AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಮಾಡಿದ ಪಾರ್ಟಿ ದಿನ ನಡೆದಿದ್ದೇನು? ಪೊಲೀಸರಿಂದ ಸಿಕ್ತು ಇಂಚಿಂಚು ಮಾಹಿತಿ

ಸುಬ್ರಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಜೆಟ್​ಲ್ಯಾಗ್​ನಲ್ಲಿ ಅಂದು ಏನಾಯಿತು ಎನ್ನುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ದರ್ಶನ್ ಮಾಡಿದ ಪಾರ್ಟಿ ದಿನ ನಡೆದಿದ್ದೇನು? ಪೊಲೀಸರಿಂದ ಸಿಕ್ತು ಇಂಚಿಂಚು ಮಾಹಿತಿ
ಅಭಿಷೇಕ್​-ದರ್ಶನ್
Jagadisha B
| Edited By: |

Updated on: Jan 09, 2024 | 8:03 AM

Share

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ (Kaatera Movie) ಸಕ್ಸಸ್​ ಪಾರ್ಟಿ ಬಳಿಕ ದರ್ಶನ್, ಡಾಲಿ ಧನಂಜಯ್, ಅಭಿಷೇಕ್ ಅಂಬರೀಷ್ ಸೇರಿ ಅನೇಕರು ಬೆಂಗಳೂರಿನ ಜೆಟ್​ಲ್ಯಾಗ್​ನಲ್ಲಿ ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು. ಬೀಟ್ ಪೊಲೀಸರು ಸ್ಟಾರ್​ಗಳಿಗೆ ಪಾರ್ಟಿ ಮಾಡಲು ಅವಕಾಶ ನೀಡಿದ್ದೇಕೆ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ವಿಚಾರಣೆ ವೇಳೆ ಪೊಲೀಸರು ಮಾಹಿತಿ ನೀಡಿದ್ದಾರೆ. ಅಂದು ಅಲ್ಲಿ ಆಗಿದ್ದೇನೆ ಎಂಬುದನ್ನು ಮಲ್ಲೇಶ್ವರ ಎಸಿಪಿ ಎದುರು ವಿವರಿಸಿದ್ದಾರೆ.

ಸುಬ್ರಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅಂದು ಅಲ್ಲಿ ಏನಾಯಿತು ಎನ್ನುವ ಕುರಿತು ಅವರು ಮಾಹಿತಿ ನೀಡಿದ್ದಾರೆ. ಪ್ರಕರಣ ನಡೆದ ದಿನ ಮಧ್ಯರಾತ್ರಿ 12.45ಕ್ಕೆ ಜೆಟ್​ಲ್ಯಾಗ್​ಗೆ ಅವತ್ತಿನ ನೈಟ್ ರೌಂಡ್ಸ್ ಇರೋ ಎಸ್​ಐ ಮತ್ತು ಸಿಬ್ಬಂದಿ ಹೋಗಿದ್ದರು. ತಡರಾತ್ರಿ 1:10ಕ್ಕೆ ಎಸ್​ಐ ಜೆಟ್​ಲ್ಯಾಗ್ ರೆಸ್ಟೋಬಾರ್ ಕ್ಲೋಸ್ ಮಾಡಿಸಿದ್ದರು. ಸ್ಟಾರ್​ಗಳು ಒಳಗಡೆ ಇರೋದೇಕೆ ಎಂದು ಎಸ್​ಐ ಪ್ರಶ್ನೆ ಮಾಡಿದ್ದರು.

‘ದರ್ಶನ್ ಸಿನಿಮಾವೊಂದರ ಮಾತು ಕತೆ ನಡೆಯುತ್ತಿದೆ. ದರ್ಶನ್ ನಮ್ಮ ಫ್ಯಾಮಿಲಿ ಫ್ರೆಂಡ್. ಮೇಲೊಂದು ಗಾಜಿನ ರೂಮ್ ಇದೆ. ಅಲ್ಲಿ ಸಿನಿಮಾಗೆ ಸಂಬಂಧಿಸಿದಂತೆ ಮಾತು ಕತೆ ನಡೆಸುತ್ತಿದ್ದೇವೆ’ ಎಂದು ಜೆಟ್​ಲ್ಯಾಗ್ ಮಾಲೀಕರು ಮಾಹಿತಿ ನೀಡಿದ್ದರು. ಅಲ್ಲದೆ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್ ಮಾತ್ರ ಇದ್ದಾರೆ ಎಂದು ಜೆಟ್​ಲ್ಯಾಗ್ ಮಾಲೀಕರು ಮಾಹಿತಿ ನೀಡಿದ್ದರು.

ಈ ನಡುವೆ ಮಧ್ಯರಾತ್ರಿ 2.50ಕ್ಕೆ ಬ್ಯಾಂಕ್ ಆಫ್ ಇಂಡಿಯಾದಲ್ಲಿ ರಾಬರಿ ಆಗಿದೆ ಎಂದು ಪೊಲೀಸರಿಗೆ ಕರೆ ಬಂದಿದೆ. ರೆಸ್ಟೋಬಾರ್ ಕ್ಲೋಸ್ ಮಾಡಿಸಿ ಆ ಕೇಸ್ ಅಟೆಂಡ್ ಮಾಡಲು ಪೊಲೀಸರು ಹೋಗಿದ್ದರು. ಸೈರನ್ ಆಗಿದ್ದರಿಂದ ಬ್ಯಾಂಕ್ ರಾಬರಿ ಆಗಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಟೆಕ್ನಿಕಲ್ ಇಶ್ಯೂ ಆಗಿದ್ದರಿಂದ ಸೈರನ್ ಕೂಗಿತ್ತು. ಅಲ್ಲಿಗೆ ಮುಂಜಾನೆ 3 ಗಂಟೆ ಆಗಿತ್ತು. ಈ ಪ್ರಕರಣ ಮುಗಿಯುತ್ತಿದ್ದಂತೆ ಮತ್ತೆ ರೆಸ್ಟೋಬಾರ್​ನತ್ತ ಪೊಲೀಸರು ಹೋಗಿದ್ದರು.

ಇದನ್ನೂ ಓದಿ: ಜೆಟ್ ಲ್ಯಾಗ್ ಪಾರ್ಟಿ ಪ್ರಕರಣ: ದರ್ಶನ್, ಅಭಿಷೇಕ್​ಗೆ ಪೊಲೀಸರ ನೋಟಿಸ್

ಈ ವೇಳೆ ದರ್ಶನ್ ಜೊತೆ ಫೋಟೋಗಾಗಿ ಅಭಿಮಾನಿಗಳು ನಿಂತಿದ್ದರು. ಹೋಗಿ ಕ್ರೌಡ್ ಕ್ಲಿಯರ್ ಮಾಡಿ ದರ್ಶನ್ ಮತ್ತು ಸಹನಟರನ್ನ ಕಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ. ಜೊತೆಗೆ ಅಂದು ರಾತ್ರಿ ನಡೆದ ಘಟನೆಗಳ ಬಗ್ಗೆ ಪೊಲೀಸ್ ಸಿಬ್ಬಂದಿ ಡೈರಿಯಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಇತ್ತ, ಜೆಟ್​ಲ್ಯಾಗ್ ಮಾಲೀಕರಾದ ಶಶಿರೇಖಾ ಜಗದೀಶ್ ಹೇಳಿಕೆಯಲ್ಲಿ ನಟ ದರ್ಶನ್ ಸೇರಿ ಎಂಟು ಜನರ ಹೆಸರು ಇದೆ. ಹೀಗಾಗಿ, ಅವರಿಗೆ ನೋಟಿಸ್ ನೀಡಲಾಗಿದೆ. ಸದ್ಯ ನೋಟಿಸ್​ಗೆ ಯಾವುದೇ ಉತ್ತರ ಬಂದಿಲ್ಲ. ಹೀಗಾಗಿ, ಎರಡನೇ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು