AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೇ ಪ್ರಭು’ ಸಿನಿಮಾದ ಮೋಟಿವೇಷನಲ್ ಹಾಡು ಬಿಡುಗಡೆ; ವೆಂಕಟ್ ಭಾರದ್ವಾಜ್ ನಿರ್ದೇಶನ

ಟಿಪ್ಸ್ ಕನ್ನಡ ಯೂಟ್ಯೂಬ್ ಚಾನೆಲ್ ಮೂಲಕ ‘ಎದ್ದೇಳೋ ಈಗ..’ ಹಾಡನ್ನು ಬಿಡುಗಡೆ ಮಾಡಲಾಗಿದೆ. ‘ಹೇ ಪ್ರಭು’ ಸಿನಿಮಾದ ಈ ಹಾಡಿಗೆ ಡ್ಯಾನಿ ಆಂಡರ್ಸನ್ ಸಂಗೀತ ನೀಡಿದ್ದಾರೆ. ತೇಜಸ್ವಿ ಹರಿದಾಸ್ ಹಾಡಿದ್ದಾರೆ. ಅರಸು ಅಂತಾರೆ ಅವರು ಸಾಹಿತ್ಯ ಬರೆದಿದ್ದಾರೆ. ಸಿನಿಮಾದ ಕಥೆಯ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

‘ಹೇ ಪ್ರಭು’ ಸಿನಿಮಾದ ಮೋಟಿವೇಷನಲ್ ಹಾಡು ಬಿಡುಗಡೆ; ವೆಂಕಟ್ ಭಾರದ್ವಾಜ್ ನಿರ್ದೇಶನ
Hey Prabhu Movie Poster
ಮದನ್​ ಕುಮಾರ್​
|

Updated on: Oct 24, 2025 | 4:26 PM

Share

ನಿರ್ದೇಶಕ ವೆಂಕಟ್ ಭಾರದ್ವಾಜ್ (Venkat Bharadwaj) ಅವರು ‘ಹೇ ಪ್ರಭು’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಈ ಚಿತ್ರದಿಂದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ‘ಎದ್ದೇಳೋ ಈಗ..’ ಎಂಬ ಈ ಹಾಡಿನಲ್ಲಿ ಸ್ಫೂರ್ತಿದಾಯಕ ಸಾಲುಗಳು ಇವೆ. ತೇಜಸ್ವಿ ಹರಿದಾಸ್ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಆತ್ಮವಿಶ್ವಾಸ ಮತ್ತು ಹೋರಾಟದ ಮನೋಭಾವವನ್ನು ಈ ಹಾಡು ಪ್ರತಿಬಿಂಬಿಸುತ್ತದೆ ಎಂದು ‘ಹೇ ಪ್ರಭು’ (Hey Prabhu) ಚಿತ್ರತಂಡ ಹೇಳಿದೆ. ಅರಸು ಅಂತಾರೆ ಅವರು ‘ಎದ್ದೇಳೋ ಈಗ..’ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಡ್ಯಾನಿ ಆಂಡರ್ಸನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

‘ಹೇ ಪ್ರಭು’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ಜಯವರ್ಧನ್, ಸಂಹಿತಾ ವಿನ್ಯ, ಗಜಾನನ ಹೆಗ್ಡೆ, ಯಮುನಾ ಶ್ರೀನಿಧಿ, ಲಕ್ಷ್ಮಣ ಶಿವಶಂಕರ, ಡಾ. ಪ್ರಮೊದ್, ಹರಿ ಧನಂಜಯ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ‘ಅಮೃತ ಫಿಲ್ಮ್ ಸೆಂಟರ್’ ಮತ್ತು ‘24 ರೀಲ್ಸ್’ ಸಂಸ್ಥೆಗಳ ಜೊತೆಯಾಗಿ ಈ ಸಿನಿಮಾ ನಿರ್ಮಾಣ ಮಾಡಿವೆ.

ಡಾ. ಸುಧಾಕರ್ ಶೆಟ್ಟಿ ಅವರು ‘ಹೇ ಪ್ರಭು’ ಸಿನಿಮಾವನ್ನು ಪ್ರಸ್ತುತಪಡಿಸಿದ್ದಾರೆ. ನೈಜ ಘಟನೆಯ ಆಧಾರಿಸಿ ಈ ಸಿನಿಮಾ ಸಿದ್ಧವಾಗಿದೆ. ಒಂದು ಜಾಗತಿಕ ಸಮಸ್ಯೆಯ ಕುರಿತು ಈ ಸಿನಿಮಾ ಬೆಳಕು ಚೆಲ್ಲಿದೆ. ಔಷಧ ಕಂಪನಿಗಳ ನಿಯಂತ್ರಣರಹಿತ ಪ್ರಭಾವ ಮತ್ತು ಲಾಲಸೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಇತ್ತೀಚಿಗೆ ಚರ್ಚೆಗೆ ಬಂದ ಮಕ್ಕಳ ಕೆಮ್ಮಿನ ಸಿರಪ್ ವಿವಾದದ ಹಿನ್ನೆಲೆಯಲ್ಲಿ ಈ ಸಿನಿಮಾ ಪ್ರಸ್ತುತ ಎನಿಸುಕೊಳ್ಳುತ್ತದೆ ಎಂದು ಚಿತ್ರತಂಡ ಹೇಳಿದೆ.

ಶಮೀಕ್ ವಿ. ಭರದ್ವಾಜ ಅವರು ಸಂಕಲನ ಮಾಡಿದ್ದಾರೆ. ಲಕ್ಷ್ಮಣ್ ಶಿವಶಂಕರ್, ಪ್ರವೀಣ್, ವೆಂಕಟ್ ಭಾರದ್ವಾಜ್ ಅವರು ಸಂಭಾಷಣೆ ಬರೆದಿದ್ದಾರೆ. ಪ್ರಮೋದ್ ಭಾರತೀಯ ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ. ಲಾರೆನ್ಸ್ ಪ್ರೀತಮ್ ರವರ ಸಹ ನಿರ್ದೇಶನ ಈ ಸಿನಿಮಾಗಿದೆ. ‘ಈ ಚಿತ್ರವು ಭಾರತದ ಜನರ ಪರವಾಗಿ ಮಾತನಾಡುತ್ತದೆ’ ಎಂದು ನಿರ್ದೇಶಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್