KGF-2 ಶೂಟಿಂಗ್ ಪೂರ್ಣವಾದರೂ ಯಶ್​ ಗಡ್ಡಕ್ಕಿಲ್ಲ ಕತ್ತರಿ; ರಾಕಿಂಗ್​ ಸ್ಟಾರ್​ ನಿರ್ಧಾರದ ಹಿಂದಿದೆ ಬಹುದೊಡ್ಡ ಕಾರಣ

ಕೆಜಿಎಫ್​-1 ಶೂಟಿಂಗ್​ ಪೂರ್ಣಗೊಂಡ ನಂತರ ಯಶ್​ ಗಡ್ಡಕ್ಕೆ ರಾಧಿಕಾ ಪಂಡಿತ್​ ಕತ್ತರಿ ಹಾಕಿದ್ದರು. ಇದನ್ನು ವಿಡಿಯೋ ಮಾಡಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು.

KGF-2 ಶೂಟಿಂಗ್ ಪೂರ್ಣವಾದರೂ ಯಶ್​ ಗಡ್ಡಕ್ಕಿಲ್ಲ ಕತ್ತರಿ; ರಾಕಿಂಗ್​ ಸ್ಟಾರ್​ ನಿರ್ಧಾರದ ಹಿಂದಿದೆ ಬಹುದೊಡ್ಡ ಕಾರಣ
ಯಶ್​
Follow us
|

Updated on: Apr 07, 2021 | 6:49 PM

ಕೆಜಿಎಫ್ ಚಾಪ್ಟರ್​ 2 ಚಿತ್ರದ ಶೂಟಿಂಗ್​ ಪೂರ್ಣಗೊಂಡು ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಆರಂಭವಾಗಿವೆ. ಜುಲೈ 16ರಂದು ಸಿನಿಮಾ ತೆರೆಗೆ ಬರಲಿದ್ದು, ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಚ್ಚರಿ ಎಂದರೆ, ಕೆಜಿಎಫ್​ ಚಾಪ್ಟರ್​ 2 ಶೂಟಿಂಗ್​ ಪೂರ್ಣಗೊಂಡಿದ್ದರೂ ಯಶ್​ ಗಡ್ಡಕ್ಕೆ ಕತ್ತರಿ ಹಾಕಿಲ್ಲ. ಇದರ ಹಿಂದೆ ಬಹುದೊಡ್ಡ ಕಾರಣವಿದೆಯಂತೆ. ಕೆಜಿಎಫ್​-1 ಶೂಟಿಂಗ್​ ಪೂರ್ಣಗೊಂಡ ನಂತರ ಯಶ್​ ಗಡ್ಡಕ್ಕೆ ರಾಧಿಕಾ ಪಂಡಿತ್​ ಕತ್ತರಿ ಹಾಕಿದ್ದರು. ಇದನ್ನು ವಿಡಿಯೋ ಮಾಡಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಆದರೆ, ಕೆಜಿಎಫ್​-2 ಚಿತ್ರೀಕರಣ ಪೂರ್ಣಗೊಂಡು ಅನೇಕ ತಿಂಗಳು ಕಳೆದರೂ ಯಶ್​ ಗಡ್ಡಕ್ಕೆ ಕತ್ತರಿ ಹಾಕಿಲ್ಲ. ಹೀಗೇಕೆ ಎನ್ನುವ ಪ್ರಶ್ನೆ ಅಭಿಮಾನಿಗಳಿಗೂ ಕಾಡಿತ್ತು.

ಪ್ರಶಾಂತ್​ ನೀಲ್​ ನಿರ್ದೇಶಿಸುವ ಸಿನಿಮಾಗಳು ಅಚ್ಚುಕಟ್ಟಾಗಿ ಮೂಡಿ ಬರುತ್ತವೆ. ಅವರು ಪ್ರತಿ ದೃಶ್ಯ, ಪ್ರತಿ ಡೈಲಾಗ್​ಗಳನ್ನು ಅಳೆದು-ತೂಗಿ ಪೊಣಿಸಿರುತ್ತಾರೆ. ಅವರು ಸಿನಿಮಾ ವಿಚಾರದಲ್ಲಿ ರಾಜಿ ಆದವರೇ ಅಲ್ಲ. ಯಾವುದಾದರೂ ದೃಶ್ಯ ಹೀಗೆ ಮೂಡಿ ಬರಬೇಕು ಎಂದರೆ, ಹಾಗೆಯೇ ಬರಬೇಕು. ಇಲ್ಲವಾದರೆ ಅವರಿಗೆ ಸಮಾಧಾನ ಆಗುವುದೇ ಇಲ್ಲ. ಯಶ್​ ಗಡ್ಡಕ್ಕೆ ಕತ್ತರಿ ಬೀಳದೆ ಇರಲು ಇದುವೇ ಕಾರಣ.

ಈಗಾಗಲೇ ಕೆಜಿಎಫ್​-2 ಎಡಿಟಿಂಗ್​ ಕಾರ್ಯಗಳು ಭರದಿಂದ ಸಾಗಿವೆ. ಸಿನಿಮಾ ಶೂಟಿಂಗ್​ ವೇಳೆ ಪ್ರತಿ ಸೀನ್​ ಪರ್ಫೆಕ್ಟ್​ ಬಂದ ನಂತರವೇ ಪ್ರಶಾಂತ್​ ನೀಲ್ ಶಾಟ್​ ಒಕೆ ಮಾಡುತ್ತಾರೆ. ಆದರೆ, ಕೆಲವೊಮ್ಮೆ ಕಣ್ತಪ್ಪಿನಿಂದ ದೃಶ್ಯಗಳು ಚೆನ್ನಾಗಿ ಮೂಡಿ ಬಂದಿರುವುದಿಲ್ಲ. ಇಂಥ ದೃಶ್ಯಗಳು ಎಡಿಟಿಂಗ್​ನಲ್ಲಿ ಕಂಡರೆ ಅದನ್ನು ರಿ-ಶೂಟ್​ ಮಾಡುವ ಆಲೋಚನೆ ಪ್ರಶಾಂತ್​ ನೀಲ್​ ಅವರದ್ದು. ಈ ಕಾರಣಕ್ಕೆ, ಯಶ್​ಗೆ ಗಡ್ಡ ತೆಗೆಯಬೇಡಿ ಎನ್ನುವ ಸೂಚನೆ ನೀಡಿದ್ದಾರಂತೆ ಪ್ರಶಾಂತ್​ ನೀಲ್​.

ಕೆಜಿಎಫ್​-2 ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಸಂಜಯ್​ ದತ್​ ಸಿನಿಮಾದಲ್ಲಿ ಪ್ರಮುಖ ಖಳನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರವೀನಾ ಟಂಡನ್ ಕೂಡ ಕೆಜಿಎಫ್​-2ನಲ್ಲಿ ಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ. ಜುಲೈ 16ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಪ್ರಶಾಂತ್​ ನೀಲ್​ ಜೊತೆ ದಳಪತಿ ವಿಜಯ್​ ಹೊಸ ಸಿನಿಮಾ? ಕೆಜಿಎಫ್​ ಡೈರೆಕ್ಟರ್​ ಬಗ್ಗೆ ಬಿಗ್​ ನ್ಯೂಸ್​

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ