AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಬಾಲಿವುಡ್​ ಸ್ಟಾರ್​ ನಟನ ಸಿನಿಮಾಗೆ ನೋ ಎಂದ ರಶ್ಮಿಕಾ; ಸ್ಪಷ್ಟನೆ ನೀಡಿದ ನಟಿ

ಸಿದ್ಧಾರ್ಥ್​ ಮಲ್ಹೋತ್ರ ನಟನೆಯ ಮಿಷನ್​ ಮಜ್ನು ಹಾಗೂ ಬಿಗ್​​ಬಿ ನಟನೆಯ ಗುಡ್​ಬೈ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರಿಗೆ ಈ ಆಫರ್​ ಬಂದಿದೆ. ಆದರೆ, ಇದನ್ನು ಅವರು ರಿಜೆಕ್ಟ್​ ಮಾಡಿದ್ದಾರೆ.

Rashmika Mandanna: ಬಾಲಿವುಡ್​ ಸ್ಟಾರ್​ ನಟನ ಸಿನಿಮಾಗೆ ನೋ ಎಂದ ರಶ್ಮಿಕಾ; ಸ್ಪಷ್ಟನೆ ನೀಡಿದ ನಟಿ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
| Edited By: |

Updated on: May 02, 2021 | 10:27 AM

Share

ರಶ್ಮಿಕಾ ಮಂದಣ್ಣ ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಸಿನಿಮಾ ಆಫರ್​ಗಳನ್ನು ಗಳಿಸಿಕೊಳ್ಳುತ್ತಿದ್ದಾರೆ. ತೆಲುಗಿನಲ್ಲಿ ಸ್ಟಾರ್​ ನಟರ ಜತೆ ನಟಿಸುತ್ತಿರುವುದರ ಜತೆಗೆ ಹಿಂದಿಯಲ್ಲಿ ಎರಡು ದೊಡ್ಡ ಪ್ರಾಜೆಕ್ಟ್​ಗಳಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗಲೇ ನಟಿ ರಶ್ಮಿಕಾ ಸ್ಟಾರ್​ ನಟನ ಸಿನಿಮಾಗೆ ನೋ ಎಂದಿದ್ದಾರಂತೆ. ಇದಕ್ಕೆ ಅವರು ಸ್ಪಷ್ಟನೆ ಕೂಡ ನೀಡಿದ್ದಾರೆ.

ಕಬೀರ್​ ಸಿಂಗ್​ ಹಿಟ್​ ಆದ ನಂತರದಲ್ಲಿ ಶಾಹಿದ್​ ಕಪೂರ್​ ಜೆರ್ಸಿ ರಿಮೇಕ್​ನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಕ್ರಿಕೇಟರ್​ ಓರ್ವನ ಕಥೆಯನ್ನು ಹೇಳುತ್ತಿದೆ. ತೆಲುಗಿನಲ್ಲಿ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ನಾನಿ ಹಾಗೂ ಶ್ರದ್ಧಾ ಶ್ರೀನಾಥ್​ ತೆಲುಗಿನಲ್ಲಿ ಬಣ್ಣ ಹಚ್ಚಿದ್ದರು. ಹಿಂದಿ ರಿಮೇಕ್​ನಲ್ಲಿ  ಶಾಹಿದ್​ ಕ್ರಿಕೆಟರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ನಟಿಸೋಕೆ ರಶ್ಮಿಕಾಗೆ ಆಫರ್​ ನೀಡಲಾಗಿತ್ತಂತೆ.

ಸಿದ್ಧಾರ್ಥ್​ ಮಲ್ಹೋತ್ರ ನಟನೆಯ ಮಿಷನ್​ ಮಜ್ನು ಹಾಗೂ ಬಿಗ್​​ಬಿ ನಟನೆಯ ಗುಡ್​ಬೈ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರಿಗೆ ಈ ಆಫರ್​ ಬಂದಿದೆ. ಆದರೆ, ಇದನ್ನು ಅವರು ರಿಜೆಕ್ಟ್​ ಮಾಡಿದ್ದಾರೆ.

ಹಾಗಾದರೆ, ರಶ್ಮಿಕಾಗೆ ಡೇಟ್ಸ್​ ಸಮಸ್ಯೆ ಇತ್ತಾ? ಇಲ್ಲ. ಶ್ರದ್ಧಾ ಶ್ರೀನಾಥ್​ ಈ ಪಾತ್ರಕ್ಕೆ ನೀಡಿದಷ್ಟು ನ್ಯಾಯವನ್ನು ತಾವು ನೀಡಲು ಸಾಧ್ಯವಾಗದೇ ಇರಬಹುದು ಎಂದು ರಶ್ಮಿಕಾ ಅಭಿಪ್ರಾಯಪಟ್ಟಿದ್ದಾರೆ. ಈ ಕಾರಣಕ್ಕೆ ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ.

ಜೆರ್ಸಿ ಸಿನಿಮಾವನ್ನು ಗೌತಮ್​ ಹಿಂದಿಗೆ ರಿಮೇಕ್​ ಮಾಡುತ್ತಿದ್ದಾರೆ. ಪಂಕಜ್​ ಕಪೂರ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೃನಾಲ್​ ಠಾಕೂರ್​ ಸಿನಿಮಾಕ್ಕೆ ನಾಯಕಿ. ಟಾಲಿವುಡ್​ನಲ್ಲಿ ತೆರೆಕಂಡ ಅರ್ಜುನ್​ ರೆಡ್ಡಿ ಸಿನಿಮಾ ಬಾಲಿವುಡ್​ನಲ್ಲಿ ಕಬೀರ್​ ಸಿಂಗ್​ ಆಗಿ ತೆರೆಗೆ ಬಂದಿತ್ತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಹೀಗಾಗಿ ತೆಲುಗಿನ ಜೆರ್ಸಿ ಸಿನಿಮಾವನ್ನು ಬಾಲಿವುಡ್​ಗೆ ರಿಮೇಕ್​ ಮಾಡಲಾಗುತ್ತಿದೆ. ಶಶಾಂಕ್​ ಖೈತಾನ್​ ಮುಂದಿನ ಚಿತ್ರ ಯೋಧ ಸಿನಿಮಾದಲ್ಲಿ ಶಾಹಿದ್​ ನಟಿಸಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಅವರು ಸಿನಿಮಾದಿಂದ ಹೊರ ನಡೆದಿದ್ದರು.

ಇದನ್ನೂ ಓದಿ: Rashmika Mandanna: ‘ಈ ಸಲ ಕಪ್​ ನಮ್ದೇ’ ಎಂದ ರಶ್ಮಿಕಾ ಮಂದಣ್ಣಗೆ ಆರ್​ಸಿಬಿ ಫ್ಯಾನ್ಸ್​ ಫಿದಾ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು