AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 19ಕ್ಕೆ ಬಿಡುಗಡೆ ಆಗಲಿದೆ ‘ಹಿರಣ್ಯ’: ವಿಶೇಷ ಪಾತ್ರದಲ್ಲಿ ದಿವ್ಯಾ ಸುರೇಶ್

ಹಿರಣ್ಯ ಕನ್ನಡ ಸಿನಿಮಾ ಜುಲೈ 19ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ರಾಜವರ್ಧನ್ ನಾಯಕನಾಗಿ ನಟಿಸಿದ್ದು, ರಿಹಾನಾ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದಲ್ಲಿ ಬಿಗ್​ಬಾಸ್ ಚೆಲುವೆ ದಿವ್ಯಾ ಸುರೇಶ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ಜುಲೈ 19ಕ್ಕೆ ಬಿಡುಗಡೆ ಆಗಲಿದೆ 'ಹಿರಣ್ಯ': ವಿಶೇಷ ಪಾತ್ರದಲ್ಲಿ ದಿವ್ಯಾ ಸುರೇಶ್
ಮಂಜುನಾಥ ಸಿ.
|

Updated on: Jul 17, 2024 | 10:50 PM

Share

ರಾಜವರ್ಧನ್‌ ನಾಯಕರಾಗಿರುವ ‘ಹಿರಣ್ಯ’ ಸಿನಿಮಾ ಹಲವು ಕಾರಣಗಳಿಗೆ ಗಮನ ಸೆಳೆದಿದೆ. ಈ ಸಿನಿಮಾ ಜುಲೈ 19ಕ್ಕೆ ಬಿಡುಗಡೆ ಆಗುತ್ತಿದ್ದು, ಇದೀಗ ಸಿನಿಮಾದ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ‘ಬೈಲಾ ಬೈಲಾ ’ ಎಂಬ ಈ ಹಾಡಿಗೆ ಮಾಜಿ ಬಿಗ್​ಬಾಸ್ ಚೆಲುವೆ ದಿವ್ಯಾ ಸುರೇಶ್ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ನಿರ್ದೇಶಕ ಪ್ರವೀಣ್ ಅವ್ಯುಕ್ತ್ ಬರೆದ ಸಾಹಿತ್ಯಕ್ಕೆ ಶಮಿತಾ ಮಲ್ನಾಡ್ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಹಾಡಿಗೆ ಸಂಗೀತ ನೀಡಿದ್ದಾರೆ.

ಈಗಾಗಲೇ ಹಲವು ಕಿರು ಚಿತ್ರಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯುಕ್ತ್ ‘ಹಿರಣ್ಯ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ‘ಹಿರಣ್ಯ’ ಸಿನಿಮಾದಲ್ಲಿ ರಾಜವರ್ಧನ್‌ ನಾಯಕನಾಗಿ ನಟಿಸಿದ್ದು ಅವರಿಗೆ ನಾಯಕಿಯಾಗಿ ರಿಹಾನಾ ನಟಿಸಿದ್ದಾರೆ. ಈ ಸಿನಿಮಾದ ಮೂಲಕ ರಿಹಾನಾ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ.

ಇದನ್ನೂ ಓದಿ:‘ಪುಷ್ಪ 2’ ಸಿನಿಮಾ ಫ್ಲಾಪ್ ಆದರೂ ‘ಕೆಜಿಎಫ್ 2’ ದಾಖಲೆ ಮುರಿಯುತ್ತೆ: ನಿರ್ಮಾಪಕ

ಆ್ಯಕ್ಷನ್‌-ಥ್ರಿಲ್ಲರ್‌ ಜೊತೆಗೆ ತಾಯಿ ಸೆಂಟಿಮೆಂಟ್‌ ಕತೆಯನ್ನು ‘ಹಿರಣ್ಯ’ ಸಿನಿಮಾ ಒಳಗೊಂಡಿದೆ. “ಹಿರಣ್ಯ’ ಸಿನಿಮಾದಲ್ಲಿ ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ವೇದಾಸ್‌ ಇನ್ಫಿನಿಟಿ ಪಿಕ್ಚರ್’ ಬ್ಯಾನರ್‌ನಲ್ಲಿ ವಿಘ್ನೇಶ್ವರ ಯು. ಹಾಗೂ ವಿಜಯ್‌ ಕುಮಾರ್‌ ಬಿ. ವಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಹಿರಣ್ಯ’ ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ