AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಪ್ರಭುದೇವ ಪರ್ಫೆಕ್ಷನಿಸ್ಟ್ ಎಂದ ಸುದೀಪ್; ನಟನ ಪ್ರತಿಕ್ರಿಯೆ ಏನು?

ಪ್ರಭುದೇವ ಅವರಿಗೆ ‘ಕರಟಕ ದಮನಕ’ ಸಿನಿಮಾದಲ್ಲಿ ಶಿವಣ್ಣ ಜೊತೆ ತೆರೆ ಹಂಚಿಕೊಳ್ಳೋ ಅವಕಾಶ ಸಿಕ್ಕಿದೆ. ಇಬ್ಬರೂ ಇದೇ ಮೊದಲ ಬಾರಿಗೆ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಬಳಿಕ ಸುದೀಪ್ ಅವರು ಈ ಸಿನಿಮಾ ಬಗ್ಗೆ ಹಾಗೂ ನಟರ ಬಗ್ಗೆ ಮಾತನಾಡಿದ್ದಾರೆ.

Kichcha Sudeep: ಪ್ರಭುದೇವ ಪರ್ಫೆಕ್ಷನಿಸ್ಟ್ ಎಂದ ಸುದೀಪ್; ನಟನ ಪ್ರತಿಕ್ರಿಯೆ ಏನು?
ಪ್ರಭುದೇವ-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Feb 29, 2024 | 7:03 AM

Share

ಕಿಚ್ಚ ಸುದೀಪ್ (Kichcha Sudeep) ಅವರಿಗೆ ಕನ್ನಡ ಚಿತ್ರರಂಗ ಹಾಗೂ ಪರಭಾಷೆಯ ಅನೇಕರ ಜೊತೆ ಒಳ್ಳೆಯ ಬಾಂಧವ್ಯ ಇದೆ. ಅನೇಕ ಹೊಸಬರಿಗೆ ಅವರು ಬೆನ್ನು ತಟ್ಟಿದ್ದು ಇದೆ. ಇತ್ತೀಚೆಗೆ ಸುದೀಪ್ ಅವರು ಯೋಗರಾಜ್ ಭಟ್ ನಿರ್ದೇಶನದ, ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ನಟನೆಯ ‘ಕರಟಕ ದಮನಕ’ ಸಿನಿಮಾದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಮಾಡಿ ತಂಡದ ಬೆನ್ನು ತಟ್ಟಿದ್ದಾರೆ. ಆ ಬಳಿಕ ಅವರು ಯೋಗರಾಜ್ ಭಟ್ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು ಪ್ರಭುದೇವ ಹಾಗೂ ಶಿವರಾಜ್​ಕುಮಾರ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಪ್ರಭುದೇವ ಅವರು ಡ್ಯಾನ್ಸರ್ ಆಗಿ, ಕೊರಿಯೋಗ್ರಾಫರ್ ಆಗಿ, ನಿರ್ದೇಶಕನಾಗಿ, ನಟನಾಗಿ ಗುರುತಿಸಿಕೊಂಡಿದ್ದಾರೆ. ‘ಕರಟಕ ದಮನಕ’ ಸಿನಿಮಾದಲ್ಲಿ ಅವರಿಗೆ ಶಿವಣ್ಣ ಜೊತೆ ತೆರೆ ಹಂಚಿಕೊಳ್ಳೋ ಅವಕಾಶ ಸಿಕ್ಕಿದೆ. ಇಬ್ಬರೂ ಇದೇ ಮೊದಲ ಬಾರಿಗೆ ಒಟ್ಟಾಗಿ ಕೆಲಸ ಮಾಡಿದ್ದಾರೆ ಅನ್ನೋದು ವಿಶೇಷ. ಈ ಚಿತ್ರದ ಟೀಸರ್ ರಿಲೀಸ್ ಬಳಿಕ ಸುದೀಪ್ ಅವರು ಈ ಸಿನಿಮಾ ಬಗ್ಗೆ ಹಾಗೂ ನಟರ ಬಗ್ಗೆ ಮಾತನಾಡಿದ್ದಾರೆ.

‘ಶಿವರಾಜ್​ಕುಮಾರ್ ಅವರು ಎನರ್ಜಿಯ ಗಣಿ. ಪ್ರಭುದೇವ ಮಿಸ್ಟರ್ ಪರ್ಫೆಕ್ಷನಿಸ್ಟ್’ ಎಂದು ಕರೆದಿದ್ದಾರೆ ಸುದೀಪ್. ಈ ಸಂದರ್ಶನದ ವಿಡಿಯೋನ ಪ್ರಭುದೇವ ಹಂಚಿಕೊಂಡಿದ್ದು, ‘ಎಂತಹ ಸ್ವೀಟ್ ಗೆಸ್ಚರ್’ ಎಂದು ಹೇಳಿದ್ದಾರೆ. ಈ ಟ್ವೀಟ್​ನ ಸುದೀಪ್ ರೀಟ್ವೀಟ್ ಮಾಡಿಕೊಂಡಿದ್ದು ಹಗ್ ಮಾಡೋ ಎಮೋಜಿ ಹಾಕಿದ್ದಾರೆ. ಈ ಚಿತ್ರಕ್ಕೆ ಎಲ್ಲರೂ ಶುಭ ಕೋರುತ್ತಿದ್ದಾರೆ.

ಪ್ರಭುದೇವ ಟ್ವೀಟ್..

ಸುದೀಪ್ ಹಾಗೂ ಪ್ರಭುದೇವ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ‘ದಬಾಂಗ್ 3’ ಚಿತ್ರವನ್ನು ಪ್ರಭುದೇವ ಅವರು ನಿರ್ದೇಶನ ಮಾಡಿದ್ದರು. ಬಾಲಿವುಡ್​ನ ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಹೀರೋ ಆದರೆ, ಸುದೀಪ್ ವಿಲನ್ ಪಾತ್ರ ಮಾಡಿದ್ದರು. ಪ್ರಭುದೇವ ಡೈರೆಕ್ಷನ್​ನಲ್ಲಿ ಸುದೀಪ್ ಕೆಲಸ ಮಾಡಿದ್ದರು. ಹೀಗಾಗಿ, ಪ್ರಭುದೇವ ಕೆಲಸ ಹೇಗೆ ಎಂಬುದು ಸುದೀಪ್​ಗೆ ಸರಿಯಾಗಿ ತಿಳಿದಿದೆ. ಈ ಕಾರಣದಿಂದಲೇ ಅವರನ್ನು ಸುದೀಪ್ ಪರ್ಫೆಕ್ಷನಿಸ್ಟ್ ಎಂದು ಕರೆದಿದ್ದಾರೆ.

ಇದನ್ನೂ ಓದಿ: ‘ಒಂದು ಸರಳ ಪ್ರೇಮಕಥೆ’ ಸಿನಿಮಾ ನೋಡಿದ ಶಿವರಾಜ್​ಕುಮಾರ್-ಗೀತಾ ದಂಪತಿ

‘ಕರಟಕ ದಮನಕ’ ಸಿನಿಮಾಗೆ ಯೋಗರಾಜ್ ಭಟ್ ನಿರ್ದೇಶನ ಇದೆ. ರಾಕ್​ಲೈನ್ ವೆಂಕಟೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಾರ್ಚ್ 8ರಂದು ಸಿನಿಮಾ ರಿಲೀಸ್ ಆಗಲಿದೆ. ನಿಶ್ವಿಕಾ ನಾಯ್ಡು ಹಾಗೂ ಪ್ರಿಯಾ ಆನಂದ್ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ