Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಕ್ಲೈಮ್ಯಾಕ್ಸ್​ ಶೂಟ್​ ಮಾಡೋದು ಎಷ್ಟು ಕಷ್ಟವಾಗಿತ್ತು?  ಸಂಜಯ್ ದತ್ ವಿವರಿಸಿದ್ದು ಹೀಗೆ

ಸಂಜಯ್ ದತ್ ಅನಾರೋಗ್ಯದ ಕಾರಣ ಸಾಹಸ ದೃಶ್ಯಗಳನ್ನು ಡ್ಯೂಪ್ ಬಳಸಿ ಚಿತ್ರೀಕರಿಸಲು ಚಿತ್ರತಂಡ ಪ್ಲ್ಯಾನ್ ಮಾಡಿತ್ತು. ಇದನ್ನು ಸಂಜಯ್​ ದತ್ ನಿರಾಕರಿಸಿದ್ದಾಗಿ ಈ ಮೊದಲು ವರದಿ ಆಗಿತ್ತು.

‘ಕೆಜಿಎಫ್​ 2’ ಕ್ಲೈಮ್ಯಾಕ್ಸ್​ ಶೂಟ್​ ಮಾಡೋದು ಎಷ್ಟು ಕಷ್ಟವಾಗಿತ್ತು?  ಸಂಜಯ್ ದತ್ ವಿವರಿಸಿದ್ದು ಹೀಗೆ
ಸಂಜಯ್ ದತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 02, 2022 | 9:05 PM

ಸಂಜಯ್ ದತ್​ ಅವರು (Sanjay Dutt) ‘ಕೆಜಿಎಫ್​ 2’ ಸಿನಿಮಾದಲ್ಲಿ (KGF Chapter 2) ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ನಟಿಸುವ ಸಂದರ್ಭದಲ್ಲೇ ಸಂಜಯ್​ ದತ್​ಗೆ ಕ್ಯಾನ್ಸರ್​ (Cancer) ಇರುವ ವಿಚಾರ ಗೊತ್ತಾಗಿತ್ತು. ಹೀಗಾಗಿ, ಒಂದು ಬ್ರೇಕ್​ ತೆಗೆದುಕೊಂಡು ಚಿಕಿತ್ಸೆ ಪಡೆದು ಅವರು ಮತ್ತೆ ಸೆಟ್​ಗೆ ಮರಳಿದ್ದರು. ಕ್ಯಾನ್ಸರ್​ನಿಂದ ಗುಣಮುಖರಾದ ನಂತರದಲ್ಲಿ ಮತ್ತೆ ನಟಿಸೋದು ಅಷ್ಟು ಸುಲಭದ ಮಾತಾಗಿರಲಿಲ್ಲ. ಈ ಬಗ್ಗೆ ಸಂಜಯ್ ದತ್​ ಹೇಳಿಕೊಂಡಿದ್ದಾರೆ.

‘ಅದು 25 ಕೆಜಿಯೋ ಅಥವಾ 2 ಕೆಜಿಯೋ, ಸರಿಯಾಗಿ ನೆನಪಿಲ್ಲ. ಆದರೆ, ಅದು ತುಂಬಾನೇ ಭಾರವಾಗಿತ್ತು. ಅದನ್ನು ಶೂಟ್ ಮಾಡುವ ಸಂದರ್ಭದಲ್ಲಿ ತುಂಬಾನೇ ಕಷ್ಟಕರವಾಗಿತ್ತು. ನನಗೆ ಕೊಟ್ಟ ಶಸ್ತ್ರಾಸ್ತ್ರ ಲೆದರ್​ನಿಂದ ಮಾಡಿದ್ದರು. ಸಿನಿಮಾ ಮಾಡೋದು ಅಷ್ಟು ಸುಲಭದ ಮಾತಲ್ಲ. ಹಲವು ಅಡೆತಡೆಗಳು ಎದುರಾಗುತ್ತವೆ. ಕ್ಲೈಮ್ಯಾಕ್ಸ್​ ಶೂಟ್ ಮಾಡುವಾಗ ನಾವು ಭಾರವಾದ ಬಟ್ಟೆ ತೊಟ್ಟಿದ್ದೆವು. ನನ್ನ ತಮ್ಮ (ಯಶ್​) ಕೂಡ ಅಷ್ಟೇ ಭಾರದ ಬಟ್ಟೆ ತೊಟ್ಟಿದ್ದರು. ನಾವು ಧೂಳಿನಲ್ಲಿ ಕೆಲಸ ಮಾಡಬೇಕಿತ್ತು. ಇದು ಕಷ್ಟ ಎನಿಸಿದರೂ, ನಾವು ಪ್ರೀತಿಯಿಂದ ಮಾಡಿದೆವು’ ಎಂದಿದ್ದಾರೆ ಸಂಜಯ್​ ದತ್.

ಸಂಜಯ್​ ದತ್​ ಅವರಿಗೆ ನಟನೆ ಎಂದರೆ ಎಲ್ಲಿಲ್ಲದ ಪ್ರೀತಿ. ಈ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ನಾನು ಕಲಾವಿದ. ಕಲಾವಿದನಾಗಿಯೇ ಸಾಯುತ್ತೇನೆ. ನಾನು ಏನು ಮಾಡುತ್ತೇನೆ ಅದಕ್ಕೆ ಖುಷಿ ಇದೆ.  ನಾನು 45 ವರ್ಷಗಳಿಂದ ಇಂಡಸ್ಟ್ರಿಯಲ್ಲಿ ಇದ್ದೇನೆ.  ಹೊಸ ಮುಖಗಳು ಬರುತ್ತಿರುವುದನ್ನು ನಾನು ನೋಡುತ್ತಿದ್ದೇನೆ’ ಎಂದಿದ್ದಾರೆ ಅವರು.

ಸಂಜಯ್ ದತ್ ಅನಾರೋಗ್ಯದ ಕಾರಣ ಸಾಹಸ ದೃಶ್ಯಗಳನ್ನು ಡ್ಯೂಪ್ ಬಳಸಿ ಚಿತ್ರೀಕರಿಸಲು ಚಿತ್ರತಂಡ ಪ್ಲ್ಯಾನ್ ಮಾಡಿತ್ತು. ಇದನ್ನು ನಿರಾಕರಿಸಿದ್ದ ಸಂಜಯ್​ ದತ್, ತಾವೇ ಸಾಹಸ ದೃಶ್ಯಗಳಲ್ಲಿ ಭಾಗವಹಿಸುವುದಾಗಿ ಹೇಳಿದ್ದಾಗಿ ಈ ಮೊದಲು ವರದಿ ಆಗಿತ್ತು.

‘ಕೆಜಿಎಫ್​ 2’ನಲ್ಲಿ ಯಶ್​ಗೆ ಜತೆಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಸಂಜಯ್​ ದತ್​, ರವೀನಾ ಟಂಡನ್​ ಮೊದಲಾದವರು ನಟಿಸಿದ್ದಾರೆ. ಪ್ರಶಾಂತ್​ ನೀಲ್ ನಿರ್ದೇಶನ ಇರುವ ಈ ಚಿತ್ರವನ್ನು, ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮಾಡಿದೆ.

ಇದನ್ನೂ ಓದಿ: ಕೆಜಿಎಫ್ 2 ಕ್ಲೈಮ್ಯಾಕ್ಸ್ ಶೂಟಿಂಗ್: ಪ್ರಶಾಂತ್ ನೀಲ್ ಬೇಡಿಕೆಗೆ ನೋ ಎಂದ ಸಂಜಯ್ ದತ್

KGF 2: ಅಧೀರನ ಫ್ಯಾನ್ ಅಂತೆ ರಾಕಿ! ಸಂಜಯ್ ದತ್ ಬಗ್ಗೆ ಯಶ್ ವಿಶೇಷ ಮಾತು

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !