AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಸೇರಿದಂತೆ 4 ಆರೋಪಿಗನ್ನು ಮಾತ್ರ ಪೊಲೀಸ್ ಕಸ್ಟಡಿಗೆ ನೀಡಲು ಇವೆ ಪ್ರಮುಖ ಕಾರಣ

ಜೂನ್ 11ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳನ್ನು ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಬಂಧಿಸಲಾಗಿತ್ತು ದರ್ಶನ್ ಸೇರಿದಂತೆ ನಾಲ್ವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಪೊಲೀಸರು ಆದೇಶ ಹೊರಡಿಸಿದ್ದಾರೆ. ಇದಕ್ಕೆ ಕಾರಣ ಏನು ಎನ್ನುವ ಬಗ್ಗೆ ಇಲ್ಲಿದೆ ವಿವರ.

ದರ್ಶನ್ ಸೇರಿದಂತೆ 4 ಆರೋಪಿಗನ್ನು ಮಾತ್ರ ಪೊಲೀಸ್ ಕಸ್ಟಡಿಗೆ ನೀಡಲು ಇವೆ ಪ್ರಮುಖ ಕಾರಣ
ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on: Jun 21, 2024 | 7:00 AM

ನಟ ದರ್ಶನ್, ಪವಿತ್ರಾ ಗೌಡ (Pavithra Gowda) ಸೇರಿದಂತೆ ಹಲವು ಮಂದಿ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಎಲ್ಲರೂ ಎರಡು ಬಾರಿ ಪೊಲೀಸ್ ಕಸ್ಟಡಿ ಎದುರಿಸಿದ್ದರು. ಈಗ ಮೂರನೇ ಬಾರಿಗೆ (ಜೂನ್ 20) ಇವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿದ್ದು, ದರ್ಶನ್, ಧನರಾಜ್, ವಿನಯ್, ಪ್ರದೋಶ್​ನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಉಳಿದವರನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಅಷ್ಟಕ್ಕೂ ಈ ನಾಲ್ವರನ್ನೂ ಮಾತ್ರ ಕಸ್ಟಡಿಗೆ ಕೇಳಲು ಪೊಲೀಸರು ಕೊಟ್ಟ ಕಾರಣಗಳು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ

  1. ಈ ನಾಲ್ವರು ಆರೋಪಿಗಳು ತನಿಖೆಗೆ ಸರಿಯಾಗಿ ಸ್ಪಂದಿಸದೆ, ಕೆಲ ವಿಚಾರಗಳನ್ನು ಮರೆಮಾಚುತ್ತಿದ್ದಾರೆ.
  2. ದರ್ಶನ್ ಮನೆಯಿಂದ ವಶಪಡಿಸಿಕೊಂಡ 37.40 ಲಕ್ಷ, ಪತ್ನಿ ಮನೆಯಿಂದ ವಶಪಡಿಸಿಕೊಂಡ 3 ಲಕ್ಷ ರೂಪಾಯಿ ಹಣದ ಮೂಲದ ಬಗ್ಗೆ ತನಿಖೆ ನಡೆಸಬೇಕಿದೆ.
  3. ಕೊಲೆ‌ ನಡೆದ ನಂತರ ದರ್ಶನ್ ಕೆಲವು ವ್ಯಕ್ತಿಗಳನ್ನ ಸಂಪರ್ಕಿಸಿದ್ದು, ಇದರ ಉದ್ದೇಶ ಮತ್ತು ಕಾರಣವನ್ನು ದರ್ಶನ್ ಉಪಸ್ಥಿತಿಯಲ್ಲೇ ವಿಚಾರಿಸಬೇಕಿದೆ. (ಸಂಪರ್ಕಿಸಿದ್ದವರನ್ನು ಕರೆಸಿ ದರ್ಶನ್ ಜೊತೆ ಮುಖಾಮುಖಿ ಕೂರಿಸಿ ವಿಚಾರಣೆ)
  4. ಆರೋಪಿ ಪ್ರದೋಶ್ ಸಾಕ್ಷ್ಯ ನಾಶದಲ್ಲಿ ಮುಖ್ಯಪಾತ್ರ ವಹಿಸಿದ್ದಾರೆ. ಆದರೆ ತನಿಖೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ಮತ್ತಷ್ಟು ವಿಚಾರಣೆ ಮಾಡಬೇಕಿದೆ.
  5. ಆರೋಪಿ ಧನರಾಜ್ ಎಲೆಕ್ಟ್ರಿಕ್ ಚಾರ್ಜ್ ಟಾರ್ಚ್ ಖರೀದಿ ಮಾಡಿದ್ದರು. ಇದ ಮೂಲದ ಬಗ್ಗೆ ತಿಳಿಸುತ್ತಿಲ್ಲ. ಬೇರೆ ವ್ಯಕ್ತಿಗಳ ಜೊತೆ ಶೆಡ್​ಗೆ ಬಂದು ಹೋದ ಬಗ್ಗೆ ವಿಚಾರಣೆ ನಡೆಸಬೇಕಿದೆ.
  6. ಆರೋಪಿ ವಿನಯ್ ಮೊಬೈಲ್​ನಲ್ಲಿ ಮುಖ್ಯವಾದ ಸಾಕ್ಷಿ ಸಿಕ್ಕಿದ್ದು, ಅದನ್ನು ಕಳುಹಿಸಿದ್ದವರು ಯಾರು ಎಂದು ವಿಚಾರಣೆ ನಡೆಸಬೇಕಿದೆ
  7. ಕೊಲೆ ನಡೆದ ಶೆಡ್​ನಲ್ಲಿದ್ದ ಕೆಲಗಾರರಿಗೆ ಕೆಲವರು ಸಾಕ್ಷಿ ಹೇಳದಂತೆ ಆಮಿಷ ಒಡ್ಡಿದ್ದಾರೆ. ಆ ಅನಾಮಿಕ ವ್ಯಕ್ತಿಗಳಿಗೂ ಆರೋಪಿಗಳಿಗೂ ಇರೋ ಸಂಬಂಧದ ಬಗ್ಗೆ ವಿಚಾರಣೆ ನಡೆಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್