ಯಶ್ ಬರ್ತ್​ಡೇ ಏಕೆ ಆಚರಿಸಿಕೊಳ್ಳಲಿಲ್ಲ; ಕೊನೆಗೂ ಮೌನ ಮುರಿದ ರಾಕಿಂಗ್ ಸ್ಟಾರ್

ಕೆಲ ಫ್ಯಾನ್ಸ್ ಯಶ್​ ಹುಟ್ಟುಹಬ್ಬ ಆಚರಿಸಲು ಮುಂದಾಗಿದ್ದರು. ಈ ದಿನ ಅಭಿಮಾನಿಗಳ ಪಾಲಿಗೆ ಹಾಗೂ ಯಶ್ ಪಾಲಿಗೆ ಕರಾಳ ದಿನ ಆಯಿತು. ಮೂವರು ಯಶ್ ಫ್ಯಾನ್ಸ್ ಮೃತಪಟ್ಟರು. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದ ಯಶ್ ಅವರು ಬರ್ತ್​ಡೇ ಆಚರಿಸಿಕೊಳ್ಳದಿರಲು ಕಾರಣ ಏನು ಎಂಬ ಬಗ್ಗೆ ಮಾತನಾಡಿದ್ದಾರೆ.

ಯಶ್ ಬರ್ತ್​ಡೇ ಏಕೆ ಆಚರಿಸಿಕೊಳ್ಳಲಿಲ್ಲ; ಕೊನೆಗೂ ಮೌನ ಮುರಿದ ರಾಕಿಂಗ್ ಸ್ಟಾರ್
ಯಶ್
Follow us
|

Updated on: Jan 09, 2024 | 7:09 AM

ಸೆಲೆಬ್ರಿಟಿಗಳ ಬರ್ತ್​ಡೇ ಬಂತು ಎಂದರೆ ಅಭಿಮಾನಿಗಳಿಗೆ ಹಬ್ಬ. ಅದರಲ್ಲಂತೂ ನೆಚ್ಚಿನ ನಟ/ನಟಿ ತಮ್ಮ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡರೆ ಅಭಿಮಾನಿಗಳ ಖುಷಿ ದ್ವಿಗುಣವಾಗುತ್ತದೆ. ಜನವರಿ 8 ಯಶ್ (Yash) ಅವರ ಬರ್ತ್​ಡೇ. ಈ ವಿಶೇಷ ದಿನವನ್ನು ಯಶ್ ಅಭಿಮಾನಿಗಳ ಜೊತೆ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದರು. ಇದಕ್ಕೆ ಪ್ರಮುಖ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಯಶ್ ಬರ್ತ್​ಡೇ ಬ್ಯಾನರ್ ಹಾಕಲು ಹೋದ ಗದಗ ಜಿಲ್ಲೆಯ ಸೊರಣಗಿ ಗ್ರಾಮದ ಹನುಮಂತ ಹರಿಜನ, ಮುರಳಿ ನಡವಿನಮನಿ ಮತ್ತು ನವೀನ್ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೋದ ಯಶ್ ಈ ಬಗ್ಗೆ ಮಾತನಾಡಿದ್ದಾರೆ.

ಇತ್ತೀಚೆಗೆ ಟ್ವೀಟ್ ಮಾಡಿದ್ದ ಯಶ್ ಅವರು ‘ಸಿನಿಮಾ ಕೆಲಸಗಳು ಇವೆ. ಅನಿವಾರ್ಯವಾಗಿ ಪ್ರಯಾಣ ಮಾಡಬೇಕಿರುವುದರಿಂದ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ’ ಎಂದು ಹೇಳಿದ್ದರು. ಆದರೂ ಕೆಲ ಫ್ಯಾನ್ಸ್ ಯಶ್​ ಹುಟ್ಟುಹಬ್ಬ ಆಚರಿಸಲು ಮುಂದಾಗಿದ್ದರು. ಈ ದಿನ ಅಭಿಮಾನಿಗಳ ಪಾಲಿಗೆ ಹಾಗೂ ಯಶ್ ಪಾಲಿಗೆ ಕರಾಳ ದಿನ ಆಯಿತು. ಮೂವರು ಯಶ್ ಫ್ಯಾನ್ಸ್ ಮೃತಪಟ್ಟರು. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದ ಯಶ್ ಅವರು ಬರ್ತ್​ಡೇ ಆಚರಿಸಿಕೊಳ್ಳದಿರಲು ಕಾರಣ ಏನು ಎಂಬ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ‘ಅಷ್ಟು ಇಷ್ಟು ಅಂತ ಹೇಳಿಲ್ಲ’: ಯಶ್​ ಕೊಟ್ಟ ಭರವಸೆ ಬಗ್ಗೆ ಮೃತರ ಕುಟುಂಬದವರ ಮಾತು

‘ಎರಡು ವಾರದ ಹಿಂದೆ ಕೊವಿಡ್​ ಎಂದು ಶುರು ಮಾಡಿದರು. ನಮ್ಮ ಬರ್ತ್​ಡೇಯಿಂದ ಯಾರಿಗೂ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಾನು ಈ ವರ್ಷ ಎಲ್ಲರ ಜೊತೆ ಹುಟ್ಟುಹಬ್ಬ ಆಚರಣೆ ಬೇಡ ಎಂದು ನಿರ್ಧರಿಸಿದ್ದೆ’ ಎಂದಿದ್ದಾರೆ ಯಶ್. ರಾಕಿಂಗ್ ಸ್ಟಾರ್ ಬರ್ತ್​ಡೇ ಆಚರಿಸಿಕೊಳ್ಳದೇ ಇರಲು ಒಂದು ಮುಖ್ಯ ಕಾರಣ ಇತ್ತು. ಆದರೆ, ಯಾರೂ ಊಹಿಸದ ಘಟನೆ ನಡೆದಿದ್ದರಿಂದ ಯಶ್ ಸಾಕಷ್ಟು ನೊಂದುಕೊಂಡಿದ್ದಾರೆ.

ಯಾವುದೇ ಸೆಲೆಬ್ರಿಟಿ ಅಭಿಮಾನಿಗಳ ಜೊತೆ ಬರ್ತ್​ಡೇ ಆಚರಿಸಿಕೊಳ್ಳುವುದಿಲ್ಲ ಎಂದರೆ ಅಭಿಮಾನಿಗಳಿಗೆ ಬೇಸರ ಆಗುತ್ತದೆ. ಈ ಬಾರಿ ಯಶ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದಾಗಲೂ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದರು. ಈಗ ನಡೆದಿರುವ ಅವಘಡದಿಂದ ಯಶ್ ಅವರಿಗೆ ಹಾಗೂ ಅಭಿಮಾನಿಗಳಲ್ಲಿ ದುಃಖ ಮಡುಗಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ