AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 19ಕ್ಕೆ ಬಿಡುಗಡೆ ಆಗಲಿದೆ ‘ಹಿರಣ್ಯ’: ವಿಶೇಷ ಪಾತ್ರದಲ್ಲಿ ದಿವ್ಯಾ ಸುರೇಶ್

ಹಿರಣ್ಯ ಕನ್ನಡ ಸಿನಿಮಾ ಜುಲೈ 19ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ರಾಜವರ್ಧನ್ ನಾಯಕನಾಗಿ ನಟಿಸಿದ್ದು, ರಿಹಾನಾ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದಲ್ಲಿ ಬಿಗ್​ಬಾಸ್ ಚೆಲುವೆ ದಿವ್ಯಾ ಸುರೇಶ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ಜುಲೈ 19ಕ್ಕೆ ಬಿಡುಗಡೆ ಆಗಲಿದೆ 'ಹಿರಣ್ಯ': ವಿಶೇಷ ಪಾತ್ರದಲ್ಲಿ ದಿವ್ಯಾ ಸುರೇಶ್
ಮಂಜುನಾಥ ಸಿ.
|

Updated on: Jul 17, 2024 | 10:50 PM

Share

ರಾಜವರ್ಧನ್‌ ನಾಯಕರಾಗಿರುವ ‘ಹಿರಣ್ಯ’ ಸಿನಿಮಾ ಹಲವು ಕಾರಣಗಳಿಗೆ ಗಮನ ಸೆಳೆದಿದೆ. ಈ ಸಿನಿಮಾ ಜುಲೈ 19ಕ್ಕೆ ಬಿಡುಗಡೆ ಆಗುತ್ತಿದ್ದು, ಇದೀಗ ಸಿನಿಮಾದ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ‘ಬೈಲಾ ಬೈಲಾ ’ ಎಂಬ ಈ ಹಾಡಿಗೆ ಮಾಜಿ ಬಿಗ್​ಬಾಸ್ ಚೆಲುವೆ ದಿವ್ಯಾ ಸುರೇಶ್ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ನಿರ್ದೇಶಕ ಪ್ರವೀಣ್ ಅವ್ಯುಕ್ತ್ ಬರೆದ ಸಾಹಿತ್ಯಕ್ಕೆ ಶಮಿತಾ ಮಲ್ನಾಡ್ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಹಾಡಿಗೆ ಸಂಗೀತ ನೀಡಿದ್ದಾರೆ.

ಈಗಾಗಲೇ ಹಲವು ಕಿರು ಚಿತ್ರಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯುಕ್ತ್ ‘ಹಿರಣ್ಯ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ‘ಹಿರಣ್ಯ’ ಸಿನಿಮಾದಲ್ಲಿ ರಾಜವರ್ಧನ್‌ ನಾಯಕನಾಗಿ ನಟಿಸಿದ್ದು ಅವರಿಗೆ ನಾಯಕಿಯಾಗಿ ರಿಹಾನಾ ನಟಿಸಿದ್ದಾರೆ. ಈ ಸಿನಿಮಾದ ಮೂಲಕ ರಿಹಾನಾ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ.

ಇದನ್ನೂ ಓದಿ:‘ಪುಷ್ಪ 2’ ಸಿನಿಮಾ ಫ್ಲಾಪ್ ಆದರೂ ‘ಕೆಜಿಎಫ್ 2’ ದಾಖಲೆ ಮುರಿಯುತ್ತೆ: ನಿರ್ಮಾಪಕ

ಆ್ಯಕ್ಷನ್‌-ಥ್ರಿಲ್ಲರ್‌ ಜೊತೆಗೆ ತಾಯಿ ಸೆಂಟಿಮೆಂಟ್‌ ಕತೆಯನ್ನು ‘ಹಿರಣ್ಯ’ ಸಿನಿಮಾ ಒಳಗೊಂಡಿದೆ. “ಹಿರಣ್ಯ’ ಸಿನಿಮಾದಲ್ಲಿ ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ವೇದಾಸ್‌ ಇನ್ಫಿನಿಟಿ ಪಿಕ್ಚರ್’ ಬ್ಯಾನರ್‌ನಲ್ಲಿ ವಿಘ್ನೇಶ್ವರ ಯು. ಹಾಗೂ ವಿಜಯ್‌ ಕುಮಾರ್‌ ಬಿ. ವಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಹಿರಣ್ಯ’ ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?