AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೋಟಿಗೊಬ್ಬ 3’ ರಿಲೀಸ್​ ಏಕಾಗಲಿಲ್ಲ? ಅಸಲಿಗೆ ಆಗಿದ್ದೇನು? ಇಲ್ಲಿದೆ ನಿಜವಾದ ಕಾರಣ

‘ಕೋಟಿಗೊಬ್ಬ 3’ ಶೋ ಕ್ಯಾನ್ಸಲ್​ ಆಗೋಕೆ ಕಾರಣವೇನು? ಇದಕ್ಕೆ ನಿರ್ಮಾಪಕರು ಕೊಡುತ್ತಿರುವ ಕಾರಣ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಕೋಟಿಗೊಬ್ಬ 3’ ರಿಲೀಸ್​ ಏಕಾಗಲಿಲ್ಲ? ಅಸಲಿಗೆ ಆಗಿದ್ದೇನು? ಇಲ್ಲಿದೆ ನಿಜವಾದ ಕಾರಣ
ಸೂರಪ್ಪ ಬಾಬು-ಸುದೀಪ್​
TV9 Web
| Edited By: |

Updated on:Oct 14, 2021 | 1:43 PM

Share

ಇಂದು ಗಾಂಧಿ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಕಿಚ್ಚ ಸುದೀಪ್​ ಅಭಿಮಾನಿಗಳು ‘ಕೋಟಿಗೊಬ್ಬ 3’ ಸಿನಿಮಾ ರಿಲೀಸ್​ಗಾಗಿ ಕಾದು ಕೂತಿದ್ದರು. ದೊಡ್ಡದೊಡ್ಡ ಕಟೌಟ್​ ರೆಡಿ ಮಾಡಿಟ್ಟುಕೊಂಡಿದ್ದರು. ಹಾಲಿನ ಅಭಿಷೇಕಕ್ಕೂ ಸಿದ್ಧತೆ ನಡೆದಿತ್ತು. ಆದರೆ, ಒಂದೊಂದೇ ಶೋಗಳು ಕ್ಯಾನ್ಸಲ್​ ಆಗುತ್ತಾ ಬಂದವು.  ಇದು ಸುದೀಪ್​ ಅಭಿಮಾನಿಗಳಿಗೆ ಕೋಪ ತರಿಸಿದೆ. ನಾಳೆಯಿಂದ ಶೋ ಆರಂಭವಾಗುತ್ತದೆ ಎನ್ನುವ ಸ್ಪಷ್ಟನೆ ಸಿಕ್ಕಿದೆಯಾದರೂ ಅದು ಖಾತ್ರಿ ಇಲ್ಲ. ಹಾಗಾದರೆ, ‘ಕೋಟಿಗೊಬ್ಬ 3’ ಶೋ ಕ್ಯಾನ್ಸಲ್​ ಆಗೋಕೆ ಕಾರಣವೇನು? ಇದಕ್ಕೆ ನಿರ್ಮಾಪಕರು ಕೊಡುತ್ತಿರುವ ಕಾರಣ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಫ್ಯಾನ್ಸ್​​ ಶೋ ಇಲ್ಲ ಅಂದ್ರು

ಮುಂಜಾನೆ 7ಗಂಟೆಗೆ ಫ್ಯಾನ್ಸ್​ ಶೋ ಇತ್ತು. ಅಭಿಮಾನಿಗಳೆಲ್ಲರೂ ಸಿನಿಮಾಗಾಗಿ ಕಾದು ಕೂತಿದ್ದರು. ಆನ್​ಲೈನ್​ನಲ್ಲಿ ಟಿಕೆಟ್​ ಬುಕ್​ ಮಾಡಿಕೊಂಡು ಚಿತ್ರಮಂದಿರದತ್ತ ತೆರಳಿದರು. ಆದರೆ, ಶೋ ನಡೆಯುತ್ತಿಲ್ಲ ಎನ್ನುವ ಉತ್ತರ ಚಿತ್ರಮಂದಿರದವರ ಕಡೆಯಿಂದ ಬಂತು. ಇದಕ್ಕೆ ಕಾರಣವೇನು ಎಂದು ಕೇಳಿದರೆ, ಸಿನಿಮಾಗೆ ಲೈಸೆನ್ಸ್​ ಸಮಸ್ಯೆ ಎಂಬಿತ್ಯಾದಿ ಉತ್ತರ ಬಂತು. ಆದರೆ, ಯಾವುದೇ ಸ್ಪಷ್ಟನೆ ಚಿತ್ರತಂಡದಿಂದ ಸರಿಯಾಗಿ ಸಿಗಲಿಲ್ಲ.

10ಗಂಟೆಯಿಂದ ಸಿನಿಮಾ ಪ್ರಸಾರ ಅಂದ್ರು

9 ಗಂಟೆ ಸುಮಾರಿಗೆ ನಿರ್ಮಾಪಕ ಸೂರಪ್ಪ ಬಾಬು ಕಡೆಯಿಂದ ಈ ಬಗ್ಗೆ ಪ್ರತಿಕ್ರಿಯೆ ಬಂತು. ‘ನಾವು ಯಾವುದೇ ಫ್ಯಾನ್ಸ್​ ಶೋ ಇಟ್ಟಿಲ್ಲ. ಸಿನಿಮಾ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸಿ. ಎಂದಿನಂತೆ 10 ಗಂಟೆಗೆ ಶೋ ಆರಂಭವಾಗಲಿದೆ’ ಎಂದು ಸೂರಪ್ಪ ಬಾಬು ತಿಳಿಸಿದರು. ಅಭಿಮಾನಿಗಳು 11 ಗಂಟೆಗೆ ಚಿತ್ರಮಂದಿರಕ್ಕೆ ತೆರಳಿದರೂ ಸಿನಿಮಾ ರಿಲೀಸ್​ ಆಗಲೇ ಇಲ್ಲ. ಇದು ಅವರಿಗೆ ಮತ್ತೂ ನಿರಾಸೆ ತರಿಸಿತು.

ಈಗ ಹೇಳ್ತಿರೋದೆ ಬೇರೆ

‘ಕನ್ನಡ ಕಲಾಭಿಮಾನಿಗಳಲ್ಲಿ ಹಾಗೂ ಕಿಚ್ಚ ಸುದೀಪ್​ ಅಭಿಮಾನಿಗಳಲ್ಲಿ ಮನವಿ. ವಿತರಕರು ಮಾಡಿದ ಮೋಸದಿಂದ ‘ಕೋಟಿಗೊಬ್ಬ 3’ ರಿಲೀಸ್​ ಮಾಡೋಕೆ ಆಗ್ತಿಲ್ಲ. ಎಂದಿನಂತೆ ಶುಕ್ರವಾರದಿಂದ (ಅಕ್ಟೋಬರ್​ 15) ಬೆಳಗ್ಗೆ 6 ಗಂಟೆಯಿಂದ ಶೋ ಪ್ರಸಾರವಾಗಲಿದೆ. ತಾವು ಸಹಕರಿಸಿ. ಸುದೀಪ್​ ಅವರೇ ನಿಮ್ಮ ಬಳಿಯೂ ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಟ್ವೀಟ್​ ಮಾಡಿ’ ಎಂದಿದ್ದಾರೆ ಸೂರಪ್ಪ ಬಾಬು.

ಇದನ್ನೂ ಓದಿ: Salaga Movie: ‘ಸಲಗ’ ಚಿತ್ರದ ಫಸ್ಟ್​ ಹಾಫ್​ ರಿಪೋರ್ಟ್​; ದುನಿಯಾ ವಿಜಯ್​ ಸಿನಿಮಾದಲ್ಲಿ ಇಂಟರ್​ವಲ್​ ತನಕ ಏನುಂಟು ಏನಿಲ್ಲ?

Kotigobba 3: ಇಂದು ಬಿಡುಗಡೆಯಾಗುತ್ತಿಲ್ಲ ‘ಕೋಟಿಗೊಬ್ಬ 3’; ಇನ್ಯಾವಾಗ ಬಿಡುಗಡೆ? ಇಲ್ಲಿದೆ ಮಾಹಿತಿ

Published On - 12:33 pm, Thu, 14 October 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ