#BoycottBanaras ಟ್ರೆಂಡ್​ ಶುರು; ಜಮೀರ್​ ಪುತ್ರನ ‘ಬನಾರಸ್​’ ಚಿತ್ರಕ್ಕೆ ಹಿಂದೂ ಕಾರ್ಯಕರ್ತರ ವಿರೋಧ

| Updated By: ಮದನ್​ ಕುಮಾರ್​

Updated on: Sep 03, 2022 | 4:13 PM

Zameer Ahmed | Zaid Khan: ಜಮೀರ್​ ಅಹ್ಮದ್​ ಪುತ್ರ ಜೈದ್​ ಖಾನ್​ ಅವರು ರಾಜಕೀಯದ ಕಡೆಗೆ ತಲೆ ಹಾಕಿಲ್ಲ. ಅವರಿಗೆ ಸಿನಿಮಾ ಮೇಲೆ ಆಸಕ್ತಿ ಇದೆ. ಆದರೆ ಅವರ ಮೊದಲ ಚಿತ್ರ ‘ಬನಾರಸ್​’ಗೆ ಬಹಿಷ್ಕಾರದ ಭೀತಿ ಕಾಡುತ್ತಿದೆ.

#BoycottBanaras ಟ್ರೆಂಡ್​ ಶುರು; ಜಮೀರ್​ ಪುತ್ರನ ‘ಬನಾರಸ್​’ ಚಿತ್ರಕ್ಕೆ ಹಿಂದೂ ಕಾರ್ಯಕರ್ತರ ವಿರೋಧ
ಜೈದ್ ಖಾನ್, ಜಮೀರ್ ಅಹ್ಮದ್
Follow us on

ಸಾಕಷ್ಟು ಕನಸುಗಳನ್ನು ಹೊತ್ತುಕೊಂಡು ನಟ ಜೈದ್​ ಖಾನ್​ (Zaid Khan) ಅವರು ಚಿತ್ರರಂಗ ಪ್ರವೇಶಿಸಿದ್ದಾರೆ. ಅವರ ಚೊಚ್ಚಲ ಸಿನಿಮಾ ‘ಬನಾರಸ್​’ (Banaras Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ಜಯತೀರ್ಥ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಜೈದ್​ ಖಾನ್​ಗೆ ಜೋಡಿಯಾಗಿ ಸೋನಲ್​ ಮಾಂಥೆರೋ ನಟಿಸಿದ್ದಾರೆ. ನವೆಂಬರ್​ 4ರಂದು ‘ಬನಾರಸ್​’ ಸಿನಿಮಾ ಬಿಡುಗಡೆ ಆಗುತ್ತದೆ ಎಂದು ಇತ್ತೀಚೆಗಷ್ಟೇ ಘೋಷಣೆ ಮಾಡಲಾಗಿದೆ. ಅದರ ಬೆನ್ನಲ್ಲೇ ಈ ಚಿತ್ರವನ್ನು ಬಹಿಷ್ಕರಿಸುವಂತೆ ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಮಾಡಲಾಗುತ್ತಿದೆ. ಹಿಂದೂ ಕಾರ್ಯಕರ್ತರು #BoycottBanaras ಎಂದು ಟ್ರೆಂಡ್​ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ಜೈದ್​ ಖಾನ್​ ಅವರ ತಂದೆ ಜಮೀರ್​ ಅಹ್ಮದ್​ (Zameer Ahmed) ಅವರ ರಾಜಕೀಯದ ನಿಲುವುಗಳು. ಹೌದು, ಜಮೀರ್​ ಅವರ ರಾಜಕೀಯದಿಂದಾಗಿ ಅವರ ಮಗನ ಸಿನಿಮಾಗೆ ಬಹಿಷ್ಕಾರದ ಬಿಸಿ ತಟ್ಟುತ್ತಿದೆ.

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅಡ್ಡಿಪಡಿಸಿದ್ದಕ್ಕಾಗಿ ಹಿಂದೂ ಕಾರ್ತಕರ್ತರು ಜಮೀರ್​ ಅಹ್ಮದ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಡಿಕೆ ಹಳ್ಳಿ, ಕೆಜಿ ಹಳ್ಳಿ ಗಲಭೆಗಳನ್ನು ಕೂಡ ನೆನಪಿಸಿಕೊಳ್ಳಲಾಗುತ್ತಿದೆ. ಗಲಭೆ ನಡೆಸಿದ ಆರೋಪಿಗಳಿಗೆ ಜಾಮೀನು ಒದಗಿಸಲು ಬೆಂಬಲ ನೀಡಿದ್ದರು ಎಂದು ಕೂಡ ಜಮೀರ್​ ವಿರುದ್ಧ ಹಿಂದೂ ಕಾರ್ಯಕರ್ತರು ಗರಂ ಆಗಿದ್ದಾರೆ. ಹಾಗಾಗಿ ಅವರ ಪುತ್ರನ ಸಿನಿಮಾವನ್ನು ಬಹಿಷ್ಕರಿಸಲು ಕರೆ ನೀಡಲಾಗುತ್ತಿದೆ.

ಇದನ್ನೂ ಓದಿ
Banaras: ಜಮೀರ್​ ಅಹ್ಮದ್​ ಪುತ್ರ ಜೈದ್​ ಖಾನ್​ ಬದ್ಧತೆಗೆ ಭೇಷ್​ ಎಂದ ‘ಬನಾರಸ್​’ ನಿರ್ದೇಶಕ ಜಯತೀರ್ಥ
Maayagange Song: ‘ಬನಾರಸ್​’ ಮೊದಲ ಗೀತೆ ‘ಮಾಯಾಗಂಗೆ’ ಬಗ್ಗೆ ನಾಗೇಂದ್ರ ಪ್ರಸಾದ್​ ಮನದ ಮಾತು
ಅಪ್ಪು ಸಮಾಧಿ ಬಳಿ ಶಾಸಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್
ಶಾಸಕ ಜಮೀರ್ ಅಹಮದ್​ ಪುತ್ರ ಝೈದ್​ ಖಾನ್​ ದಾಖಲೆ; ಭಾರಿ ಮೊತ್ತಕ್ಕೆ ಲಹರಿ, ಟಿ ಸಿರೀಸ್​ ಪಾಲಾಯ್ತು ‘ಬನಾರಸ್​’ ಆಡಿಯೋ

ಚಿತ್ರರಂಗದ ಪಾಲಿಗೆ ಬಹಿಷ್ಕಾರ ಎಂಬುದು ದೊಡ್ಡ ಸಮಸ್ಯೆಯಾಗಿದೆ. ಎಷ್ಟೇ ಕಷ್ಟಪಟ್ಟು ಸಿನಿಮಾ ಮಾಡಿದರೂ ಜನರಿಂದ ಬಹಿಷ್ಕಾರಕ್ಕೆ ಒಳಗಾದರೆ ಈ ಚಿತ್ರಕ್ಕೆ ಹೀನಾಯ ಸೋಲು ಉಂಟಾಗುವ ಸಾಧ್ಯತೆ ಇರುತ್ತದೆ. ಬಾಲಿವುಡ್​ನಲ್ಲಿ ಅನೇಕ ಸಿನಿಮಾಗಳನ್ನು ಜನರು ಈ ರೀತಿ ಸೋಲಿಸಿದ್ದಾರೆ. ನಟ-ನಟಿಯರು ಈ ಹಿಂದೆ ನೀಡಿದ ಹೇಳಿಕೆಗಳು ಕೂಡ ನೆನಪಿನಲ್ಲಿ ಇಟ್ಟುಕೊಂಡು ಜನರು ಅವರ ಸಿನಿಮಾಗಳನ್ನು ಬಹಿಷ್ಕಾರ ಮಾಡುತ್ತಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಬಹಿಷ್ಕಾರದ ಟ್ರೆಂಡ್​ ಈಗ ಕನ್ನಡ ಚಿತ್ರರಂಗಕ್ಕೂ ಕಾಲಿಟ್ಟಿದೆ.

ಜಮೀರ್​ ಅಹ್ಮದ್​ ಪುತ್ರ ಜೈದ್​ ಖಾನ್​ ಅವರು ರಾಜಕೀಯದ ಕಡೆಗೆ ತಲೆ ಹಾಕಿಲ್ಲ. ಅವರ ಆಸಕ್ತಿ ಏನಿದ್ದರೂ ಸಿನಿಮಾ ಮೇಲಿದೆ. ಮೊದಲ ಚಿತ್ರಕ್ಕಾಗಿ ಅವರು ಸಕಲ ತಯಾರಿ ಮಾಡಿಕೊಂಡು ಕ್ಯಾಮೆರಾ ಎದುರಿಸಿದ್ದಾರೆ. ಈ ಸಿನಿಮಾದ ‘ಮಾಯಗಂಗೆ..’ ಹಾಡು ಸೂಪರ್ ಹಿಟ್​ ಆಗಿದೆ. ಆದರೆ ಪೋಸ್ಟರ್​ಗಳನ್ನು ನೋಡಿ ಕೆಲವರು ಕಿರಿಕ್​ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಬಿಡುಗಡೆಗೂ ಮುನ್ನವೇ ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.