AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF-2 ಶೂಟಿಂಗ್ ಪೂರ್ಣವಾದರೂ ಯಶ್​ ಗಡ್ಡಕ್ಕಿಲ್ಲ ಕತ್ತರಿ; ರಾಕಿಂಗ್​ ಸ್ಟಾರ್​ ನಿರ್ಧಾರದ ಹಿಂದಿದೆ ಬಹುದೊಡ್ಡ ಕಾರಣ

ಕೆಜಿಎಫ್​-1 ಶೂಟಿಂಗ್​ ಪೂರ್ಣಗೊಂಡ ನಂತರ ಯಶ್​ ಗಡ್ಡಕ್ಕೆ ರಾಧಿಕಾ ಪಂಡಿತ್​ ಕತ್ತರಿ ಹಾಕಿದ್ದರು. ಇದನ್ನು ವಿಡಿಯೋ ಮಾಡಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು.

KGF-2 ಶೂಟಿಂಗ್ ಪೂರ್ಣವಾದರೂ ಯಶ್​ ಗಡ್ಡಕ್ಕಿಲ್ಲ ಕತ್ತರಿ; ರಾಕಿಂಗ್​ ಸ್ಟಾರ್​ ನಿರ್ಧಾರದ ಹಿಂದಿದೆ ಬಹುದೊಡ್ಡ ಕಾರಣ
ಯಶ್​
ರಾಜೇಶ್ ದುಗ್ಗುಮನೆ
|

Updated on: Apr 07, 2021 | 6:49 PM

Share

ಕೆಜಿಎಫ್ ಚಾಪ್ಟರ್​ 2 ಚಿತ್ರದ ಶೂಟಿಂಗ್​ ಪೂರ್ಣಗೊಂಡು ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಆರಂಭವಾಗಿವೆ. ಜುಲೈ 16ರಂದು ಸಿನಿಮಾ ತೆರೆಗೆ ಬರಲಿದ್ದು, ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಚ್ಚರಿ ಎಂದರೆ, ಕೆಜಿಎಫ್​ ಚಾಪ್ಟರ್​ 2 ಶೂಟಿಂಗ್​ ಪೂರ್ಣಗೊಂಡಿದ್ದರೂ ಯಶ್​ ಗಡ್ಡಕ್ಕೆ ಕತ್ತರಿ ಹಾಕಿಲ್ಲ. ಇದರ ಹಿಂದೆ ಬಹುದೊಡ್ಡ ಕಾರಣವಿದೆಯಂತೆ. ಕೆಜಿಎಫ್​-1 ಶೂಟಿಂಗ್​ ಪೂರ್ಣಗೊಂಡ ನಂತರ ಯಶ್​ ಗಡ್ಡಕ್ಕೆ ರಾಧಿಕಾ ಪಂಡಿತ್​ ಕತ್ತರಿ ಹಾಕಿದ್ದರು. ಇದನ್ನು ವಿಡಿಯೋ ಮಾಡಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಆದರೆ, ಕೆಜಿಎಫ್​-2 ಚಿತ್ರೀಕರಣ ಪೂರ್ಣಗೊಂಡು ಅನೇಕ ತಿಂಗಳು ಕಳೆದರೂ ಯಶ್​ ಗಡ್ಡಕ್ಕೆ ಕತ್ತರಿ ಹಾಕಿಲ್ಲ. ಹೀಗೇಕೆ ಎನ್ನುವ ಪ್ರಶ್ನೆ ಅಭಿಮಾನಿಗಳಿಗೂ ಕಾಡಿತ್ತು.

ಪ್ರಶಾಂತ್​ ನೀಲ್​ ನಿರ್ದೇಶಿಸುವ ಸಿನಿಮಾಗಳು ಅಚ್ಚುಕಟ್ಟಾಗಿ ಮೂಡಿ ಬರುತ್ತವೆ. ಅವರು ಪ್ರತಿ ದೃಶ್ಯ, ಪ್ರತಿ ಡೈಲಾಗ್​ಗಳನ್ನು ಅಳೆದು-ತೂಗಿ ಪೊಣಿಸಿರುತ್ತಾರೆ. ಅವರು ಸಿನಿಮಾ ವಿಚಾರದಲ್ಲಿ ರಾಜಿ ಆದವರೇ ಅಲ್ಲ. ಯಾವುದಾದರೂ ದೃಶ್ಯ ಹೀಗೆ ಮೂಡಿ ಬರಬೇಕು ಎಂದರೆ, ಹಾಗೆಯೇ ಬರಬೇಕು. ಇಲ್ಲವಾದರೆ ಅವರಿಗೆ ಸಮಾಧಾನ ಆಗುವುದೇ ಇಲ್ಲ. ಯಶ್​ ಗಡ್ಡಕ್ಕೆ ಕತ್ತರಿ ಬೀಳದೆ ಇರಲು ಇದುವೇ ಕಾರಣ.

ಈಗಾಗಲೇ ಕೆಜಿಎಫ್​-2 ಎಡಿಟಿಂಗ್​ ಕಾರ್ಯಗಳು ಭರದಿಂದ ಸಾಗಿವೆ. ಸಿನಿಮಾ ಶೂಟಿಂಗ್​ ವೇಳೆ ಪ್ರತಿ ಸೀನ್​ ಪರ್ಫೆಕ್ಟ್​ ಬಂದ ನಂತರವೇ ಪ್ರಶಾಂತ್​ ನೀಲ್ ಶಾಟ್​ ಒಕೆ ಮಾಡುತ್ತಾರೆ. ಆದರೆ, ಕೆಲವೊಮ್ಮೆ ಕಣ್ತಪ್ಪಿನಿಂದ ದೃಶ್ಯಗಳು ಚೆನ್ನಾಗಿ ಮೂಡಿ ಬಂದಿರುವುದಿಲ್ಲ. ಇಂಥ ದೃಶ್ಯಗಳು ಎಡಿಟಿಂಗ್​ನಲ್ಲಿ ಕಂಡರೆ ಅದನ್ನು ರಿ-ಶೂಟ್​ ಮಾಡುವ ಆಲೋಚನೆ ಪ್ರಶಾಂತ್​ ನೀಲ್​ ಅವರದ್ದು. ಈ ಕಾರಣಕ್ಕೆ, ಯಶ್​ಗೆ ಗಡ್ಡ ತೆಗೆಯಬೇಡಿ ಎನ್ನುವ ಸೂಚನೆ ನೀಡಿದ್ದಾರಂತೆ ಪ್ರಶಾಂತ್​ ನೀಲ್​.

ಕೆಜಿಎಫ್​-2 ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಸಂಜಯ್​ ದತ್​ ಸಿನಿಮಾದಲ್ಲಿ ಪ್ರಮುಖ ಖಳನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರವೀನಾ ಟಂಡನ್ ಕೂಡ ಕೆಜಿಎಫ್​-2ನಲ್ಲಿ ಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ. ಜುಲೈ 16ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಪ್ರಶಾಂತ್​ ನೀಲ್​ ಜೊತೆ ದಳಪತಿ ವಿಜಯ್​ ಹೊಸ ಸಿನಿಮಾ? ಕೆಜಿಎಫ್​ ಡೈರೆಕ್ಟರ್​ ಬಗ್ಗೆ ಬಿಗ್​ ನ್ಯೂಸ್​

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ