AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಹಿತಾಶ್ವ ಎಂದರೆ ಅಲ್ಪಾಯುಶಿ; ಪುನೀತ್​ ಹೆಸರು ಬದಲಾವಣೆಗೆ ಕಾರಣವಾಗಿತ್ತು ಈ ವಿಚಾರ

ರಾಜ್​ಕುಮಾರ್​ ಅವರಿಗೆ ಮಗನಿಗೆ ಲೋಹಿತ್ ಎಂದು ಹೆಸರು ಇಡಬೇಕು ಅನಿಸಿದ್ದು ‘ಸತ್ಯ ಹರಿಶ್ಚಂದ್ರ' ಸಿನಿಮಾದಿಂದ. ಸತ್ಯ ಹರಿಶ್ಚಂದ್ರನ ಪುತ್ರನ ಹೆಸರು ಲೋಹಿತಾಶ್ವ. ಈ ಹೆಸರು ರಾಜ್​ಕುಮಾರ್​ಗೆ ತುಂಬಾನೇ ಇಷ್ಟವಾಗಿತ್ತು.

ಲೋಹಿತಾಶ್ವ ಎಂದರೆ ಅಲ್ಪಾಯುಶಿ; ಪುನೀತ್​ ಹೆಸರು ಬದಲಾವಣೆಗೆ ಕಾರಣವಾಗಿತ್ತು ಈ ವಿಚಾರ
ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Oct 31, 2021 | 8:29 PM

Share

ಪುನೀತ್​ ರಾಜ್​ಕುಮಾರ್​ ಮೂಲ ಹೆಸರು ಲೋಹಿತ್​ ಎಂದಾಗಿತ್ತು. ಇದನ್ನು ರಾಜ್​ಕುಮಾರ್​ ಅವರು ಪುನೀತ್​ ಎಂದು ಬದಲಾಯಿಸಿದ್ದರು. ಇದಕ್ಕೆ ಬಹಳ ಮುಖ್ಯ ಕಾರಣವೂ ಇತ್ತು ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ. ಇದನ್ನು ಕೇಳಿ ಸಾಕಷ್ಟು ಮಂದಿ ಅಚ್ಚರಿ ಹೊರ ಹಾಕಿದ್ದಾರೆ. ಲೋಹಿತಾಶ್ವ ಎಂದರೆ ಅಲ್ಪಾಯುಷಿ ಎಂಬರ್ಥ ಇದೆಯಂತೆ. ಈ ಕಾರಣಕ್ಕೆ ಡಾ. ರಾಜ್​ ಈ ಹೆಸರನ್ನು ಬದಲಿಸಿದ್ದರು.

ರಾಜ್​ಕುಮಾರ್​ ಅವರಿಗೆ ಮಗನಿಗೆ ಲೋಹಿತ್ ಎಂದು ಹೆಸರು ಇಡಬೇಕು ಅನಿಸಿದ್ದು ‘ಸತ್ಯ ಹರಿಶ್ಚಂದ್ರ’ ಸಿನಿಮಾದಿಂದ. ಸತ್ಯ ಹರಿಶ್ಚಂದ್ರನ ಪುತ್ರನ ಹೆಸರು ಲೋಹಿತಾಶ್ವ. ಈ ಹೆಸರು ರಾಜ್​ಕುಮಾರ್​ಗೆ ತುಂಬಾನೇ ಇಷ್ಟವಾಗಿತ್ತು. ಈ ಕಾರಣಕ್ಕೆ ಎರಡನೇ ಮಗನಿಗೆ ಲೋಹಿತ್ ಎಂದು ಹೆಸರು ಇಟ್ಟಿದ್ದರು ಅಣ್ಣಾವ್ರು. ಸತ್ಯ ಹರಿಶ್ಚಂದ್ರನ ಮಗ ಲೋಹಿತಾಶ್ವ ಸಣ್ಣ ವಯಸ್ಸಿನಲ್ಲೇ ಸಾಯುತ್ತಾನೆ. ಈ ಕಾರಣಕ್ಕೆ ರಾಜ್​ಗೆ ಹೆಸರು ಬದಲಿಸಲು ಸೂಚಿಸಿದ್ದರು.

ಡಾ. ರಾಜ್‌ಕುಮಾರ್ ಅವರ ಕುಟುಂಬಕ್ಕೆ ಬೇಕಾದ ಹಿರಿಯರೊಬ್ಬರು ಲೋಹಿತ್ ಎಂದು ಹೆಸರಿಟ್ಟ ಬಗ್ಗೆ ಪ್ರಶ್ನೆ ಮಾಡಿದ್ದರು. ಅಷ್ಟೇ ಅಲ್ಲ, ಲೋಹಿತ್​ ಅನ್ನೋದು ಅಲ್ಪಾಯುಷಿಗೆ ಇರುವಂತಹ ಹೆಸರು. ಹೀಗಾಗಿ  ಪುನೀತ್ ಎಂದು ಬದಲಿಸಲು ಸೂಚಿಸಿದ್ದರು. ಆಗ ಲೋಹಿತ್ ಅನ್ನೋ ಹೆಸರನ್ನು ಅಣ್ಣಾವ್ರು ಬದಲಿಸಿದ್ದರು. ಈ ಬಗ್ಗೆ ಡಾ. ರಾಜ್ ಕುಟುಂಬದ ಸಂಬಂಧಿ, ನಟ, ಶಾಸಕ ಕುಮಾರ್ ಬಂಗಾರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಬಾಲನಟ ಆಗಿದ್ದಾಗಿನಿಂದಲೂ ಪ್ರೇಕ್ಷಕರ ಮನ ಗೆದ್ದಿದ್ದರು. ಆ ದಿನಗಳಲ್ಲಿ ಅವರನ್ನು ಲೋಹಿತ್​ ಎಂದು ಕರೆಯಲಾಗುತ್ತಿತ್ತು. ಮನೆಯಲ್ಲಿ ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಿದ್ದರು. ಬಳಿಕ ಪುನೀತ್​ ರಾಜ್​ಕುಮಾರ್​ ಎಂಬ ಹೆಸರಿನಿಂದ ದೇಶಾದ್ಯಂತ ಖ್ಯಾತಿ ಗಳಿಸಿದರು.  ಹೆಸರನ್ನು ಬದಲಾವಣೆ ಮಾಡಿದ ಸಂದರ್ಭದಲ್ಲಿ ನೀಡಿದ ಜಾಹೀರಾತಿನ ಪ್ರತಿ ವೈರಲ್​ ಆಗುತ್ತಿದೆ.

‘ಡಾ. ರಾಜ್​ಕುಮಾರ್​ ಉರುಫ್​ ಎಸ್​.ಪಿ. ಮುತ್ತುರಾಜ್​ ಆದ ನಾನು ನನ್ನ ಮಗ ಮಾಸ್ಟರ್​ ಲೋಹಿತ್​ ಹೆಸರನ್ನು ಇಂದಿನಿಂದ  ಅಂದರೆ ದಿನಾಂಕ 16-3-1985ರಂದು ಮಾಸ್ಟರ್​ ಪುನೀತ್​ ಎಂಬುದಾಗಿ ಬದಲಾಯಿಸುತ್ತೇನೆ. ಈ ಹೆಸರು ಬದಲಾವಣೆ ಬಗ್ಗೆ ನೋಟರಿ ಎಸ್​.ಬಿ. ಚಂದ್ರಶೇಖರ್​ ಅವರ ಸಮಕ್ಷಮದಲ್ಲಿ ಪ್ರಮಾಣ ಪತ್ರ ಮಾಡಿಸಿರುತ್ತೇನೆ’ ಎಂದು ಜಾಹೀರಾತು ನೀಡಲಾಗಿತ್ತು.

ಇದನ್ನೂ ಓದಿ: ಪುನೀತ್​ ಸ್ಮರಣಾರ್ಥ ಸೋಮವಾರ ‘ರಾಜಕುಮಾರ’ ಸಿನಿಮಾ ಪ್ರದರ್ಶನ; ಅಭಿಮಾನಿಗಳಿಗೆ ಉಚಿತ ಪ್ರವೇಶ 

1985ರಲ್ಲಿ ಪುನೀತ್​​ ಹೆಸರು ಬದಲಾಯಿಸಿದ್ದಾಗ ನೀಡಿದ್ದ ಜಾಹೀರಾತು ವೈರಲ್​

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ರಾಜೀನಾಮೆ ನೆನೆದು ಎಂ.ಸಿ.ಸುಧಾಕರ್​ ಕಣ್ಣೀರು
ಸಿದ್ದರಾಮಯ್ಯ ರಾಜೀನಾಮೆ ನೆನೆದು ಎಂ.ಸಿ.ಸುಧಾಕರ್​ ಕಣ್ಣೀರು
ಸಿದ್ದರಾಮಯ್ಯ ರಾಜೀನಾಮೆ ಹಿಂದಿನ ಸತ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ರಾಜೀನಾಮೆ ಹಿಂದಿನ ಸತ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ
ಸಿಎಂ ರಾಜೀನಾಮೆ ಸುದ್ದಿ ಬೆನ್ನಲ್ಲೇ BJP ಸಂಪರ್ಕಿಸಿದ್ದ ಕೆಲ ಕಾಂಗ್ರೆಸಿಗರು!
ಸಿಎಂ ರಾಜೀನಾಮೆ ಸುದ್ದಿ ಬೆನ್ನಲ್ಲೇ BJP ಸಂಪರ್ಕಿಸಿದ್ದ ಕೆಲ ಕಾಂಗ್ರೆಸಿಗರು!
ಮಕ್ಕಳನ್ನು ಮಲಗಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದ ಕೆಲಸದಾಕೆ
ಮಕ್ಕಳನ್ನು ಮಲಗಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದ ಕೆಲಸದಾಕೆ
ಡಿಕೆಶಿ​​ ಕೈ ಬಿಡದ ಆಂದ್ಲೆ ಶ್ರೀ ಜಗದೀಶ್ವರಿ: ಸತ್ಯವಾಯ್ತು ದೇವಿಯ ಶುಭಸೂಚನೆ
ಡಿಕೆಶಿ​​ ಕೈ ಬಿಡದ ಆಂದ್ಲೆ ಶ್ರೀ ಜಗದೀಶ್ವರಿ: ಸತ್ಯವಾಯ್ತು ದೇವಿಯ ಶುಭಸೂಚನೆ
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುಹೂರ್ತ ಫಿಕ್ಸ್
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುಹೂರ್ತ ಫಿಕ್ಸ್
ತುತ್ತ ತುದಿಯಲ್ಲಿ ನಿಂತೇ ಬಿಡ್ತು ರೋಲರ್ ಕೋಸ್ಟರ್
ತುತ್ತ ತುದಿಯಲ್ಲಿ ನಿಂತೇ ಬಿಡ್ತು ರೋಲರ್ ಕೋಸ್ಟರ್
ಸತೀಶ್ ಜಾರಕಿಹೊಳಿಗೆ ಕೊನೆಗೂ ಬಂತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್!
ಸತೀಶ್ ಜಾರಕಿಹೊಳಿಗೆ ಕೊನೆಗೂ ಬಂತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್!
ಕಳ್ಳ ಅನ್ಕೊಂಡ್ರಾ, ಮೆಡಿಕಲ್ ಶಾಪ್ ಕ್ಲೋಸ್ ಆಗುವ ವೇಳೆ ನುಗ್ಗಿದ ವ್ಯಕ್ತಿ
ಕಳ್ಳ ಅನ್ಕೊಂಡ್ರಾ, ಮೆಡಿಕಲ್ ಶಾಪ್ ಕ್ಲೋಸ್ ಆಗುವ ವೇಳೆ ನುಗ್ಗಿದ ವ್ಯಕ್ತಿ
ಸಾಯುತ್ತಿದ್ದ ಲೈನ್‌ಮನ್‌ಗೆ ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್​​ ಸಿಬ್ಬಂದಿ
ಸಾಯುತ್ತಿದ್ದ ಲೈನ್‌ಮನ್‌ಗೆ ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್​​ ಸಿಬ್ಬಂದಿ