AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

#BoycottBanaras ಟ್ರೆಂಡ್​ ಶುರು; ಜಮೀರ್​ ಪುತ್ರನ ‘ಬನಾರಸ್​’ ಚಿತ್ರಕ್ಕೆ ಹಿಂದೂ ಕಾರ್ಯಕರ್ತರ ವಿರೋಧ

Zameer Ahmed | Zaid Khan: ಜಮೀರ್​ ಅಹ್ಮದ್​ ಪುತ್ರ ಜೈದ್​ ಖಾನ್​ ಅವರು ರಾಜಕೀಯದ ಕಡೆಗೆ ತಲೆ ಹಾಕಿಲ್ಲ. ಅವರಿಗೆ ಸಿನಿಮಾ ಮೇಲೆ ಆಸಕ್ತಿ ಇದೆ. ಆದರೆ ಅವರ ಮೊದಲ ಚಿತ್ರ ‘ಬನಾರಸ್​’ಗೆ ಬಹಿಷ್ಕಾರದ ಭೀತಿ ಕಾಡುತ್ತಿದೆ.

#BoycottBanaras ಟ್ರೆಂಡ್​ ಶುರು; ಜಮೀರ್​ ಪುತ್ರನ ‘ಬನಾರಸ್​’ ಚಿತ್ರಕ್ಕೆ ಹಿಂದೂ ಕಾರ್ಯಕರ್ತರ ವಿರೋಧ
ಜೈದ್ ಖಾನ್, ಜಮೀರ್ ಅಹ್ಮದ್
TV9 Web
| Edited By: |

Updated on: Sep 03, 2022 | 4:13 PM

Share

ಸಾಕಷ್ಟು ಕನಸುಗಳನ್ನು ಹೊತ್ತುಕೊಂಡು ನಟ ಜೈದ್​ ಖಾನ್​ (Zaid Khan) ಅವರು ಚಿತ್ರರಂಗ ಪ್ರವೇಶಿಸಿದ್ದಾರೆ. ಅವರ ಚೊಚ್ಚಲ ಸಿನಿಮಾ ‘ಬನಾರಸ್​’ (Banaras Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ಜಯತೀರ್ಥ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಜೈದ್​ ಖಾನ್​ಗೆ ಜೋಡಿಯಾಗಿ ಸೋನಲ್​ ಮಾಂಥೆರೋ ನಟಿಸಿದ್ದಾರೆ. ನವೆಂಬರ್​ 4ರಂದು ‘ಬನಾರಸ್​’ ಸಿನಿಮಾ ಬಿಡುಗಡೆ ಆಗುತ್ತದೆ ಎಂದು ಇತ್ತೀಚೆಗಷ್ಟೇ ಘೋಷಣೆ ಮಾಡಲಾಗಿದೆ. ಅದರ ಬೆನ್ನಲ್ಲೇ ಈ ಚಿತ್ರವನ್ನು ಬಹಿಷ್ಕರಿಸುವಂತೆ ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಮಾಡಲಾಗುತ್ತಿದೆ. ಹಿಂದೂ ಕಾರ್ಯಕರ್ತರು #BoycottBanaras ಎಂದು ಟ್ರೆಂಡ್​ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ಜೈದ್​ ಖಾನ್​ ಅವರ ತಂದೆ ಜಮೀರ್​ ಅಹ್ಮದ್​ (Zameer Ahmed) ಅವರ ರಾಜಕೀಯದ ನಿಲುವುಗಳು. ಹೌದು, ಜಮೀರ್​ ಅವರ ರಾಜಕೀಯದಿಂದಾಗಿ ಅವರ ಮಗನ ಸಿನಿಮಾಗೆ ಬಹಿಷ್ಕಾರದ ಬಿಸಿ ತಟ್ಟುತ್ತಿದೆ.

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅಡ್ಡಿಪಡಿಸಿದ್ದಕ್ಕಾಗಿ ಹಿಂದೂ ಕಾರ್ತಕರ್ತರು ಜಮೀರ್​ ಅಹ್ಮದ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಡಿಕೆ ಹಳ್ಳಿ, ಕೆಜಿ ಹಳ್ಳಿ ಗಲಭೆಗಳನ್ನು ಕೂಡ ನೆನಪಿಸಿಕೊಳ್ಳಲಾಗುತ್ತಿದೆ. ಗಲಭೆ ನಡೆಸಿದ ಆರೋಪಿಗಳಿಗೆ ಜಾಮೀನು ಒದಗಿಸಲು ಬೆಂಬಲ ನೀಡಿದ್ದರು ಎಂದು ಕೂಡ ಜಮೀರ್​ ವಿರುದ್ಧ ಹಿಂದೂ ಕಾರ್ಯಕರ್ತರು ಗರಂ ಆಗಿದ್ದಾರೆ. ಹಾಗಾಗಿ ಅವರ ಪುತ್ರನ ಸಿನಿಮಾವನ್ನು ಬಹಿಷ್ಕರಿಸಲು ಕರೆ ನೀಡಲಾಗುತ್ತಿದೆ.

ಇದನ್ನೂ ಓದಿ
Image
Banaras: ಜಮೀರ್​ ಅಹ್ಮದ್​ ಪುತ್ರ ಜೈದ್​ ಖಾನ್​ ಬದ್ಧತೆಗೆ ಭೇಷ್​ ಎಂದ ‘ಬನಾರಸ್​’ ನಿರ್ದೇಶಕ ಜಯತೀರ್ಥ
Image
Maayagange Song: ‘ಬನಾರಸ್​’ ಮೊದಲ ಗೀತೆ ‘ಮಾಯಾಗಂಗೆ’ ಬಗ್ಗೆ ನಾಗೇಂದ್ರ ಪ್ರಸಾದ್​ ಮನದ ಮಾತು
Image
ಅಪ್ಪು ಸಮಾಧಿ ಬಳಿ ಶಾಸಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್
Image
ಶಾಸಕ ಜಮೀರ್ ಅಹಮದ್​ ಪುತ್ರ ಝೈದ್​ ಖಾನ್​ ದಾಖಲೆ; ಭಾರಿ ಮೊತ್ತಕ್ಕೆ ಲಹರಿ, ಟಿ ಸಿರೀಸ್​ ಪಾಲಾಯ್ತು ‘ಬನಾರಸ್​’ ಆಡಿಯೋ

ಚಿತ್ರರಂಗದ ಪಾಲಿಗೆ ಬಹಿಷ್ಕಾರ ಎಂಬುದು ದೊಡ್ಡ ಸಮಸ್ಯೆಯಾಗಿದೆ. ಎಷ್ಟೇ ಕಷ್ಟಪಟ್ಟು ಸಿನಿಮಾ ಮಾಡಿದರೂ ಜನರಿಂದ ಬಹಿಷ್ಕಾರಕ್ಕೆ ಒಳಗಾದರೆ ಈ ಚಿತ್ರಕ್ಕೆ ಹೀನಾಯ ಸೋಲು ಉಂಟಾಗುವ ಸಾಧ್ಯತೆ ಇರುತ್ತದೆ. ಬಾಲಿವುಡ್​ನಲ್ಲಿ ಅನೇಕ ಸಿನಿಮಾಗಳನ್ನು ಜನರು ಈ ರೀತಿ ಸೋಲಿಸಿದ್ದಾರೆ. ನಟ-ನಟಿಯರು ಈ ಹಿಂದೆ ನೀಡಿದ ಹೇಳಿಕೆಗಳು ಕೂಡ ನೆನಪಿನಲ್ಲಿ ಇಟ್ಟುಕೊಂಡು ಜನರು ಅವರ ಸಿನಿಮಾಗಳನ್ನು ಬಹಿಷ್ಕಾರ ಮಾಡುತ್ತಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಬಹಿಷ್ಕಾರದ ಟ್ರೆಂಡ್​ ಈಗ ಕನ್ನಡ ಚಿತ್ರರಂಗಕ್ಕೂ ಕಾಲಿಟ್ಟಿದೆ.

ಜಮೀರ್​ ಅಹ್ಮದ್​ ಪುತ್ರ ಜೈದ್​ ಖಾನ್​ ಅವರು ರಾಜಕೀಯದ ಕಡೆಗೆ ತಲೆ ಹಾಕಿಲ್ಲ. ಅವರ ಆಸಕ್ತಿ ಏನಿದ್ದರೂ ಸಿನಿಮಾ ಮೇಲಿದೆ. ಮೊದಲ ಚಿತ್ರಕ್ಕಾಗಿ ಅವರು ಸಕಲ ತಯಾರಿ ಮಾಡಿಕೊಂಡು ಕ್ಯಾಮೆರಾ ಎದುರಿಸಿದ್ದಾರೆ. ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್ ಹಿಟ್​ ಆಗಿದೆ. ಆದರೆ ಪೋಸ್ಟರ್​ಗಳನ್ನು ನೋಡಿ ಕೆಲವರು ಕಿರಿಕ್​ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಬಿಡುಗಡೆಗೂ ಮುನ್ನವೇ ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ