AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಯ್ ರಾವ್ ‘ಯುದ್ಧಕಾಂಡ’ ಸೇರಿದ ಖ್ಯಾತ ಗಾಯಕ

Ajay Rao: ರವಿಚಂದ್ರನ್ ನಟನೆಯ ‘ಯುದ್ಧಕಾಂಡ’ ಸಿನಿಮಾ ಯಾರಿಗೆ ಗೊತ್ತಿಲ್ಲ. ‘ಸೋಲೆ ಇಲ್ಲ’, ‘ಕುಡಿಯೋದೆ ನನ್ ಬಿಸಿನೆಸ್ಸು’ ಇನ್ನಿತರೆ ಸೂಪರ್ ಹಿಟ್ ಹಾಡುಗಳನ್ನು ಒಳಗೊಂಡ ಸಿನಿಮಾ ಅದು. ಇದೀಗ ಅದೇ ಹೆಸರಿನ ಸಿನಿಮಾ ಮತ್ತೆ ಬರುತ್ತಿದೆ. ಈ ಸಿನಿಮಾದಲ್ಲಿ ಅಜಯ್ ರಾವ್ ನಾಯಕ. ಮೊದಲ ಸಿನಿಮಾದಂತೆ ಹಾಡುಗಳನ್ನು ಬಂಪರ್ ಹಿಟ್ ಮಾಡಿಸುವ ಪ್ರಯತ್ನದಲ್ಲಿದೆ ಚಿತ್ರತಂಡ. ಹಾಗಾಗಿ ವಿಶೇಷ ಗಾಯಕರೊಬ್ಬರನ್ನು ಕನ್ನಡಕ್ಕೆ ಕರೆತಂದಿದ್ದಾರೆ.

ಅಜಯ್ ರಾವ್ ‘ಯುದ್ಧಕಾಂಡ’ ಸೇರಿದ ಖ್ಯಾತ ಗಾಯಕ
Yudha Kanda
ಮಂಜುನಾಥ ಸಿ.
|

Updated on: Feb 15, 2025 | 9:53 AM

Share

ರವಿಚಂದ್ರನ್ ನಟನೆಯ ‘ಯುದ್ಧಕಾಂಡ’ ಸಿನಿಮಾ ಯಾರಿಗೆ ನೆನಪಿಲ್ಲ ಹೇಳಿ. ಆ ಸಿನಿಮಾದ ‘ಸೋಲೆ ಇಲ್ಲ’, ‘ಕುಡಿಯೋದೆ ನನ್ ಬಿಸಿನೆಸ್ಸು’ ಇನ್ನೂ ಕೆಲ ಹಾಡುಗಳು ಇಂದಿಗೂ ಜನಪ್ರಿಯ. ಅನ್ಯಾಯದ ವಿರುದ್ಧ ಹೋರಾಡುವ ವಕೀಲನ ಕತೆಯನ್ನು ಹೊಂದಿದ್ದ ಆ ಸಿನಿಮಾ, ತಾಯಿ ಸೆಂಟಿಮೆಂಟ್ ಅನ್ನೂ ಒಳಗೊಂಡಿತ್ತು. ಕೊಲೆಯೊಂದರ ಸುತ್ತ ನಡೆಯುವ ಕತೆ ಹೊಂದಿದ್ದ ಆ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಇದೀಗ ಮತ್ತೊಮ್ಮೆ ‘ಯುದ್ಧಕಾಂಡ’ ಸಿನಿಮಾ ಬರುತ್ತಿದೆ. ಈ ಬಾರಿಯೂ ಸಹ ವಕೀಲನ ಕತೆಯನ್ನೇ ಸಿನಿಮಾ ಒಳಗೊಂಡಿದೆ. ಸಿನಿಮಾದ ನಾಯಕ ಅಜಯ್ ರಾವ್.

ಅಜಯ್ ರಾವ್, ‘ಯುದ್ಧಕಾಂಡ’ ಸಿನಿಮಾದಲ್ಲಿ ನಟಿಸುತ್ತಿದ್ದು, ಇದೂ ಸಹ ಕೋರ್ಟ್ ಡ್ರಾಮಾ ಉಳ್ಳ ಕತೆಯಾಗಿದೆ. ಮೂಲ ‘ಯುದ್ಧಕಾಂಡ’ ಸಿನಿಮಾದಲ್ಲಿ ಇರುವಂತೆ ಈ ಸಿನಿಮಾದಲ್ಲಿಯೂ ಸಹ ಮದರ್ ಸೆಂಟಿಮೆಂಟ್ ಇದೆಯಂತೆ. ಆದರೆ ಅದರ ಜೊತೆಗೆ ಈ ಸಿನಿಮಾ ಹೆಣ್ಣುಮಕ್ಕಳ ರಕ್ಷಣೆ, ಅವರ ಹಕ್ಕುಗಳು, ಹೆಣ್ಣು ಮಕ್ಕಳನ್ನು ಸಮಾಜ ನೋಡುವ ಬಗೆಯ ಬಗ್ಗೆ ಚರ್ಚೆ ಮಾಡುತ್ತದೆಯಂತೆ. ಯುವತಿಯೊಬ್ಬಾಕೆಯ ಕೊಲೆ ಆ ನಂತರ ನಡೆಯುವ ಘಟನೆಗಳ ಕತೆಯನ್ನು ‘ಯುದ್ಧಕಾಂಡ’ ಸಿನಿಮಾ ಒಳಗೊಂಡಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಕ್ಲಾಂತ’ ಟ್ರೈಲರ್ ಬಿಡುಗಡೆ ಮಾಡಿದ ಅಜಯ್ ರಾವ್, ಇದು ನಿಗೂಢ ಕತೆ

ಇನ್ನು ಇತ್ತೀಚೆಗಷ್ಟೆ ‘ಯುದ್ಧಕಾಂಡ’ ಸಿನಿಮಾ ತಂಡವನ್ನು ದಕ್ಷಿಣ ಭಾರತದ ಖ್ಯಾತ ಗಾಯಕರೊಬ್ಬರು ಸೇರಿಕೊಂಡರು. ಮೋಹನ್​ಲಾಲ್ ಪುತ್ರ ಪ್ರಣವ್ ಮೋಹನ್​ಲಾಲ್ ನಟನೆಯ ‘ಹೃದಯಂ’ ಸಿನಿಮಾದ ‘ದರ್ಶನಾ’ ಎಂಬ ಜನಪ್ರಿಯ ಹಾಡು ಹಾಡಿರುವ ಮಲಯಾಳಿ ಗಾಯಕ ಹೇಷಮ್ ಅದ್ಭುಲ್ ವಹಾಬ್ ‘ಯುದ್ಧಕಾಂಡ’ ಸಿನಿಮಾಕ್ಕೆ ಹಾಡೊಂದನ್ನು ಹಾಡಿದ್ದಾರೆ. ಈ ಹಾಡು, ಅಜಯ್ ರಾವ್ ಅವರ ಇಂಟ್ರೊಡಕ್ಷನ್ ಹಾಡಾಗಿರಲಿದೆ.

ಹೇಷಮ್ ಅದ್ಭುಲ್ ವಹಾಬ್ ಸ್ವತಃ ಸಂಗೀತ ನಿರ್ದೇಶಕರಾಗಿದ್ದು ಇದೀಗ ಅಜಯ್ ರಾವ್ ಅವರ ಸಿನಿಮಾಕ್ಕೆ ಧ್ವನಿ ನೀಡಿದ್ದಾರೆ. ಅಜಯ್ ರಾವ್ ಅವರ ‘ಯುದ್ಧಕಾಂಡ’ ಸಿನಿಮಾಕ್ಕೆ ಕೆಬಿ ಪ್ರವೀಣ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ಕಟ್ಟಿಂಗ್ ಶಾಪ್’ ಸಿನಿಮಾ ನಿರ್ದೇಶಿಸಿದ್ದ ಪ್ರವೀಣ್ ಭಟ್ ಅವರು ‘ಯುದ್ಧಕಾಂಡ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಯುದ್ಧಕಾಂಡ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಸಿನಿಮಾ ಏಪ್ರಿಲ್​ನಲ್ಲಿ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ