AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಬರ್ತ್​ಡೇ ಏಕೆ ಆಚರಿಸಿಕೊಳ್ಳಲಿಲ್ಲ; ಕೊನೆಗೂ ಮೌನ ಮುರಿದ ರಾಕಿಂಗ್ ಸ್ಟಾರ್

ಕೆಲ ಫ್ಯಾನ್ಸ್ ಯಶ್​ ಹುಟ್ಟುಹಬ್ಬ ಆಚರಿಸಲು ಮುಂದಾಗಿದ್ದರು. ಈ ದಿನ ಅಭಿಮಾನಿಗಳ ಪಾಲಿಗೆ ಹಾಗೂ ಯಶ್ ಪಾಲಿಗೆ ಕರಾಳ ದಿನ ಆಯಿತು. ಮೂವರು ಯಶ್ ಫ್ಯಾನ್ಸ್ ಮೃತಪಟ್ಟರು. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದ ಯಶ್ ಅವರು ಬರ್ತ್​ಡೇ ಆಚರಿಸಿಕೊಳ್ಳದಿರಲು ಕಾರಣ ಏನು ಎಂಬ ಬಗ್ಗೆ ಮಾತನಾಡಿದ್ದಾರೆ.

ಯಶ್ ಬರ್ತ್​ಡೇ ಏಕೆ ಆಚರಿಸಿಕೊಳ್ಳಲಿಲ್ಲ; ಕೊನೆಗೂ ಮೌನ ಮುರಿದ ರಾಕಿಂಗ್ ಸ್ಟಾರ್
ಯಶ್
ರಾಜೇಶ್ ದುಗ್ಗುಮನೆ
|

Updated on: Jan 09, 2024 | 7:09 AM

Share

ಸೆಲೆಬ್ರಿಟಿಗಳ ಬರ್ತ್​ಡೇ ಬಂತು ಎಂದರೆ ಅಭಿಮಾನಿಗಳಿಗೆ ಹಬ್ಬ. ಅದರಲ್ಲಂತೂ ನೆಚ್ಚಿನ ನಟ/ನಟಿ ತಮ್ಮ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡರೆ ಅಭಿಮಾನಿಗಳ ಖುಷಿ ದ್ವಿಗುಣವಾಗುತ್ತದೆ. ಜನವರಿ 8 ಯಶ್ (Yash) ಅವರ ಬರ್ತ್​ಡೇ. ಈ ವಿಶೇಷ ದಿನವನ್ನು ಯಶ್ ಅಭಿಮಾನಿಗಳ ಜೊತೆ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದರು. ಇದಕ್ಕೆ ಪ್ರಮುಖ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಯಶ್ ಬರ್ತ್​ಡೇ ಬ್ಯಾನರ್ ಹಾಕಲು ಹೋದ ಗದಗ ಜಿಲ್ಲೆಯ ಸೊರಣಗಿ ಗ್ರಾಮದ ಹನುಮಂತ ಹರಿಜನ, ಮುರಳಿ ನಡವಿನಮನಿ ಮತ್ತು ನವೀನ್ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೋದ ಯಶ್ ಈ ಬಗ್ಗೆ ಮಾತನಾಡಿದ್ದಾರೆ.

ಇತ್ತೀಚೆಗೆ ಟ್ವೀಟ್ ಮಾಡಿದ್ದ ಯಶ್ ಅವರು ‘ಸಿನಿಮಾ ಕೆಲಸಗಳು ಇವೆ. ಅನಿವಾರ್ಯವಾಗಿ ಪ್ರಯಾಣ ಮಾಡಬೇಕಿರುವುದರಿಂದ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ’ ಎಂದು ಹೇಳಿದ್ದರು. ಆದರೂ ಕೆಲ ಫ್ಯಾನ್ಸ್ ಯಶ್​ ಹುಟ್ಟುಹಬ್ಬ ಆಚರಿಸಲು ಮುಂದಾಗಿದ್ದರು. ಈ ದಿನ ಅಭಿಮಾನಿಗಳ ಪಾಲಿಗೆ ಹಾಗೂ ಯಶ್ ಪಾಲಿಗೆ ಕರಾಳ ದಿನ ಆಯಿತು. ಮೂವರು ಯಶ್ ಫ್ಯಾನ್ಸ್ ಮೃತಪಟ್ಟರು. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದ ಯಶ್ ಅವರು ಬರ್ತ್​ಡೇ ಆಚರಿಸಿಕೊಳ್ಳದಿರಲು ಕಾರಣ ಏನು ಎಂಬ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ‘ಅಷ್ಟು ಇಷ್ಟು ಅಂತ ಹೇಳಿಲ್ಲ’: ಯಶ್​ ಕೊಟ್ಟ ಭರವಸೆ ಬಗ್ಗೆ ಮೃತರ ಕುಟುಂಬದವರ ಮಾತು

‘ಎರಡು ವಾರದ ಹಿಂದೆ ಕೊವಿಡ್​ ಎಂದು ಶುರು ಮಾಡಿದರು. ನಮ್ಮ ಬರ್ತ್​ಡೇಯಿಂದ ಯಾರಿಗೂ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಾನು ಈ ವರ್ಷ ಎಲ್ಲರ ಜೊತೆ ಹುಟ್ಟುಹಬ್ಬ ಆಚರಣೆ ಬೇಡ ಎಂದು ನಿರ್ಧರಿಸಿದ್ದೆ’ ಎಂದಿದ್ದಾರೆ ಯಶ್. ರಾಕಿಂಗ್ ಸ್ಟಾರ್ ಬರ್ತ್​ಡೇ ಆಚರಿಸಿಕೊಳ್ಳದೇ ಇರಲು ಒಂದು ಮುಖ್ಯ ಕಾರಣ ಇತ್ತು. ಆದರೆ, ಯಾರೂ ಊಹಿಸದ ಘಟನೆ ನಡೆದಿದ್ದರಿಂದ ಯಶ್ ಸಾಕಷ್ಟು ನೊಂದುಕೊಂಡಿದ್ದಾರೆ.

ಯಾವುದೇ ಸೆಲೆಬ್ರಿಟಿ ಅಭಿಮಾನಿಗಳ ಜೊತೆ ಬರ್ತ್​ಡೇ ಆಚರಿಸಿಕೊಳ್ಳುವುದಿಲ್ಲ ಎಂದರೆ ಅಭಿಮಾನಿಗಳಿಗೆ ಬೇಸರ ಆಗುತ್ತದೆ. ಈ ಬಾರಿ ಯಶ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದಾಗಲೂ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದರು. ಈಗ ನಡೆದಿರುವ ಅವಘಡದಿಂದ ಯಶ್ ಅವರಿಗೆ ಹಾಗೂ ಅಭಿಮಾನಿಗಳಲ್ಲಿ ದುಃಖ ಮಡುಗಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು