‘ಹೇ ಪ್ರಭು’ ಸಿನಿಮಾದ ಮೋಟಿವೇಷನಲ್ ಹಾಡು ಬಿಡುಗಡೆ; ವೆಂಕಟ್ ಭಾರದ್ವಾಜ್ ನಿರ್ದೇಶನ

ಟಿಪ್ಸ್ ಕನ್ನಡ ಯೂಟ್ಯೂಬ್ ಚಾನೆಲ್ ಮೂಲಕ ‘ಎದ್ದೇಳೋ ಈಗ..’ ಹಾಡನ್ನು ಬಿಡುಗಡೆ ಮಾಡಲಾಗಿದೆ. ‘ಹೇ ಪ್ರಭು’ ಸಿನಿಮಾದ ಈ ಹಾಡಿಗೆ ಡ್ಯಾನಿ ಆಂಡರ್ಸನ್ ಸಂಗೀತ ನೀಡಿದ್ದಾರೆ. ತೇಜಸ್ವಿ ಹರಿದಾಸ್ ಹಾಡಿದ್ದಾರೆ. ಅರಸು ಅಂತಾರೆ ಅವರು ಸಾಹಿತ್ಯ ಬರೆದಿದ್ದಾರೆ. ಸಿನಿಮಾದ ಕಥೆಯ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

‘ಹೇ ಪ್ರಭು’ ಸಿನಿಮಾದ ಮೋಟಿವೇಷನಲ್ ಹಾಡು ಬಿಡುಗಡೆ; ವೆಂಕಟ್ ಭಾರದ್ವಾಜ್ ನಿರ್ದೇಶನ
Hey Prabhu Movie Poster

Updated on: Oct 24, 2025 | 4:26 PM

ನಿರ್ದೇಶಕ ವೆಂಕಟ್ ಭಾರದ್ವಾಜ್ (Venkat Bharadwaj) ಅವರು ‘ಹೇ ಪ್ರಭು’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಈ ಚಿತ್ರದಿಂದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ‘ಎದ್ದೇಳೋ ಈಗ..’ ಎಂಬ ಈ ಹಾಡಿನಲ್ಲಿ ಸ್ಫೂರ್ತಿದಾಯಕ ಸಾಲುಗಳು ಇವೆ. ತೇಜಸ್ವಿ ಹರಿದಾಸ್ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಆತ್ಮವಿಶ್ವಾಸ ಮತ್ತು ಹೋರಾಟದ ಮನೋಭಾವವನ್ನು ಈ ಹಾಡು ಪ್ರತಿಬಿಂಬಿಸುತ್ತದೆ ಎಂದು ‘ಹೇ ಪ್ರಭು’ (Hey Prabhu) ಚಿತ್ರತಂಡ ಹೇಳಿದೆ. ಅರಸು ಅಂತಾರೆ ಅವರು ‘ಎದ್ದೇಳೋ ಈಗ..’ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಡ್ಯಾನಿ ಆಂಡರ್ಸನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

‘ಹೇ ಪ್ರಭು’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ಜಯವರ್ಧನ್, ಸಂಹಿತಾ ವಿನ್ಯ, ಗಜಾನನ ಹೆಗ್ಡೆ, ಯಮುನಾ ಶ್ರೀನಿಧಿ, ಲಕ್ಷ್ಮಣ ಶಿವಶಂಕರ, ಡಾ. ಪ್ರಮೊದ್, ಹರಿ ಧನಂಜಯ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ‘ಅಮೃತ ಫಿಲ್ಮ್ ಸೆಂಟರ್’ ಮತ್ತು ‘24 ರೀಲ್ಸ್’ ಸಂಸ್ಥೆಗಳ ಜೊತೆಯಾಗಿ ಈ ಸಿನಿಮಾ ನಿರ್ಮಾಣ ಮಾಡಿವೆ.

ಡಾ. ಸುಧಾಕರ್ ಶೆಟ್ಟಿ ಅವರು ‘ಹೇ ಪ್ರಭು’ ಸಿನಿಮಾವನ್ನು ಪ್ರಸ್ತುತಪಡಿಸಿದ್ದಾರೆ. ನೈಜ ಘಟನೆಯ ಆಧಾರಿಸಿ ಈ ಸಿನಿಮಾ ಸಿದ್ಧವಾಗಿದೆ. ಒಂದು ಜಾಗತಿಕ ಸಮಸ್ಯೆಯ ಕುರಿತು ಈ ಸಿನಿಮಾ ಬೆಳಕು ಚೆಲ್ಲಿದೆ. ಔಷಧ ಕಂಪನಿಗಳ ನಿಯಂತ್ರಣರಹಿತ ಪ್ರಭಾವ ಮತ್ತು ಲಾಲಸೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಇತ್ತೀಚಿಗೆ ಚರ್ಚೆಗೆ ಬಂದ ಮಕ್ಕಳ ಕೆಮ್ಮಿನ ಸಿರಪ್ ವಿವಾದದ ಹಿನ್ನೆಲೆಯಲ್ಲಿ ಈ ಸಿನಿಮಾ ಪ್ರಸ್ತುತ ಎನಿಸುಕೊಳ್ಳುತ್ತದೆ ಎಂದು ಚಿತ್ರತಂಡ ಹೇಳಿದೆ.

ಶಮೀಕ್ ವಿ. ಭರದ್ವಾಜ ಅವರು ಸಂಕಲನ ಮಾಡಿದ್ದಾರೆ. ಲಕ್ಷ್ಮಣ್ ಶಿವಶಂಕರ್, ಪ್ರವೀಣ್, ವೆಂಕಟ್ ಭಾರದ್ವಾಜ್ ಅವರು ಸಂಭಾಷಣೆ ಬರೆದಿದ್ದಾರೆ. ಪ್ರಮೋದ್ ಭಾರತೀಯ ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ. ಲಾರೆನ್ಸ್ ಪ್ರೀತಮ್ ರವರ ಸಹ ನಿರ್ದೇಶನ ಈ ಸಿನಿಮಾಗಿದೆ. ‘ಈ ಚಿತ್ರವು ಭಾರತದ ಜನರ ಪರವಾಗಿ ಮಾತನಾಡುತ್ತದೆ’ ಎಂದು ನಿರ್ದೇಶಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us