AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash19: ಯಶ್ ಜೊತೆಗಿನ ಸಿನಿಮಾ ಸೆಟ್ಟೇರದಿರಲು ಇದುವೇ ಕಾರಣ; ಸಂಪೂರ್ಣವಾಗಿ ವಿವರಿಸಿದ ನರ್ತನ್

ಯಶ್​​ಗೋಸ್ಕರ ನರ್ತನ್ ಕಥೆ ರೆಡಿ ಮಾಡಿಕೊಂಡಿದ್ದರು. ಈ ಕಥೆಯನ್ನು ಯಶ್ ಕೂಡ ಕೇಳಿದ್ದರು. ಆದರೂ ಸಿನಿಮಾ ಫೈನಲ್ ಆಗಲೇ ಇಲ್ಲ.

Yash19: ಯಶ್ ಜೊತೆಗಿನ ಸಿನಿಮಾ ಸೆಟ್ಟೇರದಿರಲು ಇದುವೇ ಕಾರಣ; ಸಂಪೂರ್ಣವಾಗಿ ವಿವರಿಸಿದ ನರ್ತನ್
ಯಶ್-ನರ್ತನ್
Follow us
ರಾಜೇಶ್ ದುಗ್ಗುಮನೆ
|

Updated on: May 26, 2023 | 11:49 AM

‘Yash19’ ಸಿನಿಮಾ ಸೆಟ್ಟೇರೋದು ಯಾವಾಗ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಈ ವಿಚಾರದಲ್ಲಿ ಉತ್ತರ ಸಿಗೋಕೆ ಇನ್ನೂ ಕೆಲವು ತಿಂಗಳು ಅಭಿಮಾನಿಗಳು ಕಾಯಲೇಬೇಕು ಎನ್ನಲಾಗುತ್ತಿದೆ. ಈ ಮೊದಲು ನರ್ತನ್ (Narthan) ಹಾಗೂ ಯಶ್ (Yash) ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಘೋಷಣೆ ಕೂಡ ಆಗುತ್ತದೆ ಎನ್ನಲಾಯಿತು. ಆದರೆ, ಈ ಸಿನಿಮಾ ಸೆಟ್ಟೇರಲೇ ಇಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ನರ್ತನ್ ಅವರು ವಿವರಿಸಿದ್ದಾರೆ. ಅವರು ಅಸಲಿ ಕಾರಣ ನೀಡಿದ್ದಾರೆ.

‘ಮಫ್ತಿ’ ಚಿತ್ರದಿಂದ ಫೇಮಸ್ ಆದವರು ನರ್ತನ್. ಮೊದಲ ಸಿನಿಮಾದಲ್ಲೇ ಅವರು ಭರಪೂರ ಗೆಲುವು ಕಂಡರು. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿತು. ಶಿವರಾಜ್​ಕುಮಾರ್ ಹಾಗೂ ಶ್ರೀಮುರಳಿ ಕಾಂಬಿನೇಷನ್ ಕೆಲಸ ಮಾಡಿತ್ತು. ಈ ಸಿನಿಮಾ ಬಳಿಕ ನರ್ತನ್ ಯಾವುದೇ ಹೊಸ ಸಿನಿಮಾ ಘೋಷಿಸಿರಲಿಲ್ಲ. ಈಗ ಅವರು ‘ಭೈರತಿ ರಣಗಲ್’ ಚಿತ್ರ ಅನೌನ್ಸ್ ಮಾಡಿದ್ದಾರೆ. ಈ ಚಿತ್ರದ ಮುಹೂರ್ತದ ವೇಳೆ ಅವರು ಯಶ್ 19 ಬಗ್ಗೆಯೂ ಮಾತನಾಡಿದ್ದಾರೆ.

ಯಶ್​​ಗೋಸ್ಕರ ನರ್ತನ್ ಕಥೆ ರೆಡಿ ಮಾಡಿಕೊಂಡಿದ್ದರು. ಈ ಕಥೆಯನ್ನು ಯಶ್ ಕೂಡ ಕೇಳಿದ್ದರು. ಆದರೆ, ಈ ಕಥೆಯ ಎಳೆ ಈಗಾಗಲೇ ಬಂದು ಹೋದ ಸಿನಿಮಾದ ಕಥೆಗೆ ಮ್ಯಾಚ್ ಆಗುತ್ತಿತ್ತಂತೆ. ಹೀಗಾಗಿ, ಸಿನಿಮಾನ ಅರ್ಧಕ್ಕೆ ಕೈಬಿಡಲಾಗಿದೆ. ಯಶ್ ಹಾಗೂ ನರ್ತನ್ ನಡುವೆ ಮೊದಲಿನ ಬಾಂಧವ್ಯ ಮುಂದುವರಿದಿದೆ. ಮುಂದಿನ ವರ್ಷಗಳಲ್ಲಿ ಇಬ್ಬರೂ ಸಿನಿಮಾ ಮಾಡಲಿ ಅನ್ನೋದು ಫ್ಯಾನ್ಸ್ ಕೋರಿಕೆ.

ಇದನ್ನೂ ಓದಿ: ರಾಜಕಾರಣಿಗಳು ಗೆದ್ದ ಬಳಿಕ ಏನು ಮಾಡಬೇಕು ಎಂಬುದನ್ನು ಹೇಳಿದ ಯಶ್ 

‘ಭೈರತಿ ರಣಗಲ್’ ಸಿನಿಮಾಗೆ ಶಿವಣ್ಣ ಹೀರೋ. ಗೀತಾ ಆರ್ಟ್ಸ್​ ನಿರ್ಮಾಣ ಸಂಸ್ಥೆ ಮೂಲಕ ಈ ಚಿತ್ರ ಮೂಡಿಬರುತ್ತಿದೆ. ‘ವೇದ’ ಸಿನಿಮಾ ಬಳಿಕ ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದು ಅನ್ನೋದು ವಿಶೇಷ.

ಇದನ್ನೂ ಓದಿ: ’ಯಶ್ 19’ ಚಿತ್ರದ ಬಗ್ಗೆ ಟಿವಿ9ಗೆ ಮಾಹಿತಿ ನೀಡಿದ ನರ್ತನ್​; ನಿರ್ದೇಶಕ ಹೇಳಿದ್ದೇನು?

‘ಕೆಜಿಎಫ್ 2’ ಸಿನಿಮಾ 2022ರ ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಯಶ್ ಅವರು ದೇಶ-ವಿದೇಶ ಸುತ್ತಾಡಿಕೊಂಡಿದ್ದಾರೆ. ಅವರ ಹೊಸ ಸಿನಿಮಾ ಆದಷ್ಟು ಬೇಗ ಘೋಷಣೆ ಆಗಲಿ ಅನ್ನೋದು ಫ್ಯಾನ್ಸ್ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ