್ಲಿ ‘ಉಪಾಸನೆ’ ಸಿನಿಮಾ ತೆರೆಗೆ ಬಂತು. 1979ರಲ್ಲಿ ‘ನಾನೊಬ್ಬ ಕಳ್ಳ’ ಇವರ ಬ್ಯಾನರ್​ ಅಡಿಯಲ್ಲಿ ಮೂಡಿ ಬಂತು. 1980ರಲ್ಲಿ ಬಂದ ‘ಡ್ರೈವರ್‌ ಹನುಮಂತು’ ಚಿತ್ರವನ್ನು ರಾಶಿ ಬ್ರದರ್ಸ್​ ನಿರ್ಮಾಣ ಮಾಡಿದರು. ಶಿವರಾಂ ಅವರೇ ಮುಖ್ಯ ಪಾತ್ರ ನಿರ್ವಹಿಸಿದರು. ಡಾ.ವಿಷ್ಣುವರ್ಧನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು. 1991ರಲ್ಲಿ ತೆರೆಗೆ ಬಂದ ತಮಿಳಿನ ‘ಧರ್ಮದುರೈ’ ಚಿತ್ರಕ್ಕೆ ಬಂಡವಾಳ ಹೂಡಿದರು. ಈ ಚಿತ್ರಕ್ಕೆ ರಜಿನಿಕಾಂತ್‌ ಹೀರೋ. ಶಿವರಾಜ್‌ಕುಮಾರ್ ಅಭಿನಯದ ‘ಬಹಳ ಚೆನ್ನಾಗಿದೆ’ ಚಿತ್ರವನ್ನು ರಾಶಿ ಸಹೋದರರು ನಿರ್ಮಿಸಿದರು. ಇದು ಅವರ ನಿರ್ಮಾಣದ ಕೊನೆಯ ಸಿನಿಮಾ.

1972ರಲ್ಲಿ ತೆರೆಗೆ ಬಂದ ‘ಹೃದಯ ಸಂಗಮ’ ಚಿತ್ರವನ್ನು ರಾಮನಾಥನ್​ ಹಾಗೂ ಶಿವರಾಂ ಒಟ್ಟಾಗಿ ನಿರ್ದೇಶನ ಮಾಡಿದ್ದರು. ಇಬ್ಬರೂ ಸೇರಿ ನಿರ್ದೇಶನ ಮಾಡಿದ ಮೊದಲ ಹಾಗೂ ಕೊನೆಯ ಸಿನಿಮಾ ಇದಾಗಿದೆ. ಇದಾದ ಬಳಿಕ ಅವರು ಯಾವುದೇ ಸಿನಿಮಾವನ್ನೂ ನಿರ್ದೇಶನ ಮಾಡಿಲ್ಲ.

ರಾಮನಾಥನ್​ ಅವರು ಹಿರಿಯ ನಿರ್ದೇಶಕರು. ಅಮಿತಾಭ್​ ಬಚ್ಚನ್​, ರಜನಿಕಾಂತ್​ ಜತೆ ಇವರಿಗೆ ಒಳ್ಳೆಯ ಒಡನಾಟ ಇತ್ತು. ದಕ್ಷಿಣ ಭಾರತದ ಚಿತ್ರರಂಗಕ್ಕೂ ಹಾಗೂ ಬಾಲಿವುಡ್​ಗೂ ಇವರು ಕೊಂಡಿ ಆಗಿದ್ದರು. 2013ರಲ್ಲಿ ಇವರು ನಿಧನ ಹೊಂದಿದ್ದರು.

ಇದನ್ನೂ ಓದಿ: Actor Shivaram: ಹಿರಿಯ ನಟ ಶಿವರಾಂ ನಿಧನ; ತ್ಯಾಗರಾಜನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

Published On - 4:06 pm, Sat, 4 December 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ