AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash19: ಯಶ್ ಜೊತೆಗಿನ ಸಿನಿಮಾ ಸೆಟ್ಟೇರದಿರಲು ಇದುವೇ ಕಾರಣ; ಸಂಪೂರ್ಣವಾಗಿ ವಿವರಿಸಿದ ನರ್ತನ್

ಯಶ್​​ಗೋಸ್ಕರ ನರ್ತನ್ ಕಥೆ ರೆಡಿ ಮಾಡಿಕೊಂಡಿದ್ದರು. ಈ ಕಥೆಯನ್ನು ಯಶ್ ಕೂಡ ಕೇಳಿದ್ದರು. ಆದರೂ ಸಿನಿಮಾ ಫೈನಲ್ ಆಗಲೇ ಇಲ್ಲ.

Yash19: ಯಶ್ ಜೊತೆಗಿನ ಸಿನಿಮಾ ಸೆಟ್ಟೇರದಿರಲು ಇದುವೇ ಕಾರಣ; ಸಂಪೂರ್ಣವಾಗಿ ವಿವರಿಸಿದ ನರ್ತನ್
ಯಶ್-ನರ್ತನ್
ರಾಜೇಶ್ ದುಗ್ಗುಮನೆ
|

Updated on: May 26, 2023 | 11:49 AM

Share

‘Yash19’ ಸಿನಿಮಾ ಸೆಟ್ಟೇರೋದು ಯಾವಾಗ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಈ ವಿಚಾರದಲ್ಲಿ ಉತ್ತರ ಸಿಗೋಕೆ ಇನ್ನೂ ಕೆಲವು ತಿಂಗಳು ಅಭಿಮಾನಿಗಳು ಕಾಯಲೇಬೇಕು ಎನ್ನಲಾಗುತ್ತಿದೆ. ಈ ಮೊದಲು ನರ್ತನ್ (Narthan) ಹಾಗೂ ಯಶ್ (Yash) ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಘೋಷಣೆ ಕೂಡ ಆಗುತ್ತದೆ ಎನ್ನಲಾಯಿತು. ಆದರೆ, ಈ ಸಿನಿಮಾ ಸೆಟ್ಟೇರಲೇ ಇಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ನರ್ತನ್ ಅವರು ವಿವರಿಸಿದ್ದಾರೆ. ಅವರು ಅಸಲಿ ಕಾರಣ ನೀಡಿದ್ದಾರೆ.

‘ಮಫ್ತಿ’ ಚಿತ್ರದಿಂದ ಫೇಮಸ್ ಆದವರು ನರ್ತನ್. ಮೊದಲ ಸಿನಿಮಾದಲ್ಲೇ ಅವರು ಭರಪೂರ ಗೆಲುವು ಕಂಡರು. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿತು. ಶಿವರಾಜ್​ಕುಮಾರ್ ಹಾಗೂ ಶ್ರೀಮುರಳಿ ಕಾಂಬಿನೇಷನ್ ಕೆಲಸ ಮಾಡಿತ್ತು. ಈ ಸಿನಿಮಾ ಬಳಿಕ ನರ್ತನ್ ಯಾವುದೇ ಹೊಸ ಸಿನಿಮಾ ಘೋಷಿಸಿರಲಿಲ್ಲ. ಈಗ ಅವರು ‘ಭೈರತಿ ರಣಗಲ್’ ಚಿತ್ರ ಅನೌನ್ಸ್ ಮಾಡಿದ್ದಾರೆ. ಈ ಚಿತ್ರದ ಮುಹೂರ್ತದ ವೇಳೆ ಅವರು ಯಶ್ 19 ಬಗ್ಗೆಯೂ ಮಾತನಾಡಿದ್ದಾರೆ.

ಯಶ್​​ಗೋಸ್ಕರ ನರ್ತನ್ ಕಥೆ ರೆಡಿ ಮಾಡಿಕೊಂಡಿದ್ದರು. ಈ ಕಥೆಯನ್ನು ಯಶ್ ಕೂಡ ಕೇಳಿದ್ದರು. ಆದರೆ, ಈ ಕಥೆಯ ಎಳೆ ಈಗಾಗಲೇ ಬಂದು ಹೋದ ಸಿನಿಮಾದ ಕಥೆಗೆ ಮ್ಯಾಚ್ ಆಗುತ್ತಿತ್ತಂತೆ. ಹೀಗಾಗಿ, ಸಿನಿಮಾನ ಅರ್ಧಕ್ಕೆ ಕೈಬಿಡಲಾಗಿದೆ. ಯಶ್ ಹಾಗೂ ನರ್ತನ್ ನಡುವೆ ಮೊದಲಿನ ಬಾಂಧವ್ಯ ಮುಂದುವರಿದಿದೆ. ಮುಂದಿನ ವರ್ಷಗಳಲ್ಲಿ ಇಬ್ಬರೂ ಸಿನಿಮಾ ಮಾಡಲಿ ಅನ್ನೋದು ಫ್ಯಾನ್ಸ್ ಕೋರಿಕೆ.

ಇದನ್ನೂ ಓದಿ: ರಾಜಕಾರಣಿಗಳು ಗೆದ್ದ ಬಳಿಕ ಏನು ಮಾಡಬೇಕು ಎಂಬುದನ್ನು ಹೇಳಿದ ಯಶ್ 

‘ಭೈರತಿ ರಣಗಲ್’ ಸಿನಿಮಾಗೆ ಶಿವಣ್ಣ ಹೀರೋ. ಗೀತಾ ಆರ್ಟ್ಸ್​ ನಿರ್ಮಾಣ ಸಂಸ್ಥೆ ಮೂಲಕ ಈ ಚಿತ್ರ ಮೂಡಿಬರುತ್ತಿದೆ. ‘ವೇದ’ ಸಿನಿಮಾ ಬಳಿಕ ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದು ಅನ್ನೋದು ವಿಶೇಷ.

ಇದನ್ನೂ ಓದಿ: ’ಯಶ್ 19’ ಚಿತ್ರದ ಬಗ್ಗೆ ಟಿವಿ9ಗೆ ಮಾಹಿತಿ ನೀಡಿದ ನರ್ತನ್​; ನಿರ್ದೇಶಕ ಹೇಳಿದ್ದೇನು?

‘ಕೆಜಿಎಫ್ 2’ ಸಿನಿಮಾ 2022ರ ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಯಶ್ ಅವರು ದೇಶ-ವಿದೇಶ ಸುತ್ತಾಡಿಕೊಂಡಿದ್ದಾರೆ. ಅವರ ಹೊಸ ಸಿನಿಮಾ ಆದಷ್ಟು ಬೇಗ ಘೋಷಣೆ ಆಗಲಿ ಅನ್ನೋದು ಫ್ಯಾನ್ಸ್ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ