AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಸೇರಿದಂತೆ 4 ಆರೋಪಿಗನ್ನು ಮಾತ್ರ ಪೊಲೀಸ್ ಕಸ್ಟಡಿಗೆ ನೀಡಲು ಇವೆ ಪ್ರಮುಖ ಕಾರಣ

ಜೂನ್ 11ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳನ್ನು ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಬಂಧಿಸಲಾಗಿತ್ತು ದರ್ಶನ್ ಸೇರಿದಂತೆ ನಾಲ್ವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಪೊಲೀಸರು ಆದೇಶ ಹೊರಡಿಸಿದ್ದಾರೆ. ಇದಕ್ಕೆ ಕಾರಣ ಏನು ಎನ್ನುವ ಬಗ್ಗೆ ಇಲ್ಲಿದೆ ವಿವರ.

ದರ್ಶನ್ ಸೇರಿದಂತೆ 4 ಆರೋಪಿಗನ್ನು ಮಾತ್ರ ಪೊಲೀಸ್ ಕಸ್ಟಡಿಗೆ ನೀಡಲು ಇವೆ ಪ್ರಮುಖ ಕಾರಣ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jun 21, 2024 | 7:00 AM

Share

ನಟ ದರ್ಶನ್, ಪವಿತ್ರಾ ಗೌಡ (Pavithra Gowda) ಸೇರಿದಂತೆ ಹಲವು ಮಂದಿ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಎಲ್ಲರೂ ಎರಡು ಬಾರಿ ಪೊಲೀಸ್ ಕಸ್ಟಡಿ ಎದುರಿಸಿದ್ದರು. ಈಗ ಮೂರನೇ ಬಾರಿಗೆ (ಜೂನ್ 20) ಇವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿದ್ದು, ದರ್ಶನ್, ಧನರಾಜ್, ವಿನಯ್, ಪ್ರದೋಶ್​ನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಉಳಿದವರನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಅಷ್ಟಕ್ಕೂ ಈ ನಾಲ್ವರನ್ನೂ ಮಾತ್ರ ಕಸ್ಟಡಿಗೆ ಕೇಳಲು ಪೊಲೀಸರು ಕೊಟ್ಟ ಕಾರಣಗಳು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ

  1. ಈ ನಾಲ್ವರು ಆರೋಪಿಗಳು ತನಿಖೆಗೆ ಸರಿಯಾಗಿ ಸ್ಪಂದಿಸದೆ, ಕೆಲ ವಿಚಾರಗಳನ್ನು ಮರೆಮಾಚುತ್ತಿದ್ದಾರೆ.
  2. ದರ್ಶನ್ ಮನೆಯಿಂದ ವಶಪಡಿಸಿಕೊಂಡ 37.40 ಲಕ್ಷ, ಪತ್ನಿ ಮನೆಯಿಂದ ವಶಪಡಿಸಿಕೊಂಡ 3 ಲಕ್ಷ ರೂಪಾಯಿ ಹಣದ ಮೂಲದ ಬಗ್ಗೆ ತನಿಖೆ ನಡೆಸಬೇಕಿದೆ.
  3. ಕೊಲೆ‌ ನಡೆದ ನಂತರ ದರ್ಶನ್ ಕೆಲವು ವ್ಯಕ್ತಿಗಳನ್ನ ಸಂಪರ್ಕಿಸಿದ್ದು, ಇದರ ಉದ್ದೇಶ ಮತ್ತು ಕಾರಣವನ್ನು ದರ್ಶನ್ ಉಪಸ್ಥಿತಿಯಲ್ಲೇ ವಿಚಾರಿಸಬೇಕಿದೆ. (ಸಂಪರ್ಕಿಸಿದ್ದವರನ್ನು ಕರೆಸಿ ದರ್ಶನ್ ಜೊತೆ ಮುಖಾಮುಖಿ ಕೂರಿಸಿ ವಿಚಾರಣೆ)
  4. ಆರೋಪಿ ಪ್ರದೋಶ್ ಸಾಕ್ಷ್ಯ ನಾಶದಲ್ಲಿ ಮುಖ್ಯಪಾತ್ರ ವಹಿಸಿದ್ದಾರೆ. ಆದರೆ ತನಿಖೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ಮತ್ತಷ್ಟು ವಿಚಾರಣೆ ಮಾಡಬೇಕಿದೆ.
  5. ಆರೋಪಿ ಧನರಾಜ್ ಎಲೆಕ್ಟ್ರಿಕ್ ಚಾರ್ಜ್ ಟಾರ್ಚ್ ಖರೀದಿ ಮಾಡಿದ್ದರು. ಇದ ಮೂಲದ ಬಗ್ಗೆ ತಿಳಿಸುತ್ತಿಲ್ಲ. ಬೇರೆ ವ್ಯಕ್ತಿಗಳ ಜೊತೆ ಶೆಡ್​ಗೆ ಬಂದು ಹೋದ ಬಗ್ಗೆ ವಿಚಾರಣೆ ನಡೆಸಬೇಕಿದೆ.
  6. ಆರೋಪಿ ವಿನಯ್ ಮೊಬೈಲ್​ನಲ್ಲಿ ಮುಖ್ಯವಾದ ಸಾಕ್ಷಿ ಸಿಕ್ಕಿದ್ದು, ಅದನ್ನು ಕಳುಹಿಸಿದ್ದವರು ಯಾರು ಎಂದು ವಿಚಾರಣೆ ನಡೆಸಬೇಕಿದೆ
  7. ಕೊಲೆ ನಡೆದ ಶೆಡ್​ನಲ್ಲಿದ್ದ ಕೆಲಗಾರರಿಗೆ ಕೆಲವರು ಸಾಕ್ಷಿ ಹೇಳದಂತೆ ಆಮಿಷ ಒಡ್ಡಿದ್ದಾರೆ. ಆ ಅನಾಮಿಕ ವ್ಯಕ್ತಿಗಳಿಗೂ ಆರೋಪಿಗಳಿಗೂ ಇರೋ ಸಂಬಂಧದ ಬಗ್ಗೆ ವಿಚಾರಣೆ ನಡೆಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?