ನಿಖಿಲ್ ಮದುವೆ: ಸರ್ಕಾರದ ವಾದಕ್ಕೆ ಕೋರ್ಟ್ ಗರಂ, ಮತ್ತೆ ವರದಿಗೆ ಸೂಚನೆ

ಬೆಂಗಳೂರು: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮದುವೆಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದಕ್ಕೆ ಹೈಕೋರ್ಟ್ ಅಚ್ಚರಿಪಟ್ಟಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಲ್ಲ. ಕೇಂದ್ರ ಸರ್ಕಾರ ಲಾಕ್​ಡೌನ್ ಅವಧಿಯಲ್ಲಿ ಸಮಾರಂಭಗಳನ್ನು ನಿರ್ಬಂಧಿಸಿತ್ತು. ಜನಸಾಮಾನ್ಯರಿಗೆ ಸಮಾರಂಭ ನಡೆಸಲು ಅನುಮತಿ ನೀಡಿಲ್ಲ. ಹೀಗಿದ್ದಾಗ ಮದುವೆ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಅನುಮತಿ ನೀಡಬಹುದೇ? ಈ ಬಗ್ಗೆ ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ […]

ನಿಖಿಲ್ ಮದುವೆ: ಸರ್ಕಾರದ ವಾದಕ್ಕೆ ಕೋರ್ಟ್ ಗರಂ, ಮತ್ತೆ ವರದಿಗೆ ಸೂಚನೆ
ಸಾಧು ಶ್ರೀನಾಥ್​

Updated on: May 05, 2020 | 5:18 PM

ಬೆಂಗಳೂರು: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮದುವೆಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದಕ್ಕೆ ಹೈಕೋರ್ಟ್ ಅಚ್ಚರಿಪಟ್ಟಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಲ್ಲ.

ಕೇಂದ್ರ ಸರ್ಕಾರ ಲಾಕ್​ಡೌನ್ ಅವಧಿಯಲ್ಲಿ ಸಮಾರಂಭಗಳನ್ನು ನಿರ್ಬಂಧಿಸಿತ್ತು. ಜನಸಾಮಾನ್ಯರಿಗೆ ಸಮಾರಂಭ ನಡೆಸಲು ಅನುಮತಿ ನೀಡಿಲ್ಲ. ಹೀಗಿದ್ದಾಗ ಮದುವೆ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಅನುಮತಿ ನೀಡಬಹುದೇ? ಈ ಬಗ್ಗೆ ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ನಿಖಿಲ್ ಮದುವೆ ನಡೆದಿತ್ತು. ಮದುವೆ ಸಮಾರಂಭಕ್ಕೆ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು? ಈ ಬಗ್ಗೆಯೂ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚಿಸಿದೆ.

Published On - 5:15 pm, Tue, 5 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us