AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಬಾಲಿವುಡ್​ ಸ್ಟಾರ್​ ನಟನ ಸಿನಿಮಾಗೆ ನೋ ಎಂದ ರಶ್ಮಿಕಾ; ಸ್ಪಷ್ಟನೆ ನೀಡಿದ ನಟಿ

ಸಿದ್ಧಾರ್ಥ್​ ಮಲ್ಹೋತ್ರ ನಟನೆಯ ಮಿಷನ್​ ಮಜ್ನು ಹಾಗೂ ಬಿಗ್​​ಬಿ ನಟನೆಯ ಗುಡ್​ಬೈ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರಿಗೆ ಈ ಆಫರ್​ ಬಂದಿದೆ. ಆದರೆ, ಇದನ್ನು ಅವರು ರಿಜೆಕ್ಟ್​ ಮಾಡಿದ್ದಾರೆ.

Rashmika Mandanna: ಬಾಲಿವುಡ್​ ಸ್ಟಾರ್​ ನಟನ ಸಿನಿಮಾಗೆ ನೋ ಎಂದ ರಶ್ಮಿಕಾ; ಸ್ಪಷ್ಟನೆ ನೀಡಿದ ನಟಿ
ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: May 02, 2021 | 10:27 AM

Share

ರಶ್ಮಿಕಾ ಮಂದಣ್ಣ ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಸಿನಿಮಾ ಆಫರ್​ಗಳನ್ನು ಗಳಿಸಿಕೊಳ್ಳುತ್ತಿದ್ದಾರೆ. ತೆಲುಗಿನಲ್ಲಿ ಸ್ಟಾರ್​ ನಟರ ಜತೆ ನಟಿಸುತ್ತಿರುವುದರ ಜತೆಗೆ ಹಿಂದಿಯಲ್ಲಿ ಎರಡು ದೊಡ್ಡ ಪ್ರಾಜೆಕ್ಟ್​ಗಳಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗಲೇ ನಟಿ ರಶ್ಮಿಕಾ ಸ್ಟಾರ್​ ನಟನ ಸಿನಿಮಾಗೆ ನೋ ಎಂದಿದ್ದಾರಂತೆ. ಇದಕ್ಕೆ ಅವರು ಸ್ಪಷ್ಟನೆ ಕೂಡ ನೀಡಿದ್ದಾರೆ.

ಕಬೀರ್​ ಸಿಂಗ್​ ಹಿಟ್​ ಆದ ನಂತರದಲ್ಲಿ ಶಾಹಿದ್​ ಕಪೂರ್​ ಜೆರ್ಸಿ ರಿಮೇಕ್​ನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಕ್ರಿಕೇಟರ್​ ಓರ್ವನ ಕಥೆಯನ್ನು ಹೇಳುತ್ತಿದೆ. ತೆಲುಗಿನಲ್ಲಿ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ನಾನಿ ಹಾಗೂ ಶ್ರದ್ಧಾ ಶ್ರೀನಾಥ್​ ತೆಲುಗಿನಲ್ಲಿ ಬಣ್ಣ ಹಚ್ಚಿದ್ದರು. ಹಿಂದಿ ರಿಮೇಕ್​ನಲ್ಲಿ  ಶಾಹಿದ್​ ಕ್ರಿಕೆಟರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ನಟಿಸೋಕೆ ರಶ್ಮಿಕಾಗೆ ಆಫರ್​ ನೀಡಲಾಗಿತ್ತಂತೆ.

ಸಿದ್ಧಾರ್ಥ್​ ಮಲ್ಹೋತ್ರ ನಟನೆಯ ಮಿಷನ್​ ಮಜ್ನು ಹಾಗೂ ಬಿಗ್​​ಬಿ ನಟನೆಯ ಗುಡ್​ಬೈ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರಿಗೆ ಈ ಆಫರ್​ ಬಂದಿದೆ. ಆದರೆ, ಇದನ್ನು ಅವರು ರಿಜೆಕ್ಟ್​ ಮಾಡಿದ್ದಾರೆ.

ಹಾಗಾದರೆ, ರಶ್ಮಿಕಾಗೆ ಡೇಟ್ಸ್​ ಸಮಸ್ಯೆ ಇತ್ತಾ? ಇಲ್ಲ. ಶ್ರದ್ಧಾ ಶ್ರೀನಾಥ್​ ಈ ಪಾತ್ರಕ್ಕೆ ನೀಡಿದಷ್ಟು ನ್ಯಾಯವನ್ನು ತಾವು ನೀಡಲು ಸಾಧ್ಯವಾಗದೇ ಇರಬಹುದು ಎಂದು ರಶ್ಮಿಕಾ ಅಭಿಪ್ರಾಯಪಟ್ಟಿದ್ದಾರೆ. ಈ ಕಾರಣಕ್ಕೆ ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ.

ಜೆರ್ಸಿ ಸಿನಿಮಾವನ್ನು ಗೌತಮ್​ ಹಿಂದಿಗೆ ರಿಮೇಕ್​ ಮಾಡುತ್ತಿದ್ದಾರೆ. ಪಂಕಜ್​ ಕಪೂರ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೃನಾಲ್​ ಠಾಕೂರ್​ ಸಿನಿಮಾಕ್ಕೆ ನಾಯಕಿ. ಟಾಲಿವುಡ್​ನಲ್ಲಿ ತೆರೆಕಂಡ ಅರ್ಜುನ್​ ರೆಡ್ಡಿ ಸಿನಿಮಾ ಬಾಲಿವುಡ್​ನಲ್ಲಿ ಕಬೀರ್​ ಸಿಂಗ್​ ಆಗಿ ತೆರೆಗೆ ಬಂದಿತ್ತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಹೀಗಾಗಿ ತೆಲುಗಿನ ಜೆರ್ಸಿ ಸಿನಿಮಾವನ್ನು ಬಾಲಿವುಡ್​ಗೆ ರಿಮೇಕ್​ ಮಾಡಲಾಗುತ್ತಿದೆ. ಶಶಾಂಕ್​ ಖೈತಾನ್​ ಮುಂದಿನ ಚಿತ್ರ ಯೋಧ ಸಿನಿಮಾದಲ್ಲಿ ಶಾಹಿದ್​ ನಟಿಸಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಅವರು ಸಿನಿಮಾದಿಂದ ಹೊರ ನಡೆದಿದ್ದರು.

ಇದನ್ನೂ ಓದಿ: Rashmika Mandanna: ‘ಈ ಸಲ ಕಪ್​ ನಮ್ದೇ’ ಎಂದ ರಶ್ಮಿಕಾ ಮಂದಣ್ಣಗೆ ಆರ್​ಸಿಬಿ ಫ್ಯಾನ್ಸ್​ ಫಿದಾ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ